ಬಯಲಾಟ ಕಲೆ ಪುನರುಜ್ಜೀವನ ಅಗತ್ಯ

•ಅಳಿವಿನಂಚಿಗೆ ತಲುಪಿದೆ ಉ.ಕ. ಕಲೆ•ಹಸಿವು-ಬಡತನಗಳೇ ಬದುಕಿಗೆ ಕಲಿಸುವ ಪಾಠ

Team Udayavani, Apr 28, 2019, 3:05 PM IST

haveri-2..

ಶಿಗ್ಗಾವಿ: 'ಚಾವಡಿ- 11' ಕಾರ್ಯಕ್ರಮದಲ್ಲಿ 'ಗ್ರಾಮರಂಗ' ಕಲಾ ತಂಡದವರು ಕಿತ್ತೂರ ರಾಣಿ ಚೆನ್ನಮ್ಮ ಕಥೆಯಾಧಾರಿತ ದೊಡ್ಡಾಟದ ಪ್ರಾತ್ಯಕ್ಷಿಕೆೆ ನೀಡಿದರು.

ಶಿಗ್ಗಾವಿ: ಉತ್ತರ ಕರ್ನಾಟಕದ ಮೂಲ ಬಯಲಾಟ ಕಲೆಯು ಅಳಿವಿನತ್ತ ಸಾಗುತ್ತಿದ್ದು, ಅದನ್ನು ಇಂದಿನ ಕಾಲಕ್ಕೆ ತಕ್ಕಂತೆ ಪುನರುಜ್ಜೀವನಗೊಳಿಸಬೇಕಾದ ಅಗತ್ಯವಿದೆ ಎಂದು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಇಂಗಳಗಿಯ ರಂಗ ಕಲಾವಿದ ಎಂ.ಎಸ್‌. ಮಾಳವಾಡ ಅಭಿಪ್ರಾಯಪಟ್ಟರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆಡಳಿತ ಭವನದ ಮಲ್ಲಿಗೆದಂಡೆ ಸಭಾಂಗಣದಲ್ಲಿ ಜರುಗಿದ ತಿಂಗಳ ಅತಿಥಿ ಕಲಾವಿದರೊಂದಿಗೆ ‘ಚಾವಡಿ- 11’ ಕಾರ್ಯಕ್ರಮ ತಿಂಗಳ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಒಬ್ಬ ವೃತ್ತಿ ರಂಗಭೂಮಿ ಕಲಾವಿದನಾಗಲು ಛಲವಿರಬೇಕಾಗುತ್ತದೆ. ಹಸಿವು, ಬಡತನಗಳೇ ಬದುಕಿನ ಪಾಠ ಕಲಿಸಿಕೊಡುತ್ತವೆ. ಈ ಹಿನ್ನೆಲೆಯಲ್ಲಿ ಸಮಾಜಕ್ಕೆ ಉಪಯುಕ್ತವಾದ ಸಂದೇಶಗಳನ್ನು ನೀಡುವ ನಾಟಕಗಳನ್ನು ಅಭಿನಯಿಸುವ ಕಲಾವಿದ ತನ್ನ ಕಲೆಯನ್ನು ತಾನು ಮೊದಲು ಆನಂದಿಸ ಬಲ್ಲವನಾಗಿರಬೇಕು. ಆಗ ಮಾತ್ರ ಒಬ್ಬ ಕಲಾವಿದನಾಗಿ ಯಶಸ್ಸು ಕಾಣಬಹುದು ಎಂದರು.

ವೃತ್ತಿ ರಂಗಭೂಮಿ ಕಲಾವಿದನಾಗಿ ಡೊಡ್ಡಾಟ ಕಲೆಯನ್ನೂ ರೂಢಿಸಿಕೊಂಡು ಅದನ್ನು ಯಶಸ್ವಿಯಾಗಿ ಮುನ್ನಡೆಸಲು ಸಾಕಷ್ಟು ಸಂಕಷ್ಟಗಳನ್ನು ಅನುಭವಿಸಲಾಗಿದೆ. ಅದಕ್ಕಾಗಿ ದೊಡ್ಡಾಟ ಕಲೆಯನ್ನು ಸರ್ವರಿಗೂ ಅರ್ಥವಾಗುವಂತೆ ಸರಳಗೊಳಿಸುವ ಅನಿವಾರ್ಯತೆ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಡಿ.ಬಿ. ನಾಯಕ ಮಾತನಾಡಿ, ಕಲೆ ಒಂದು ತಪಸ್ಸು ಇದ್ದಂತೆ. ನಾವು ನೋಡುವ ನಿಸರ್ಗವೇ ಕಲೆಯ ಕಲಿಕೆಗೆ ಗುರುವಾಗಬೇಕು. ಸಹಜವಾಗಿ ನಮ್ಮ ಪರಿಸರದಲ್ಲಿ ಘಟಿಸುವ ಘಟನಾವಳಿಗಳೇ ಕಲೆಯನ್ನು ರೂಢಿಸಿಕೊಳ್ಳಲು ಪ್ರೇರಣೆ ಒದಗಿಸುತ್ತದೆ. ಕಲಾವಿದರು ಉಳಿದರೆ ಕಲೆಯು ಉಳಿಯುತ್ತದೆ. ಪರಿಶ್ರಮದಿಂದ ಕಲಾವಿದರು ಕಲೆಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದು ಕಲಾವಿದರ ಕಾರ್ಯವನ್ನು ಶ್ಲಾಘಿಸಿದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ರೂಪಿಸುತ್ತಿದೆ ಹಾಗೂ ದೊಡ್ಡಾಟ, ಸಣ್ಣಾಟ ಹಾಗೂ ಶ್ರೀಕೃಷ್ಣ ಪಾರಿಜಾತದಂಥಹ ಉತ್ತರ ಕರ್ನಾಟಕದ ಕಲಾ ಪರಂಪರೆಗಳನ್ನು ಸಂರಕ್ಷಿಸಲು ಸದಾ ಬದ್ಧವಾಗಿದೆ ಎಂದರು.

ವಿಶ್ವವಿದ್ಯಾಲಯ ಕುಲಸಚಿವ ಪ್ರೊ| ಚಂದ್ರಶೇಖರ, ಮೌಲ್ಯಮಾಪನ ಕುಲಸಚಿವ ಡಾ| ಎಂ.ಎನ್‌. ವೆಂಕಟೇಶ ವೇದಿಕೆಯಲ್ಲಿದ್ದರು. ಸಾಹಿತಿ ಸತೀಶ ಕುಲಕರ್ಣಿ, ಡಾ| ಶ್ರೀಶೈಲ ಹುದ್ದಾರ, ಪರಿಮಳಾ ಜೈನ್‌, ಡಾ| ಹಾ.ತಿ. ಕೃಷ್ಣೇಗೌಡ ಸೇರಿದಂತೆ ಹಲವು ವಿದ್ವಾಂಸರು ಕಾರ್ಯಕ್ರಮದಲ್ಲಿದ್ದರು.

ಎಂ.ಎಸ್‌. ಮಾಳವಾಡ ಅವರ ನೇತೃತ್ವದ ಇಂಗಳಗಿಯ ‘ಗ್ರಾಮರಂಗ’ ಕಲಾ ತಂಡದವರು ಕಿತ್ತೂರ ರಾಣಿ ಚೆನ್ನಮ್ಮ ಕಥೆಯಾಧಾರಿತ ದೊಡ್ಡಾಟದ ಪ್ರಾತ್ಯಕ್ಷಿತೆ ನೀಡಿದರು.

ವಿವಿ ಗೀತ ಸಂಪ್ರದಾಯ ಕೋರ್ಸ್‌ನ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕ ಡಾ| ಚಂದ್ರಪ್ಪ ಸೊಬಟಿ ಸ್ವಾಗತಿಸಿದರು. ಡಾ| ಹನಮಪ್ಪ ಎಸ್‌. ಘಂಟಿ ಕಾರ್ಯಕ್ರಮ ನಿರ್ವಹಿಸಿದರು. ಸಂಶೋಧನಾ ವಿದ್ಯಾರ್ಥಿ ಸಣ್ಣಯ್ಯ ಜಿ.ಎಸ್‌. ವಂದಿಸಿದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.