ವಿದ್ಯಾರ್ಥಿನಿಯನ್ನು ಮನೆಪಾಠಕ್ಕೆ ಕರೆದ ಲೆಕ್ಕದ ಮೇಷ್ಟ್ರ ‘ಲೆಕ್ಕಾಚಾರ’ವೇ ಬೇರಿತ್ತು!
ಮನೆ ಪಾಠದ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ದೂರು ದಾಖಲು
Team Udayavani, Jun 18, 2020, 9:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಾವೇರಿ: ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರ ಭವಿಷ್ಯ ಉಜ್ವಲಗೊಳಿಸಲು ಕಾರಣನಾಗಬೇಕಾದ ಶಿಕ್ಷಕನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನಿಂದ ವರದಿಯಾಗಿದೆ.
ಮನೆ ಪಾಠಕ್ಕೆಂದು ಬರುತ್ತಿದ್ದ ವಿದ್ಯಾರ್ಥಿನಿಯನ್ನು ತನ್ನ ಲೈಂಗಿಕ ಉದ್ದೇಶಕ್ಕಾಗಿ ಬಳಸಿಕೊಂಡ ಶಿಕ್ಷಕ ಇದೀಗ ಅವಳ ಭವಿಷ್ಯವನ್ನೇ ಕತ್ತಲಿಗೆ ದೂಡಿದ ಪ್ರಸಂಗ ನಡೆದಿದೆ.
ಈ ರೀತಿಯಾಗಿ ತನ್ನ ವಿದ್ಯಾರ್ಥಿನಿಯನ್ನೇ ಲೈಂಗಿಕ ತೃಷೆ ತೀರಿಸಿಕೊಳ್ಳಲು ಬಳಸಿಕೊಂಡ ಶಿಕ್ಷಕನ ಹೆಸರು ಪ್ರವೀಣ ಕುಮಾರ ಚನ್ನಬಸಪ್ಪ ಮರಿಯಣ್ಣನವರ. ಈತ ಶಿಗ್ಗಾವಿ ತಾಲೂಕು ಅಂದಲಗಿ ಗ್ರಾಮದವನಾಗಿದ್ದು ನಗರದ ವಿಶ್ವೇಶ್ವರಯ್ಯ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ.
ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಯ ಮನೆಗೆ ಬಂದ ಶಿಕ್ಷಕ, ಗಣಿತ ಪಾಠ ಹೇಳಿಕೊಡುವ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಶಿಕ್ಷಕನ ಈ ಹೇಯ ಕೃತ್ಯದಿಂದಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಇದೀಗ ಗರ್ಭಿಣಿಯಾಗಿದ್ದಾಳೆ.
ಜೂ.17ರಂದು ಸಂತ್ರಸ್ತ ವಿದ್ಯಾರ್ಥಿನಿಯು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಹೋದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದ್ದು, ಇದೀಗ ವಿದ್ಯಾರ್ಥಿನಿಯೇ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರನ್ನು ದಾಖಲಿಸಿದ್ದಾಳೆ.
ಕಳೆದ ಜನವರಿಯಲ್ಲಿ ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆಕೆಯ ಮನೆಗೆ ಬಂದಿದ್ದ ಶಿಕ್ಷಕ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೀಗ ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ