ಗ್ರಾಮೀಣ ಮಕ್ಕಳ ಶೈಕ್ಷಣಿಕ ಸಾಧನೆ ಶ್ಲಾಘನೀಯ

ವಿದ್ಯಾರ್ಥಿಗಳಿಗೆ ಪೋಷಕರ-ಶಿಕ್ಷಕರ ಪ್ರೋತ್ಸಾಹ ಅಗತ್ಯ •ಸತತ ಪರಿಶ್ರಮದಿಂದ ಓದಿದರೆ ಯಶಸ್ಸು

Team Udayavani, May 10, 2019, 3:56 PM IST

haveri-4-tdy..

ಹಿರೇಕೆರೂರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಶಾಸಕ ಬಿ.ಸಿ.ಪಾಟೀಲ ಸನ್ಮಾನಿಸಿದರು.

ಹಿರೇಕೆರೂರ: ಗ್ರಾಮೀಣ ಪ್ರದೇಶಗಳ ಮಕ್ಕಳು ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವಂತೆ ಶೈಕ್ಷಣಿಕ ಸಾಧನೆ ಮಾಡಿರುವುದು ಸಂತಸ ತಂದಿದೆ. ಮಕ್ಕಳು ಉನ್ನತ ಗುರಿಹೊಂದಿ, ಉತ್ತಮ ಶಿಕ್ಷಣ ಪಡೆದು ಸಾಧನೆಗೈದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಬಿ.ಸಿ.ಪಾಟೀಲ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶೇ.100 ಫಲಿತಾಂಶ ಗಳಿಸಿದ ಶಾಲಾ ಮುಖ್ಯಸ್ಥರನ್ನು ಸನ್ಮಾನಿಸಿ ಅವರು ಮಾತನಾಡಿದರು.

ವಿದ್ಯೆ ಯಾರ ಸ್ವತ್ತೂ ಅಲ್ಲ. ಸತತ ಪರಿಶ್ರಮದಿಂದ ವ್ಯಾಸಂಗ ಮಾಡಿದಾಗ ಸುಲಭವಾಗಿ ಜ್ಞಾನ ಸಂಪಾದನೆ ಸಾಧ್ಯವಾಗುತ್ತದೆ. ಪೋಷಕರ ಮತ್ತು ಶಿಕ್ಷಕರ ಪ್ರೋತ್ಸಾಹದಿಂದ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಿತ್ತಿವೆ. ಶಿಕ್ಷಕರು ಮಕ್ಕಳಿಗೆ ವಿದ್ಯಾದಾನ ಮಾಡಿ ಅವರ ಭವ್ಯ ಭವಿಷ್ಯಕ್ಕೆ ಬುನಾದಿ ಹಾಕುವ ಕಾರ್ಯ ಶ್ಲಾಘನೀಯ ಎಂದರು.

ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುಂದಿನ ಶೈಕ್ಷಣಿಕ ಜೀವನವನ್ನು ರೂಪಿಸಿಕೊಂಡು ಉನ್ನತ ವ್ಯಾಸಂಗ ಮಾಡಬೇಕು. ಪ್ರಸ್ತುತ ಎಲ್ಲ ರಂಗಗಳಲ್ಲಿ ವಿಫುಲ ಅವಕಾಶಗಳಿದ್ದು, ಅವಕಾಶಗಳನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಒಲವು ಹೆಚ್ಚಿಸಿಕೊಂಡು, ಸಾಧಿಸುವ ಛಲದೊಂದಿಗೆ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ದೇಶಕ್ಕೆ ಕೊಡೆಗೆ ನೀಡುವ ಮೂಲಕ ತಾಲೂಕಿಗೆ ಕೀರ್ತಿ ತರಬೇಕು ಎಂದು ಹಾರೈಸಿದರು.

ತಾಲೂಕಿಗೆ ಅತೀ ಹೆಚ್ಚು ಅಂಕ ಗಳಿಸಿದ 14 ವಿದ್ಯಾರ್ಥಿಗಳಿಗೆ ಶಾಸಕರು ವೈಯಕ್ತಿಕವಾಗಿ ತಲಾ 2 ಸಾವಿರ ರೂ. ನಗದು ಪ್ರತಿಭಾ ಪುರಸ್ಕಾರ ನೀಡಿದರು. ಅವರ ಕೌರವ ಶಿಕ್ಷಣ ಸಂಸ್ಥೆಯ ಪಿಯು ಕಾಲೇಜಿನಲ್ಲಿ ಉಚಿತ ಪ್ರವೇಶಾತಿ ಕಲ್ಪಿಸುವುದಾಗಿ ತಿಳಿಸಿದರು.

ರಟ್ಟೀಹಳ್ಳಿ ಕುಮಾರೇಶ್ವರ ಬಾಲಕರ ಪ್ರೌಢ ಶಾಲೆಯ ಗೌತಮಿ ದೊಡ್ಮನಿ (ಶೇ.97.76), ರಟ್ಟೀಹಳ್ಳಿ ನೊಬೆಲ್ ಪ್ರೌಢ ಶಾಲೆಯ ಮಲ್ಲಿಕಾರ್ಜುನ ಕರೇಗೌಡ್ರ (ಶೇ.97.44), ಹಿರೇಕೆರೂರಿನ ಸರ್ಕಾರಿ ಉರ್ದು ಪ್ರೌಢ ಶಾಲೆಯ ಜೋಯ್ನಾ ಖಾಜಿ (ಶೇ.96.96), ಕೋಡ ಸರ್ಕಾರಿ ಉರ್ದು ಪ್ರೌಢ ಶಾಲೆಯ ಸಾನಿಯಾ ಬಾಳಿಕಾಯಿ (ಶೇ.96.96), ರಟ್ಟೀಹಳ್ಳಿ ನೊಬೆಲ್ ಪ್ರೌಢ ಶಾಲೆಯ ನಿರಂಜನ ಪಾಟೀಲ (ಶೇ.96.8),ಕೋಡ ಸರ್ಕಾರಿ ಉರ್ದು ಪ್ರೌಢ ಶಾಲೆಯ ಶೀಬಾಬಾನು ನಾಸೂರು (ಶೇ.96.48), ಕೋಡ ಸರ್ಕಾರಿ ಉರ್ದು ಪ್ರೌಢ ಶಾಲೆಯ ನಾಜಿಯಾ ಪರವೀನ್‌ ಶೆರಗಾರ (ಶೇ.95.84), ದೂದೀಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಸೌಮ್ಯ ಮರ್ಕಳ್ಳಿ (ಶೇ.95.84), ರಟ್ಟೀಹಳ್ಳಿ ಕುಮಾರೇಶ್ವರ ಬಾಲಕರ ಪ್ರೌಢ ಶಾಲೆಯ ವರ್ಷಾ ಪವಾರ (ಶೇ.95.84), ಕೋಡ ಸರ್ಕಾರಿ ಉರ್ದು ಪ್ರೌಢ ಶಾಲೆಯ ಮುಸ್ಕಾನ್‌ ಬಾನು ವಡೇರಹಳ್ಳಿ (ಶೇ.94.88), ನೂಲಗೇರಿ ಸರ್ಕಾರಿ ಪ್ರೌಢ ಶಾಲೆಯ ಲತಾ ಬಣಕಾರ (ಶೇ.94.78), ಹಿರೇಕೆರೂರಿನ ಡಿಆರ್‌ಟಿ ಆಂಗ್ಲ ಮಧ್ಯಮ ಪ್ರೌಢ ಶಾಲೆಯ ಅಕ್ಷತಾ ಚಂದ್ರಕೇರಿ (ಶೇ.94.78) ಹಾಗೂ ಶಿವರಾಜ ನೇಕಾರ (94.78) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ರಟ್ಟೀಹಳ್ಳಿ ಕುಮಾರೇಶ್ವರ ಪಿಯು ಕಾಲೇಜಿನ ಸಿದ್ದಪ್ಪ ಚೂರೇರ (ಶೇ.97) ಮತ್ತು 100 ಕ್ಕೆ 100 ಫಲಿತಾಂಶ ಪಡೆದ ಯಡಗೋಡ ಗ್ರಾಮದ ಸರ್ಕಾರಿ ಪ್ರೌಢ ಶಾಲೆ, ಹಿರೇಕೆರೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ರಟ್ಟೀಹಳ್ಳಿಯ ತರಳಬಾಳು ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಬುರಡೀಕಟ್ಟಿಯ ಸೇಂಟ್ ಮೇರಿಸ್‌ ಪ್ರೌಢ ಶಾಲೆಯ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷಕುಮಾರ ತಳಕಲ್, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಸಿದ್ದಲಿಂಗಪ್ಪ, ತಾಪಂ ಸದಸ್ಯ ಬಸವರಾಜ ಭರಮಗೌಡ್ರ, ಪಪಂ ಸದಸ್ಯರಾದ ಅಶೋಕ ಜಾಡಬಂಡಿ, ಅಲ್ತಾಫ್‌ಖಾನ್‌ ಪಠಾಣ್‌, ಗುರುಶಾಂತಪ್ಪ ಯತ್ತಿನಹಳ್ಳಿ, ಕ್ಷೇತ್ರ ಸಮನ್ವಾಧಿಕಾರಿ ಜಗದೀಶ ಬಳಿಗಾರ, ಮೇಘರಾಜ ಮಾಳಗಿಮನಿ ಸೇರಿದಂತೆ ಶಿಕ್ಷಣ ಇಲಾಖೆ ಸಿಬ್ಬಂದಿ, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಸಹ ಶಿಕ್ಷಕರು ಹಾಗೂ ಪಾಲಕರು ಇದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.