ಕೃಷಿ ವಿಜ್ಞಾನಿಗಳಿಂದ ಕಬ್ಬಿನ ಬೆಳೆ ಪರಿಶೀಲನೆ


Team Udayavani, Dec 28, 2020, 3:48 PM IST

ಕೃಷಿ ವಿಜ್ಞಾನಿಗಳಿಂದ ಕಬ್ಬಿನ ಬೆಳೆ ಪರಿಶೀಲನೆ

ರಾಣಿಬೆನ್ನೂರ: ಹನುಮನಮಟ್ಟಿ ಕೃಷಿವಿಜ್ಞಾನ ಕೇಂದ್ರದ ವಿಜ್ಞಾನಿಗಳು ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಕಬ್ಬಿನ ಬೆಳೆಯ ತಾಕಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ ನಡೆಸಿದರು.

ಈ ವೇಳೆ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ| ಅಶೋಕ ಪಿ. ಮಾತನಾಡಿ, ಕಬ್ಬಿನ ಬೆಳೆಯು ಲಘು ಪೋಷಕಾಂಶವಾದಕಬ್ಬಿಣದ ಕೊರತೆಯಿಂದಾಗಿದ್ದು, ಇದಕ್ಕೆ ರೈತರು ಕೇದಿಗೆ ರೋಗ, ಹಳದಿ ರೋಗ ಎಂದುಕರೆಯುತ್ತಾರೆ. ಲಘು ಪೋಷಕಾಂಶಗಳ ಕೊರತೆ ಹೆಚ್ಚಾಗಿ ಕಬ್ಬು ಬಿಳುಚಿಕೊಳ್ಳುವುದು ಇತ್ತೀಚಿನದಿನಗಳಲ್ಲಿ ಪ್ರಮುಖವಾದ ಸಮಸ್ಯೆಯಾಗಿದೆ.ಪ್ರಥಮ ಹಂತದಲ್ಲಿ ಕೊರತೆಯೂ ಇದ್ದರುಸಹ ಬೆಳೆ ಅದನ್ನು ತೋರ್ಪಡಿಸುವುದಿಲ್ಲ. ಈಲಕ್ಷಣವನ್ನು ಹಿಡನ್‌ ಹಂಗರ್‌ ಎಂದು ಕರೆಯಲಾಗುತ್ತದೆ ಎಂದರು.

ಇದಕ್ಕೆ ಮುಖ್ಯಕಾರಣಗಳೆಂದರೆ ಕೊಟ್ಟಿಗೆ ಗೊಬ್ಬರಗಳ ಬಳಕೆಯ ಪ್ರಮಾಣ ಕಡಿಮೆ ಆಗಿರುವುದು, ಲಘು ಪೋಷಕಾಂಶಗಳ ಬಳಕೆ ಇಲ್ಲದಿರುವುದು, ಕಬ್ಬಿನ ನಂತರ ಕಬ್ಬು ಬೆಳೆ ಯೋಜನೆ, ಭೂಮಿಯಲ್ಲಿ ಲವಣಾಂಶ/ ಸವಳು ಹೆಚ್ಚಾಗಿರುವುದು, ಜವಳು ಮತ್ತು ಕ್ಷಾರ ಭೂಮಿಯಲ್ಲಿ ಕಬ್ಬಿಣದ ಅಂಶ ಬೆಳೆಗೆ ಲಭ್ಯವಾಗಲಾರದೆ ಕೊರತೆ ಹೆಚ್ಚು, ಕ್ಯಾಲ್ಸಿಯಂ ಹೆಚ್ಚಾಗಿರುವ ಎರೆ ಭೂಮಿಯಲ್ಲಿ ಕಬ್ಬಿಣದ ಅಂಶ ಬೆಳೆಗೆ ಲಭ್ಯವಾಗಲಾರದೆ ಕೊರತೆ ಉಂಟಾಗುವುದು ಮತ್ತು ಮರಳು/ಗರಸು/ಮಡ್ಡಿ ಜಮೀನಿನಲ್ಲಿ ಲಘು ಪೋಷಕಾಂಶಗಳ ಲಭ್ಯತೆ ಕಡಿಮೆಯಾಗಿ ಫಲವತ್ತತೆಕಡಿಮೆ ಇರುವುದರಿಂದ ಬಿಳಿಚಿನ ಲಕ್ಷಣ ಹೆಚ್ಚಾಗಿ ಕಂಡು ಬರುತ್ತಿದೆ ಎಂದರು.

ಕಬ್ಬಿಣದ ಕೊರತೆಯನ್ನು ನಿವಾರಿಸಲು ಕಬ್ಬನ್ನು ನಾಟಿ ಮಾಡುವಾಗ ಎಕರೆಗೆ 10 ಟನ್‌ ಕೊಟ್ಟಿಗೆ ಗೊಬ್ಬರ ಅಥವಾ ಕಾಂಪೋಸ್ಟ್‌ ಅನ್ನು ಭೂಮಿಗೆ ಹಾಕಬೇಕು. ಶಿಫಾರಸ್ಸು ಮಾಡಿದ ರಾಸಾಯನಿಕಗೊಬ್ಬರದೊಡನೆ ನಾಟಿ ಮಾಡುವಾಗ 10 ಕೆ.ಜಿಕಬ್ಬಿಣದ ಸಲ್ಪೇಟ ಅನ್ನು ಸುಮಾರು 50 ಕೆ.ಜಿ.ಎರೆಹುಳು ಗೊಬ್ಬರದೊಡನೆ ಬೆರೆಸಿ, ನೀರುಚಿಮುಕಿಸಿ ಒಂದು ರಾತ್ರಿ ಇಟ್ಟು ಮರುದಿನ ಕಬ್ಬು ಹಚ್ಚುವ ಸಾಲುಗಳಲ್ಲಿ ಭೂಮಿಗೆ ಸೇರಿಸಬೇಕು. ಇದರಿಂದ ಮಣ್ಣಿನ ಫಲವತ್ತತೆ ವೃದ್ಧಿಯಾಗುವುದು ಎಂದರು.

ವಿಜ್ಞಾನಿಗಳಾದ ಡಾ| ರಾಜಕುಮಾರ ಜಿ.ಆರ್‌. ಮತ್ತು ಡಾ|ಶಾಂತವೀರಯ್ಯ ಅವರು ರೈತರಿಗೆ ಸೂಕ್ತ ಮಾಹಿತಿ ನೀಡಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.