ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌


Team Udayavani, Nov 6, 2019, 2:35 PM IST

hv-tdy-1

ಹಾನಗಲ್ಲ: ಇತ್ತೀಚೆಗೆ ಸಂಭವಿಸಿದ ನೆರೆ ಹಾವಳಿಯಿಂದ ನಿರಾಶ್ರಿತರಾದ ಎಲ್ಲ ಕುಟುಂಬಗಳಿಗೆ ತಾತ್ಕಾಲಿಕವಾಗಿ ಶೆಡ್‌ಗಳನ್ನು ನಿರ್ಮಿಸಿ ಕೊಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರತಿ ಕುಟುಂಬಗಳಿಗೂ ಶಾಶ್ವತ ಮನೆ ನಿರ್ಮಿಸಲಾಗುವುದು ಎಂದು ಸಂಸದ ಶಿವಕುಮಾರ ಉದಾಸಿ ಭರವಸೆ ನೀಡಿದರು.

ಶೀಗಿಹಳ್ಳಿ ಗ್ರಾಮದಲ್ಲಿ ನಿರಾಶ್ರಿತರಿಗಾಗಿ 12 ಲಕ್ಷ ರೂಗಳಲ್ಲಿ ನಿರ್ಮಿಸಿದ 23 ತಾತ್ಕಾಲಿಕ ಶೆಡ್‌ಗಳು, ಉದ್ಯೋಗಖಾತ್ರಿ ಯೋಜನೆಯಡಿ ನಿರ್ಮಿಸಿದ 14 ಲಕ್ಷ ರೂ.ಗಳ ಪಕ್ಕಾ ಗಟಾರ, ಕಾಂಕ್ರಿಟ್‌ ರಸ್ತೆ, ಶಿಂಗಾಪುರ ಗ್ರಾಮದಲ್ಲಿ 3 ಲಕ್ಷ ರೂ.ಗಳ ಬಸ್‌ ನಿಲ್ದಾಣ, 7 ಲಕ್ಷ ರೂ.ಗಳ ಶೌಚಾಲಯ, 12 ಲಕ್ಷರೂಗಳ ವಾಲ್ಮೀಕಿ ಸಮುದಾಯ ಭವನ, ನರೇಗಾ ಯೋಜನೆಯಡಿಯ 8 ಲಕ್ಷರೂಗಳ ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ವರದಾ ನದಿಯ ಪ್ರವಾಹದಿಂದಾಗಿ ಶೀಗಿಹಳ್ಳಿ ಗ್ರಾಮದಲ್ಲಿ 30, ಹಳೆಶಿಂಗಾಪುರದಲ್ಲಿ 40 ಕುಟುಂಬಗಳು ಸೇರಿದಂತೆ ಒಟ್ಟು 70 ಕುಟುಂಬಗಳು ಆಶ್ರಯ ಕಳೆದುಕೊಂಡಿವೆ. ಅವರಲ್ಲಿ ಅತ್ಯಂತ ಸಮಸ್ಯೆಯಲ್ಲಿರುವ 23 ಕುಟುಂಬಗಳನ್ನು ಸ್ಥಳಾಂತರಿಸಿ ತಾತ್ಕಾಲಿಕ ಶೆಡ್‌ ಗಳನ್ನು ನೀಡಲಾಗಿದೆ. ಸರಕಾರ ಮುಂಬರುವ ದಿನಗಳಲ್ಲಿ ತಲಾ 5 ಲಕ್ಷರೂ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ಕೊಡುತ್ತದೆ. ನಿರಾಶ್ರಿತರು ಆತಂಕಪಡುವ ಅಗತ್ಯವಿಲ್ಲ ಎಂದರು. ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವ ಧಿಯಲ್ಲಿ ಶಿಂಗಾಪುರ ಪ್ಲಾಟ್‌ನ್ನು ಹೊಸ ಗ್ರಾಮವಾಗಿ ವಿಜಯನಗರ ಎಂದು ಘೋಷಿಸಲಾಯಿತು.

ಆದರೆ ಕರಡು ಪ್ರತಿ ಅಂತಿಮ ಹಂತದಲ್ಲಿತ್ತು. ಕಂದಾಯ ಗ್ರಾಮವಾಗಿ ಪರಿವರ್ತನೆಯಾಗಲಿಲ್ಲ. ಇದರಿಂದ ಅನುದಾನ ನೀಡಲು ದಾಖಲೆಗಳು ಸಮಸ್ಯೆಯಾಗಿ ಕಾಡುತ್ತಿದೆ. ಹೀಗಾಗಿ ಇಲ್ಲಿಯ ಪ್ರತಿ ಮನೆಯನ್ನೂ ಸಮೀಕ್ಷೆ ಕಾರ್ಯ ನಡೆಸಿ, ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಇನ್ನೊಂದು ತಿಂಗಳಲ್ಲಿ ಈ ಸಮೀಕ್ಷೆ ಪೂರ್ಣಗೊಳ್ಳಲಿದೆ. ನಂತರ ಕಂದಾಯ ಗ್ರಾಮವಾಗಿ ಘೋಷಣೆಯಾಗಲಿದೆ ಎಂದು ತಿಳಿಸಿದರು.

ಗೌರಮ್ಮ ತಿಮ್ಮಣ್ಣನವರ, ಗೌರವ್ವ ಶೇತಸನದಿ, ಬಸವಣ್ಣೆಪ್ಪ ಬೆಂಚಳ್ಳಿ, ಸಿದ್ದಲಿಂಗಪ್ಪ ಶಂಕ್ರಿಕೊಪ್ಪ, ಮಾಲತೇಶ ಆರೇರ, ಸೋಮಣ್ಣ ಗೋಣಿಗೇರ, ನಾಗನಗೌಡ ಪಾಟೀಲ, ದೇವೇಂದ್ರಪ್ಪ ಸವದತ್ತಿ, ತಿಪ್ಪಣ್ಣ ಕೋರಿ, ಮೊದಲಾದವರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.