ರವಿವಾರ ಲಾಕ್ಡೌನ್ಗೆ ಜಿಲ್ಲೆ ಸಂಪೂರ್ಣ ಸ್ತಬ್ಧ
Team Udayavani, Jul 20, 2020, 11:18 AM IST
ಹಾವೇರಿ: ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕರೆ ನೀಡಿರುವ ರವಿವಾರದ ಲಾಕ್ ಡೌನ್ಗೆ ಜಿಲ್ಲೆಯ ಜನತೆ ಬೆಂಬಲ ನೀಡಿದ್ದು ರವಿವಾರ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿತ್ತು. ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರವಿವಾರ ಬೆಳಗ್ಗೆಯಿಂದಲೇ ಬಹುತೇಕ ಎಲ್ಲ ವ್ಯಾಪಾರ- ವ್ಯವಹಾರ ಬಂದ್ ಆಗಿತ್ತು. ರಸ್ತೆಯಲ್ಲಿ ಜನ ಸಂಚಾರ, ಸಾರಿಗೆ ಬಸ್, ಖಾಸಗಿ ವಾಹನಗಳ ಸಂಚಾರವೂ ಸಂಪೂರ್ಣ ಬಂದ್ ಆಗಿತ್ತು.
ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಬೆಳಗ್ಗೆ 7ಗಂಟೆಯಿಂದಲೇ ಪೊಲೀಸರು ಕರ್ಫ್ಯೂ ನಿಯಮ ಪಾಲನೆಗಾಗಿ ನಿರತರಾಗಿದ್ದರು. ಹಾಲು, ತರಕಾರಿ ಮಾರಾಟಕ್ಕೂ ಅವಕಾಶ ನೀಡಲಿಲ್ಲ. ಹೀಗಾಗಿ ಜನರು ಹಾಲು, ತರಕಾರಿಗಾಗಿ ಪರದಾಡಬೇಕಾಯಿತು. ನಗರದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಿದರು. ಈ ನಡುವೆ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ದಂಡ ಹಾಕಿ ಬಿಸಿ ಮುಟ್ಟಿಸಿದರು.
ಜಿಲ್ಲೆಯ ಉಳಿದ ಕಡೆಗಳಲ್ಲಿ ಬೆಳಗ್ಗೆ 9ಗಂಟೆ ವರೆಗೆ ಹಾಲು ಮಾರಾಟ ಕೇಂದ್ರ ಹಾಗೂ ಕೆಲ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಉಳಿದಂತೆ ಹೋಟೆಲ್, ಹಣ್ಣು-ತರಕಾರಿ ಮಾರುಕಟ್ಟೆ, ಹೂ ಮಾರಾಟ ಬಂದ್ ಆಗಿತ್ತು. ಬಸ್ ಸಂಚಾರ ಸಹ ಸ್ಥಗಿತವಾಗಿತ್ತು. ತರಕಾರಿ ಮಾರುಕಟ್ಟೆ, ಜನದಟ್ಟಣೆಯಿಂದ ಕೂಡಿರುತ್ತಿದ್ದ ರಸ್ತೆಗಳು, ನಗರದ ವಿವಿಧ ಪ್ರಮುಖ ವೃತ್ತಗಳು ಜನರಿಲ್ಲದೆ ಭಣಭಣ ಎನಿಸಿದವು. ಬಸ್, ಆಟೋ ಸೇರಿದಂತೆ ಯಾವುದೇ ಸಾರಿಗೆ ಸಂಚಾರವಿಲ್ಲದೇ ರಸ್ತೆಗಳು ಬಿಕೋ ಎಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ