ಪೋಸ್ಟ್ ಗಳ ಪರಿಶೀಲನೆಗೆ ಫೇಸ್ ಬುಕ್, ವಾಟ್ಸಪ್ ಮುಖಂಡರ ಜೊತೆ ಚರ್ಚೆ: ಬಸವರಾಜ ಬೊಮ್ಮಾಯಿ
Team Udayavani, Aug 15, 2020, 12:54 PM IST
ಹಾವೇರಿ: ಸಾಮಾಜಿಕ ಜಾಲತಾಣದಲ್ಲಿ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಲಾಗುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್, ವಾಟ್ಸಪ್ ಸೇರಿದಂತೆ ಹಲವು ಮುಖ್ಯಸ್ಥರನ್ನು ಕರೆದು ಮಾತನಾಡಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಅಂತಹ ಪೋಸ್ಟ್ ಗಳನ್ನು ಪರಿಶೀಲಿಸಿ ಹಾಕಲು ತಿಳಿಸಬೇಕಿದೆ. ಮುಂದಿನ ವಾರ ಮುಖ್ಯಸ್ಥರ ಸಭೆ ನಡೆಸಲಾಗುತ್ತಿದೆ. ಅವರ ಪ್ರತಿಕ್ರಿಯೆ ನಂತರ ನಮ್ಮ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರಿನ ಗಲಭೆ ಬಗ್ಗೆ ತನಿಖೆ ನಡೆಯುತ್ತಿದೆ. ಅದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಕೆಲವೇ ದಿನದಲ್ಲಿ ಬಹಿರಂಗಗೊಳಿಸುತ್ತೇವೆ ಎಂದರು.
ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಗಲಭೆಯಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಭರಸಿಕೊಳ್ಳುವ ಬಗ್ಗೆ ಸುಪ್ರೀಂ ಕೊರ್ಟ್ ಆದೇಶ ನೀಡಿದೆ. ಅದರ ಆದೇಶದ ಮೇರೆಗೆ ರಾಜ್ಯ ಸರಕಾರ ಆಡಳಿತ ಮಾಡುತ್ತಿದೆ. ಯಾವ ರೀತಿ ಹಾನಿ ಭರಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಕೊಟ್ಟಿದೆ. ಆ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಈಗಾಗಲೇ ಕಾರ್ಯ ಪ್ರಾರಂಭಿಸಿದೆ. ಹಾನಿ ಮಾಡಿದವರನ್ನು ಗುರುತಿಸುತ್ತಿದ್ದೇವೆ ಎಂದರು.
ಇನ್ನೂ ಶಾಸಕ ಅಖಂಡ ಶಾಸಕರಾದ ಅಖಂಡ ಶ್ರೀನಿವಾಸ್ ಅವರು ಭದ್ರತೆ ಕೇಳಿದ್ದಾರೆ. ಭದ್ರತೆಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ