ಗ್ರಾಮೀಣ ಮಕ್ಕಳ ಶೈಕ್ಷಣಿಕ ಸಾಧನೆ ಶ್ಲಾಘನೀಯ

ವಿದ್ಯಾರ್ಥಿಗಳಿಗೆ ಪೋಷಕರ-ಶಿಕ್ಷಕರ ಪ್ರೋತ್ಸಾಹ ಅಗತ್ಯ •ಸತತ ಪರಿಶ್ರಮದಿಂದ ಓದಿದರೆ ಯಶಸ್ಸು

Team Udayavani, May 10, 2019, 3:56 PM IST

haveri-4-tdy..

ಹಿರೇಕೆರೂರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಶಾಸಕ ಬಿ.ಸಿ.ಪಾಟೀಲ ಸನ್ಮಾನಿಸಿದರು.

ಹಿರೇಕೆರೂರ: ಗ್ರಾಮೀಣ ಪ್ರದೇಶಗಳ ಮಕ್ಕಳು ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವಂತೆ ಶೈಕ್ಷಣಿಕ ಸಾಧನೆ ಮಾಡಿರುವುದು ಸಂತಸ ತಂದಿದೆ. ಮಕ್ಕಳು ಉನ್ನತ ಗುರಿಹೊಂದಿ, ಉತ್ತಮ ಶಿಕ್ಷಣ ಪಡೆದು ಸಾಧನೆಗೈದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಬಿ.ಸಿ.ಪಾಟೀಲ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶೇ.100 ಫಲಿತಾಂಶ ಗಳಿಸಿದ ಶಾಲಾ ಮುಖ್ಯಸ್ಥರನ್ನು ಸನ್ಮಾನಿಸಿ ಅವರು ಮಾತನಾಡಿದರು.

ವಿದ್ಯೆ ಯಾರ ಸ್ವತ್ತೂ ಅಲ್ಲ. ಸತತ ಪರಿಶ್ರಮದಿಂದ ವ್ಯಾಸಂಗ ಮಾಡಿದಾಗ ಸುಲಭವಾಗಿ ಜ್ಞಾನ ಸಂಪಾದನೆ ಸಾಧ್ಯವಾಗುತ್ತದೆ. ಪೋಷಕರ ಮತ್ತು ಶಿಕ್ಷಕರ ಪ್ರೋತ್ಸಾಹದಿಂದ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಿತ್ತಿವೆ. ಶಿಕ್ಷಕರು ಮಕ್ಕಳಿಗೆ ವಿದ್ಯಾದಾನ ಮಾಡಿ ಅವರ ಭವ್ಯ ಭವಿಷ್ಯಕ್ಕೆ ಬುನಾದಿ ಹಾಕುವ ಕಾರ್ಯ ಶ್ಲಾಘನೀಯ ಎಂದರು.

ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುಂದಿನ ಶೈಕ್ಷಣಿಕ ಜೀವನವನ್ನು ರೂಪಿಸಿಕೊಂಡು ಉನ್ನತ ವ್ಯಾಸಂಗ ಮಾಡಬೇಕು. ಪ್ರಸ್ತುತ ಎಲ್ಲ ರಂಗಗಳಲ್ಲಿ ವಿಫುಲ ಅವಕಾಶಗಳಿದ್ದು, ಅವಕಾಶಗಳನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಒಲವು ಹೆಚ್ಚಿಸಿಕೊಂಡು, ಸಾಧಿಸುವ ಛಲದೊಂದಿಗೆ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ದೇಶಕ್ಕೆ ಕೊಡೆಗೆ ನೀಡುವ ಮೂಲಕ ತಾಲೂಕಿಗೆ ಕೀರ್ತಿ ತರಬೇಕು ಎಂದು ಹಾರೈಸಿದರು.

ತಾಲೂಕಿಗೆ ಅತೀ ಹೆಚ್ಚು ಅಂಕ ಗಳಿಸಿದ 14 ವಿದ್ಯಾರ್ಥಿಗಳಿಗೆ ಶಾಸಕರು ವೈಯಕ್ತಿಕವಾಗಿ ತಲಾ 2 ಸಾವಿರ ರೂ. ನಗದು ಪ್ರತಿಭಾ ಪುರಸ್ಕಾರ ನೀಡಿದರು. ಅವರ ಕೌರವ ಶಿಕ್ಷಣ ಸಂಸ್ಥೆಯ ಪಿಯು ಕಾಲೇಜಿನಲ್ಲಿ ಉಚಿತ ಪ್ರವೇಶಾತಿ ಕಲ್ಪಿಸುವುದಾಗಿ ತಿಳಿಸಿದರು.

ರಟ್ಟೀಹಳ್ಳಿ ಕುಮಾರೇಶ್ವರ ಬಾಲಕರ ಪ್ರೌಢ ಶಾಲೆಯ ಗೌತಮಿ ದೊಡ್ಮನಿ (ಶೇ.97.76), ರಟ್ಟೀಹಳ್ಳಿ ನೊಬೆಲ್ ಪ್ರೌಢ ಶಾಲೆಯ ಮಲ್ಲಿಕಾರ್ಜುನ ಕರೇಗೌಡ್ರ (ಶೇ.97.44), ಹಿರೇಕೆರೂರಿನ ಸರ್ಕಾರಿ ಉರ್ದು ಪ್ರೌಢ ಶಾಲೆಯ ಜೋಯ್ನಾ ಖಾಜಿ (ಶೇ.96.96), ಕೋಡ ಸರ್ಕಾರಿ ಉರ್ದು ಪ್ರೌಢ ಶಾಲೆಯ ಸಾನಿಯಾ ಬಾಳಿಕಾಯಿ (ಶೇ.96.96), ರಟ್ಟೀಹಳ್ಳಿ ನೊಬೆಲ್ ಪ್ರೌಢ ಶಾಲೆಯ ನಿರಂಜನ ಪಾಟೀಲ (ಶೇ.96.8),ಕೋಡ ಸರ್ಕಾರಿ ಉರ್ದು ಪ್ರೌಢ ಶಾಲೆಯ ಶೀಬಾಬಾನು ನಾಸೂರು (ಶೇ.96.48), ಕೋಡ ಸರ್ಕಾರಿ ಉರ್ದು ಪ್ರೌಢ ಶಾಲೆಯ ನಾಜಿಯಾ ಪರವೀನ್‌ ಶೆರಗಾರ (ಶೇ.95.84), ದೂದೀಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಸೌಮ್ಯ ಮರ್ಕಳ್ಳಿ (ಶೇ.95.84), ರಟ್ಟೀಹಳ್ಳಿ ಕುಮಾರೇಶ್ವರ ಬಾಲಕರ ಪ್ರೌಢ ಶಾಲೆಯ ವರ್ಷಾ ಪವಾರ (ಶೇ.95.84), ಕೋಡ ಸರ್ಕಾರಿ ಉರ್ದು ಪ್ರೌಢ ಶಾಲೆಯ ಮುಸ್ಕಾನ್‌ ಬಾನು ವಡೇರಹಳ್ಳಿ (ಶೇ.94.88), ನೂಲಗೇರಿ ಸರ್ಕಾರಿ ಪ್ರೌಢ ಶಾಲೆಯ ಲತಾ ಬಣಕಾರ (ಶೇ.94.78), ಹಿರೇಕೆರೂರಿನ ಡಿಆರ್‌ಟಿ ಆಂಗ್ಲ ಮಧ್ಯಮ ಪ್ರೌಢ ಶಾಲೆಯ ಅಕ್ಷತಾ ಚಂದ್ರಕೇರಿ (ಶೇ.94.78) ಹಾಗೂ ಶಿವರಾಜ ನೇಕಾರ (94.78) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ರಟ್ಟೀಹಳ್ಳಿ ಕುಮಾರೇಶ್ವರ ಪಿಯು ಕಾಲೇಜಿನ ಸಿದ್ದಪ್ಪ ಚೂರೇರ (ಶೇ.97) ಮತ್ತು 100 ಕ್ಕೆ 100 ಫಲಿತಾಂಶ ಪಡೆದ ಯಡಗೋಡ ಗ್ರಾಮದ ಸರ್ಕಾರಿ ಪ್ರೌಢ ಶಾಲೆ, ಹಿರೇಕೆರೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ, ರಟ್ಟೀಹಳ್ಳಿಯ ತರಳಬಾಳು ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಬುರಡೀಕಟ್ಟಿಯ ಸೇಂಟ್ ಮೇರಿಸ್‌ ಪ್ರೌಢ ಶಾಲೆಯ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷಕುಮಾರ ತಳಕಲ್, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಸಿದ್ದಲಿಂಗಪ್ಪ, ತಾಪಂ ಸದಸ್ಯ ಬಸವರಾಜ ಭರಮಗೌಡ್ರ, ಪಪಂ ಸದಸ್ಯರಾದ ಅಶೋಕ ಜಾಡಬಂಡಿ, ಅಲ್ತಾಫ್‌ಖಾನ್‌ ಪಠಾಣ್‌, ಗುರುಶಾಂತಪ್ಪ ಯತ್ತಿನಹಳ್ಳಿ, ಕ್ಷೇತ್ರ ಸಮನ್ವಾಧಿಕಾರಿ ಜಗದೀಶ ಬಳಿಗಾರ, ಮೇಘರಾಜ ಮಾಳಗಿಮನಿ ಸೇರಿದಂತೆ ಶಿಕ್ಷಣ ಇಲಾಖೆ ಸಿಬ್ಬಂದಿ, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಸಹ ಶಿಕ್ಷಕರು ಹಾಗೂ ಪಾಲಕರು ಇದ್ದರು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.