ಜನತಾ ಕರ್ಫ್ಯೂಗೆ ಜನ ಬೆಂಬಲ


Team Udayavani, Mar 23, 2020, 6:25 PM IST

ಜನತಾ ಕರ್ಫ್ಯೂಗೆ ಜನ ಬೆಂಬಲ

ರಾಣಿಬೆನ್ನೂರ: ದೇಶದಲ್ಲಿ ಕೋವಿಡ್ 19 ವೈರಸ್‌ ಮಹಾಮಾರಿ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂ ನಗರ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ರವಿವಾರ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಮನೆಯಲ್ಲಿಯೇ ಉಳಿದು ಸಂಪೂರ್ಣ ಯಶಸ್ವಿಯಾಯಿತು.

ಬೆಳಗ್ಗೆ 7 ಗಂಟೆಯಿಂದಲೇ ದಿನವೀಡಿ ಬಸ್‌, ಆಟೋ, ಮತ್ತಿತರರ ವಾಹನಗಳು ಸಂಚರಿಸಲಿಲ್ಲ, ಕೆಲವೊಂದು ಪ್ರಯಾಣಿಕರಿಗೆ ವಾಹನಗಳಿಲ್ಲದೆಸಂಚಾರಕ್ಕೆ ಅಡತಡೆಯಾಗಿದ್ದು ಕಂಡು ಬಂದಿತು. ಸರಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳು ರಜೆ ಇದ್ದ ಪ್ರಯುತ್ತ ವಿದ್ಯಾರ್ಥಿಗಳು ಕಂಡು ಬರಲಿಲ್ಲ, ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳು ಬೆಂಬಲ ವ್ಯಕ್ತಪಡಿಸಿದ್ದವು.

ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಯಲ್ಲಿ ಜನತಾ ಕರ್ಫ್ಯೂವಿಗೆ ಬೆಂಬಲ ನೀಡಲು ಸರ್ವರೂ ಮನೆಯಿಂದ ಹೊರಬರಬಾರದು ಎಂದು ಡಂಗೂರ ಸಾರಿದ್ದರಿಂದ ಯಾರೊಬ್ಬರೂ ಮನೆಯಿಂದ ಹೊರಗೆ ಬರಲಿಲ್ಲ. ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಬಸ್‌ ನಿಲ್ದಾಣ ಮತ್ತು ಡಿಪೋದಲ್ಲಿ ಬಸ್ಸುಗಳು ಕಾಣಲಿಲ್ಲ, ಎಲ್ಲ ಬಸ್‌ಗಳನ್ನು ಡಿಪೋದಲ್ಲಿಯೇ ನಿಂತಿದ್ದರಿಂದ ಬಸ್‌ ನಿಲ್ದಾಣ ಬಿಕೋ ಎನ್ನುತ್ತಿತ್ತು. ಈ ಮೊದಲೇ ಜನತಾ ಕರ್ಫ್ಯೂ ಘೋಷಣೆಯಾದ್ದರಿಂದ ಪ್ರಯಾಣಿಕರು ಕಂಡು ಬರಲಿಲ್ಲ, ಹಾಗಾಗಿ ಜನರು ಮನೆಯಿಂದ ಹೊರಗಡೆ ಬರದೆ ಜನತಾ ಕರ್ಫ್ಯೂವಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಯಿತು. ಎಪಿಎಂಸಿ ದನದ ಮಾರುಕಟ್ಟೆ, ನೆಹರು ಮತ್ತು ದೊಡ್ಡಪೇಟೆ ತರಕಾರಿ ಮಾರುಕಟ್ಟೆ, ದಲಾಳ್ಳಿ ಅಂಗಡಿಗಳು, ಸರಕಾರಿ ಕಚೇರಿಗಳು, ಅಂಗಡಿ-ಮುಗ್ಗಟ್ಟುಗಳು, ಚಲನಚಿತ್ರ ಮಂದಿರಗಳು, ಹೋಟೆಲ್‌ಗ‌ಳು, ಬಾರ್‌ಗಳು, ರೆಸ್ಟೋರೆಂಟ್‌ಗಳು, ಸಾರ್ವಜನಿಕ ಆಸ್ಪತ್ರೆ ಹೊರತು ಪಡಿಸಿದರೆ, ಖಾಸಗಿ ಆಸ್ಪತ್ರೆಗಳು, ಕಿರಾಣಿ, ಬಟ್ಟೆ ಮತ್ತಿತರ ಅಂಗಡಿಗಳು ಬಾಗಿಲು ಮುಚ್ಚಿದ್ದರಿಂದ ನಗರ ಬಿಕೋ ಎನ್ನುತ್ತಿತ್ತು. ಜನಜೀವನ ಎಂದಿನಂತೆ ಸಹಜವಾಗಿ ಕಂಡು ಬರಲಿಲ್ಲ.

ರೈಲು ನಿಲ್ದಾಣ, ಅಂಚೆ ವೃತ್ತ ಮತ್ತಿತರ ಜನನಿಬೀಡು ಪ್ರದೇಶಗಳಲ್ಲಿ ಜನಜಂಗುಳಿ ಕಂಡು ಬರಲಿಲ್ಲ, ಒಟ್ಟಾರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಜನರ ಸಂಚಾರ ಕಂಡು ಬರದೆ ಜನತಾ ಕರ್ಫ್ಯೂ ಯಶಸ್ವಿಯಾಗಿದ್ದು, ಕಂಡು ಬಂದಿತು. ಕೋವಿಡ್ 19 ವೈರಸ್‌ ಮಹಾಮಾರಿಗೆ ಬೆದರಿದ ಜನರು ಸ್ವಯಂಪ್ರೇರಿತರಾಗಿ ಮನೆಯ ಹೊರಗೆ ಕಂಡು ಬರಲಿಲ್ಲ. ವರ್ತಕರು, ಹಮಾಲರು, ವ್ಯಾಪಾರಸ್ಥರು, ಬಾರ್‌ ಗಳು, ರೈತ ಸಂಘಗಳು, ಆಟೋ ಸಂಘ, ಕನ್ನಡಪರ ಸಂಘಟನೆಗಳು, ಹೋಟೆಲ್‌ ಉದ್ಯಮಿ, ಜವಳಿ, ಬಂಗಾರದ ಅಂಗಡಿಗಳ ಸಂಘಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಸ್ವಯಂಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಬೆಂಬಲ ನೀಡಿದ್ದರಿಂದ ಯಶಸ್ವಿಯಾಗಿ ಸಾಕ್ಷಿಯಾಯಿತು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.