ಜನತಾ ಕರ್ಫ್ಯೂಗೆ ಜನ ಬೆಂಬಲ
Team Udayavani, Mar 23, 2020, 6:25 PM IST
ರಾಣಿಬೆನ್ನೂರ: ದೇಶದಲ್ಲಿ ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂ ನಗರ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ರವಿವಾರ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಮನೆಯಲ್ಲಿಯೇ ಉಳಿದು ಸಂಪೂರ್ಣ ಯಶಸ್ವಿಯಾಯಿತು.
ಬೆಳಗ್ಗೆ 7 ಗಂಟೆಯಿಂದಲೇ ದಿನವೀಡಿ ಬಸ್, ಆಟೋ, ಮತ್ತಿತರರ ವಾಹನಗಳು ಸಂಚರಿಸಲಿಲ್ಲ, ಕೆಲವೊಂದು ಪ್ರಯಾಣಿಕರಿಗೆ ವಾಹನಗಳಿಲ್ಲದೆಸಂಚಾರಕ್ಕೆ ಅಡತಡೆಯಾಗಿದ್ದು ಕಂಡು ಬಂದಿತು. ಸರಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳು ರಜೆ ಇದ್ದ ಪ್ರಯುತ್ತ ವಿದ್ಯಾರ್ಥಿಗಳು ಕಂಡು ಬರಲಿಲ್ಲ, ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳು ಬೆಂಬಲ ವ್ಯಕ್ತಪಡಿಸಿದ್ದವು.
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಯಲ್ಲಿ ಜನತಾ ಕರ್ಫ್ಯೂವಿಗೆ ಬೆಂಬಲ ನೀಡಲು ಸರ್ವರೂ ಮನೆಯಿಂದ ಹೊರಬರಬಾರದು ಎಂದು ಡಂಗೂರ ಸಾರಿದ್ದರಿಂದ ಯಾರೊಬ್ಬರೂ ಮನೆಯಿಂದ ಹೊರಗೆ ಬರಲಿಲ್ಲ. ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಬಸ್ ನಿಲ್ದಾಣ ಮತ್ತು ಡಿಪೋದಲ್ಲಿ ಬಸ್ಸುಗಳು ಕಾಣಲಿಲ್ಲ, ಎಲ್ಲ ಬಸ್ಗಳನ್ನು ಡಿಪೋದಲ್ಲಿಯೇ ನಿಂತಿದ್ದರಿಂದ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು. ಈ ಮೊದಲೇ ಜನತಾ ಕರ್ಫ್ಯೂ ಘೋಷಣೆಯಾದ್ದರಿಂದ ಪ್ರಯಾಣಿಕರು ಕಂಡು ಬರಲಿಲ್ಲ, ಹಾಗಾಗಿ ಜನರು ಮನೆಯಿಂದ ಹೊರಗಡೆ ಬರದೆ ಜನತಾ ಕರ್ಫ್ಯೂವಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಯಿತು. ಎಪಿಎಂಸಿ ದನದ ಮಾರುಕಟ್ಟೆ, ನೆಹರು ಮತ್ತು ದೊಡ್ಡಪೇಟೆ ತರಕಾರಿ ಮಾರುಕಟ್ಟೆ, ದಲಾಳ್ಳಿ ಅಂಗಡಿಗಳು, ಸರಕಾರಿ ಕಚೇರಿಗಳು, ಅಂಗಡಿ-ಮುಗ್ಗಟ್ಟುಗಳು, ಚಲನಚಿತ್ರ ಮಂದಿರಗಳು, ಹೋಟೆಲ್ಗಳು, ಬಾರ್ಗಳು, ರೆಸ್ಟೋರೆಂಟ್ಗಳು, ಸಾರ್ವಜನಿಕ ಆಸ್ಪತ್ರೆ ಹೊರತು ಪಡಿಸಿದರೆ, ಖಾಸಗಿ ಆಸ್ಪತ್ರೆಗಳು, ಕಿರಾಣಿ, ಬಟ್ಟೆ ಮತ್ತಿತರ ಅಂಗಡಿಗಳು ಬಾಗಿಲು ಮುಚ್ಚಿದ್ದರಿಂದ ನಗರ ಬಿಕೋ ಎನ್ನುತ್ತಿತ್ತು. ಜನಜೀವನ ಎಂದಿನಂತೆ ಸಹಜವಾಗಿ ಕಂಡು ಬರಲಿಲ್ಲ.
ರೈಲು ನಿಲ್ದಾಣ, ಅಂಚೆ ವೃತ್ತ ಮತ್ತಿತರ ಜನನಿಬೀಡು ಪ್ರದೇಶಗಳಲ್ಲಿ ಜನಜಂಗುಳಿ ಕಂಡು ಬರಲಿಲ್ಲ, ಒಟ್ಟಾರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಜನರ ಸಂಚಾರ ಕಂಡು ಬರದೆ ಜನತಾ ಕರ್ಫ್ಯೂ ಯಶಸ್ವಿಯಾಗಿದ್ದು, ಕಂಡು ಬಂದಿತು. ಕೋವಿಡ್ 19 ವೈರಸ್ ಮಹಾಮಾರಿಗೆ ಬೆದರಿದ ಜನರು ಸ್ವಯಂಪ್ರೇರಿತರಾಗಿ ಮನೆಯ ಹೊರಗೆ ಕಂಡು ಬರಲಿಲ್ಲ. ವರ್ತಕರು, ಹಮಾಲರು, ವ್ಯಾಪಾರಸ್ಥರು, ಬಾರ್ ಗಳು, ರೈತ ಸಂಘಗಳು, ಆಟೋ ಸಂಘ, ಕನ್ನಡಪರ ಸಂಘಟನೆಗಳು, ಹೋಟೆಲ್ ಉದ್ಯಮಿ, ಜವಳಿ, ಬಂಗಾರದ ಅಂಗಡಿಗಳ ಸಂಘಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಸ್ವಯಂಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಬೆಂಬಲ ನೀಡಿದ್ದರಿಂದ ಯಶಸ್ವಿಯಾಗಿ ಸಾಕ್ಷಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ