ಗೋವಿನ ಜೋಳ ಈಗ ಬಿತ್ತೋರೇ ಭಾಳ


Team Udayavani, Jul 5, 2019, 8:53 AM IST

hv-tdy-2..

ಹಾನಗಲ್ಲ: ಹೊರವಲಯದ ಜಮೀನೊಂದರಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ.

ಹಾನಗಲ್ಲ: ಹಾರಿ ಹೋಗುತ್ತಿರುವ ಮೋಡಗಳ ಕೆಳಗೆ ಬಾಡಿ ಹೋಗುತ್ತಿರುವ ಪೈರಿಗೆ ಮಳೆಯ ಹನಿಗಳು ಉದುರಿ ಮತ್ತೆ ಬೆಳೆ ಮರುಜೀವ ಪಡೆಯುವ ವಿಶ್ವಾಸ ಮೂಡಿದೆಯಾದರೂ ಹಾನಗಲ್ಲ ತಾಲೂಕಿನಲ್ಲಿ ಈ ಮಳೆ ಯಾವುದಕ್ಕೂ ಸಾಲದೆಂಬುದು ಮಾತ್ರ ಅಪ್ಪಟ ಸತ್ಯ.

ಹಾನಗಲ್ಲ ತಾಲೂಕಿನಲ್ಲಿ ಅರ್ಧಂಬರ್ಧ ಬಿತ್ತನೆ ಮುಗಿದಿದೆ. ಆದರೆ, ಅನಿಶ್ಚಿತ ಮಳೆ ರೈತನ ಮೊಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಿರು ಬಿಸಿಲಿನ ನಡುವೆ ಬಂದೇ ಬಿಟ್ತು ಎಂಬಂತೆ ಮೋಡಗಳು ಮಳೆ ತರಿಸುವ ವಿಶ್ವಾಸ ಮೂಡಿಸಿದೆಯಾದರೂ ಕೆಲ ಕ್ಷಣಗಳಲ್ಲೇ ಗಾಳಿಗೆ ಹಾರಿ ಹೋಗಿ ಮತ್ತೆ ರೈತನನ್ನು ಆತಂಕಕ್ಕೀಡು ಮಾಡುತ್ತಿವೆ.

ಕಳೆದೆರಡು ದಿನಗಳಿಂದ ಹಾನಗಲ್ಲ ತಾಲೂಕಿನಲ್ಲಿ ಬಿದ್ದ ಅಲ್ಪ ಪ್ರಮಾಣದ ಮಳೆ ಒಂದಷ್ಟು ಸಮಾಧಾನ ಉಂಟು ಮಾಡಿದ್ದರೂ ಭತ್ತ ಬೆಳೆಯಲು ಈ ಮಳೆ ಸಾಲದು. ಹಾನಗಲ್ಲ ತಾಲೂಕಿನಲ್ಲಿ ಭತ್ತದ ಕ್ಷೇತ್ರವೇ ಅಧಿಕ, ಇತ್ತೀಚಿನ ದಿನಗಳಲ್ಲಿ ಮಳೆ ಅಭಾವದಿಂದ ಗೋವಿನ ಜೋಳ ಹಾಗೂ ಕಡಿಮೆ ಮಳೆ ಆಧಾರಿತ ಬೆಳೆಗಳತ್ತ ರೈತ ಮುಖ ಮಾಡಿದ್ದಾನೆ. ಆದರೂ ಇನ್ನೂ ಶೇ.40 ಬಿತ್ತನೆಯಾಗದಿರುವುದು ರೈತನ ಆತಂಕ ಹೆಚ್ಚಿಸಿದೆ.

ಕೃಷಿ ಇಲಾಖೆ ಎಲ್ಲ ಬೀಜಗಳನ್ನು ದಾಸ್ತಾನು ಮಾಡಿಕೊಂಡು ವಿತರಿಸಲು ಕಾಯುತ್ತಿದೆ. ಮಳೆಯ ಅಭಾವದಿಂದ ರೈತನಿಗೆ ಬೀಜ ಖರೀದಿಸಲು ಮುಂದಾಗುತ್ತಿಲ್ಲ. ತಾಲೂಕಿನಲ್ಲಿ ಸದ್ಯ 11950 ಹೆಕ್ಟೇರ್‌ ಭತ್ತ, 158100 ಹೆಕ್ಟೇರ್‌ ಗೋವಿನಜೋಳ, 432 ಹೆಕ್ಟೇರ್‌ ಶೇಂಗಾ, 2100 ಹೆಕ್ಟೇರ್‌ ಸೋಯಾ ಅವರೆ, 3000 ಹೆಕ್ಟೇರ್‌ ಹತ್ತಿ ಮಾತ್ರ ಬಿತ್ತನೆಯಾಗಿದೆ.

ಹಾನಗಲ್ಲ ತಾಲೂಕು ಪ್ರತಿ ವರ್ಷ ಒಂದಿಲ್ಲೊಂದು ರೀತಿಯಲ್ಲಿ ಮಳೆ ಆತಂಕಕ್ಕೆ ತುತ್ತಾಗುತ್ತಿರುವುದು ಸಾಮಾನ್ಯ ಎನ್ನುವಂತಾಗಿದೆ. ರೈತ ತನ್ನ ಭೂಮಿಗೆ ಯಾವ ಬೆಳೆ ಆಯ್ದುಕೊಳ್ಳಬೇಕೆಂಬ ತೀರ್ಮಾನ ಮಾಡದಂತಾಗಿದ್ದಾನೆ.

ಈ ವರ್ಷವಾದರೂ ಉತ್ತಮ ಮಳೆ ಬರಲಿ. ಹರ್ಷದಾಯಕ ಬೆಳೆ ಬೆಳೆಯಲಿ. ರೈತ ಸಮುದಾಯ ನೆಮ್ಮದಿಯ ನಿಟ್ಟುಸಿರು ಬಿಡಲಿ ಎನ್ನುವುದು ಎಲ್ಲರ ಆಶಯವಾಗಿದೆ.

 

•ರವಿ ಲಕ್ಷ್ಮೇಶ್ವರ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.