ಪದವಿ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಕೌಶಲ್ಯ ಅಗತ್ಯ

ಪಠ್ಯೇತರ ಚಟುವಟಿಕೆಗಳ ಸಮಾರೋಪದಲ್ಲಿ ಬಿಇಎಸ್‌ ಕಾಲೇಜು ಪ್ರಾಚಾರ್ಯ ಡಾ|ಎಸ್‌.ಜಿ.ವೈದ್ಯ ಅಭಿಮತ

Team Udayavani, Aug 21, 2022, 3:50 PM IST

19

ಬ್ಯಾಡಗಿ: ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವ ಬೆನ್ನಲ್ಲೇ, ಯುವಕರಿಗೆ ಉದ್ಯೋಗ ಕಲ್ಪಿಸುತ್ತಿರುವ ಮಾರುಕಟ್ಟೆಗಳು ತಂತ್ರಜ್ಞಾನದೊಂದಿಗೆ ಅತ್ಯಾಧುನಿಕವಾಗುತ್ತಿವೆ. ಇಂತಹ ನಾಟಕೀಯ ಬದಲಾವಣೆ ಕಂಡುಕೊಳ್ಳುವ ಮೂಲಕ ಯಾಂತ್ರೀಕೃತಗೊಂಡ ಕಂಪನಿಗಳು ಕೃತಕ ಬುದ್ಧಿಮತ್ತೆ ಹೊಂದಿರುವ ವಿದ್ಯಾರ್ಥಿಗಳ ಹುಡುಕಾಟದಲ್ಲಿವೆ. ಇದರಿಂದ ಉದ್ಯೋಗ ಪಡೆಯುವಲ್ಲಿ ಪೈಪೋಟಿ ಸಾಮಾನ್ಯವಾಗಿದೆ ಎಂದು ಬಿಇಎಸ್‌ ಕಾಲೇಜು ಪ್ರಾಚಾರ್ಯ ಡಾ|ಎಸ್‌.ಜಿ.ವೈದ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಬಿಇಎಸ್‌ ಮಹಾವಿದ್ಯಾಲಯದ ಸಭಾಭವನದಲ್ಲಿ ಏರ್ಪಡಿಸಿದ್ದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉನ್ನತ ಶಿಕ್ಷಣವನ್ನು ಔಪಚಾರಿಕ ಶಿಕ್ಷಣದ ಅಂತಿಮ ಹಂತವೆಂದು ಪರಿಗಣಿಸುತ್ತಿರುವುದೇನೋ ನಿಜ. ಆದರೆ, ಸುಧಾರಿತ ತಂತ್ರಜ್ಞಾನ ಹೊಂದಿದ ಉದ್ಯೋಗಗಳಲ್ಲಿ ಬೇಡಿಕೆ ಹೆಚ್ಚಾಗಿದ್ದರಿಂದ ಇಂತಹ ಅಗತ್ಯಗಳನ್ನು ನಿಭಾಯಿಸಬಲ್ಲ ಶೈಕ್ಷಣಿಕ ವ್ಯವಸ್ಥೆ ಅವಶ್ಯಕವೆನಿಸುತ್ತಿದೆ. ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣದಲ್ಲಿ ಇಂತಹ ಅವಕಾಶ ಕಲ್ಪಿಸುವ ಮೂಲಕ ಅವರಲ್ಲಿ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಬೇಕಾಗಿದೆ ಎಂದರು.

ಶೇ.54 ಪದವಿ ಶಿಕ್ಷಣ: ಹಿಂದಿನ ದಿನಗಳನ್ನು ಜ್ಞಾಪಿಸಿಕೊಂಡಾಗ ಉನ್ನತ ಶಿಕ್ಷಣದವರೆಗೂ ಹೋದವರ ಸಂಖ್ಯೆ ವಿರಳವಾಗಿತ್ತು. ಅವಿಭಕ್ತ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕರು ಹೆಚ್ಚು ಸಮಯವನ್ನು ಕೃಷಿ ಚಟುವಟಿಕೆಯಲ್ಲಿ ಕಳೆಯುತ್ತಿದ್ದರು, ಹೀಗಾಗಿ, ಪದವಿ ಪಡೆದ ಮತ್ತು ಪಡೆಯದವರ ನಡುವೆ ಬಹಳಷ್ಟು ಅಂತರ ಸೃಷ್ಟಿಯಾಗಿತ್ತು. ಇದೀಗ ಶಿಕ್ಷಣ ರೂಪಾಂತರಗೊಂಡಿದ್ದು, ಉನ್ನತ ಶಿಕ್ಷಣ ಪಡೆದವರು ಆರ್ಥಿಕ ಭದ್ರತೆ ಕಂಡುಕೊಂಡಿದ್ದಾರೆ. ಹೀಗಾಗಿ, ಶೇ.54ರಷ್ಟು ಯುವಕರು ಪದವಿ ಶಿಕ್ಷಣ ಪಡೆದುಕೊಳ್ಳಲು ಮುಂದಾಗುತ್ತಿದ್ದಾರೆ ಎಂದರು.

ಸ್ಕಿಲ್‌ ಡೆವೆಲಪಮೆಂಟ್‌ ಮಾಡಿಕೊಳ್ಳಿ:ಪಠ್ಯೇತರ ಚಟುವಟಿಕೆಗಳ ವಿಭಾಗದ ಮುಖ್ಯಸ್ಥ ಉಪನ್ಯಾಸಕ ಕೆ.ಎಂ.ಕಟಗಿಹಳ್ಳಿ ಮಾತನಾಡಿ, ಉನ್ನತ ಶಿಕ್ಷಣದಲ್ಲಿ ಕೇವಲ ಪದವಿ ಪಡೆದರೆ ಸಾಕಾಗುವುದಿಲ್ಲ. ಇದರಲ್ಲಿಯೇ ಉದ್ಯೋಗ ಬಯಸುವವರು ಸಂವಹನ (ಕಮ್ಯೂನಿಕೇಶನ್‌ ಸ್ಕಿಲ್‌) ಕಲೆಯಲ್ಲಿ ಪ್ರಾವೀಣ್ಯತೆ ಹೊಂದಬೇಕಾಗುತ್ತದೆ. ಹೀಗಾಗಿ, ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ನಡೆಯುವ ಸಂವಾದ (ಡಿಬೇಟ್‌) ಕಾರ್ಯಕ್ರಮ ಸೇರಿದಂತೆ ಪಠ್ಯೇತರ ವಿಭಾಗದಲ್ಲಿ ಹೆಚ್ಚಿನ ಆಸಕ್ತಿ ತೋರಬೇಕೆಂದರು.

ವೇದಿಕೆಯಲ್ಲಿ ಕಾಲೇಜು ಆಡಳಿತ ಮಂಡಳಿ ನಿರ್ದೇಶಕ ಡಾ.ಎಸ್‌.ಎನ್‌.ನಿಡಗುಂದಿ, ಗೌರವ ಕಾರ್ಯದರ್ಶಿ ಮುರುಳಿ ಜೋಷಿ, ನಿವೃತ್ತ ಪ್ರಾಚಾರ್ಯ ಕೆ.ಜಿ.ಖಂಡೇಬಾಗೂರ, ನಿವೃತ್ತ ಉಪನ್ಯಾಸಕರಾದ ಡಾ.ಪ್ರೇಮಾನಂದ ಲಕ್ಕಣ್ಣನವರ, ಎಂ.ಜಿ. ನಂದರಗಿ, ಡಾ.ಎಸ್‌.ಡಿ.ಬಾಲಾಜಿರಾವ್‌, ಚನ್ನಮ್ಮ ಕೋರಿಶೆಟ್ಟರ, ಪಿಎಂ.ರಾಮಗಿರಿ, ಎಸ್‌.ವಿ.ಉಜ್ಜಯನಿಮಠ, ನಿವೃತ್ತ ದೈಹಿಕ ನಿರ್ದೇಶಕ ಎಸ್‌.ಎಲ್‌.ತೆಂಬದ, ನಿವೃತ್ತ ಗ್ರಂಥಪಾಲಕ ಸಿ.ಸಿ.ಕೊಟಗಿ, ಉಪನ್ಯಾಸಕಾರದ ಡಾ.ಸುರೇಶ ಪಾಂಗಿ, ಎನ್‌. ಎಸ್‌.ಪ್ರಶಾಂತ್‌, ಪ್ರಭು ದೊಡ್ಮನಿ, ಮಹೇಶ ದೇವರಗುಡ್ಡ, ಶಿವನಗೌಡ ಪಾಟೀಲ, ನಿಂಗಪ್ಪ ಕುಡುಪಲಿ, ವಿಶ್ವನಾಥ ವಡೆಯನಪುರ, ಪ್ರವೀಣ ಬಿದರಿ, ಎಂ.ಎಚ್‌.ಮುಧೋಳಕರ, ಗ್ರಂಥಪಾಲಕ ಸಂತೋಷ್‌ ಉದ್ಯೋಗಣ್ಣನವರ ಸಿಬ್ಬಂದಿ ಗಳಾದ ಎಸ್‌.ಎಚ್‌.ಕುರಕುಂದಿ, ಮಾಲತೇಶ ಕರುಗಲ್ಲ, ಬಸಮ್ಮ ನಾಯ್ಕರ್‌ ಎಂ.ಆರ್‌.ಕೋಡಿಹಳ್ಳಿ ಇನ್ನಿತರರಿದ್ದರು.

ಪ್ರಾಧ್ಯಾಪಕಿ ಜ್ಯೋತಿ ಹಿರೇಮಠ ಸ್ವಾಗತಿಸಿ, ನಿವೇದಿತ ವಾಲಿಶೆಟ್ಟರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.