ಕನಿಷ್ಠ ವೇತನ ಜಾರಿಯಾಗದಿದ್ದರೆ ಆತ್ಮಹತ್ಯೆ ಎಚ್ಚರಿಕೆ
ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಸಂಘದಿಂದ ಪ್ರತಿಭಟನೆ
Team Udayavani, Jul 1, 2019, 1:39 PM IST
ಹಾವೇರಿ: ಗ್ರಂಥಾಲಯ ಮೇಲ್ವಿಚಾರಕರು ಡಿಸಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ಹಾವೇರಿ: ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಕೂಡಲೇ ಕನಿಷ್ಠ ವೇತನ ಜಾರಿ ಮಾಡಬೇಕು ಇಲ್ಲದಿದ್ದರೆ ಜಿಲ್ಲೆ ಎಲ್ಲ ಗ್ರಂಥಾಲಯ ಮೇಲ್ವಿಚಾರಕರು ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿ ಎದುರು ಪ್ರತಿಭಟನೆ ಜತೆಗೆ ಆತ್ಮಹತ್ಯೆ ಮಾಡಿಕೊಳ್ಳಲು ಸಹ ಸಿದ್ಧರಾಗಿದ್ದೇವೆ. ನಮ್ಮ ಸಾವಿಗೆ ಸರ್ಕಾರ, ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರು ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರ ಸಂಘದ ನೇತೃತ್ವದಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಈ ಕುರಿತು ಶುಕ್ರವಾರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಗ್ರಾಪಂ ಗ್ರಂಥಾಲಯಗಳಲ್ಲಿ ಕಳೆದ 30ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇವೆ. ಮೊದಲು ಗ್ರಂಥಾಲಯ ಸಮಯ ಎಂಟು ತಾಸು ಇದ್ದು ಗೌರವಧನ 300ರೂ.ಗಳಿಂದ 5500ರೂ. ವರೆಗೆ ಇತ್ತು. 5-8-2016ರಲ್ಲಿ ಕಾರ್ಮಿಕ ಇಲಾಖೆಯು ನಮಗೆ 13200ರೂ. ಕನಿಷ್ಠ ವೇತನ ನಿಗದಿ ಮಾಡಿದ್ದು ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿತು. ಇದಾದ ನಂತರ ನಮಗೆ ಗ್ರಂಥಾಲಯ ಸಮಯವನ್ನು ನಾಲ್ಕು ತಾಸು ಎಂದು ಬದಲಾವಣೆ ಮಾಡಿ, 7000ರೂ. ಗೌರವಧನ ನಿಗದಿಪಡಿಸಿ, ಕನಿಷ್ಠ ವೇತನ ತಡೆಹಿಡಿಯಲಾಗಿದೆ. ಕನಿಷ್ಠ ವೇತನ ನೀಡುವಂತೆ ಹಲವು ಬಾರಿ ಪ್ರತಿಭಟನೆ, ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಂಥಾಲಯ ಮೇಲ್ವಿಚಾರಕರು ಮನವಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಅನೇಕ ಗ್ರಂಥಾಲಯ ಮೇಲ್ವಿಚಾರಕರು ನಿವೃತ್ತಿ ಹೊಂದಿದ್ದು, ಸಾವಿರಾರು ಜನರು ನಿವೃತ್ತಿ ಅಂಚಿನಲ್ಲಿದ್ದಾರೆ. ಗ್ರಂಥಾಲಯ ಮೇಲ್ವಿಚಾರಕರ ಕುಟುಂಬಕ್ಕೆ ಗ್ರಂಥಾಲಯ ಇಲಾಖೆ ಹಾಗೂ ಸರ್ಕಾರದಿಂದ ಯಾವುದೇ ಸೌಲಭ್ಯ ಇಲ್ಲ. ಹೀಗಾಗಿ ಗ್ರಂಥಾಲಯ ಮೇಲ್ವಿಚಾರಕರು ಕುಟುಂಬ ನಿರ್ವಹಣೆ ಮಾಡಲಾಗದೆ ಹತ್ತಾರು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಸರ್ಕಾರ ಈಗಲಾದರೂ ಎಚ್ಚೆತ್ತು ಕೆಲಸದ ಅವಯನ್ನು ಮೊದಲಿದ್ದಂತೆ ಎಂಟು ತಾಸು ಮಾಡಿ ಕನಿಷ್ಠ ವೇತನ 13200ರೂ. ನೀಡಬೇಕು ಎಂದು ಕೋರಿದ್ದಾರೆ.
ಮನವಿ ಸಲ್ಲಿಕೆ ವೇಳೆ ಸಂಘಟನೆಯ ಅಧ್ಯಕ್ಷ ನಾಗರಾಜ ಚಲವಾದಿ, ಉಪಾಧ್ಯಕ್ಷ ಎಂ.ಎಫ್. ಕಮ್ಮಾರ, ಫಕ್ಕೀರಗೌಡ ಪಾಟೀಲ, ರೇಣುಕಾ ಹುರಳಿ, ಹುಚ್ಚಪ್ಪ ದ್ಯಾವಕ್ಕನವರ, ಪ್ರಕಾಶ ಅಗಸರ, ಜಗದೀಶ ಅಂಬಿಗೇರ, ಎಂ.ಟಿ. ಕರಿಯಣ್ಣನವರ, ವಿ.ಜಿ. ಪಾಟೀಲ, ಶ್ರೀಕಾಂತ ಕಜ್ಜರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು