ರಂಗೇರಿದ ಹಾವೇರಿ ಲೋಕ ಸಮರ


Team Udayavani, Apr 5, 2019, 2:26 PM IST

hav-1
ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ನೇರ ಸ್ಪರ್ಧೆ ಏರ್ಪಡಬಹುದಾದ ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಲೋಕಸಮರದ ಚುನಾವಣಾ ಕಣ ರಂಗೇರಿದೆ.
ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಇಬ್ಬರ ನಡುವೆ ಕ್ಷೇತ್ರದಲ್ಲಿ ನೇರ
ಹಣಾಹಣಿಗೆ ಆಖಾಡ ಸಿದ್ಧವಾಗಿದ್ದು, ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ತಮ್ಮದೇ ಆದ ರಣತಂತ್ರ ರೂಪಿಸಿಕೊಂಡಿವೆ. ಹಾಲಿ ಸಂಸದರಾಗಿರುವ ಶಿವಕುಮಾರ ಉದಾಸಿ ಹ್ಯಾಟ್ರಿಕ್‌ ಸಾಧನೆ ಮಾಡಲು ಹೊರಟಿದ್ದರೆ ಇದೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಲೋಕಸಮರದ ಆಖಾಡಕ್ಕಿಳಿದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ, ಬಿಜೆಪಿ ಅಭ್ಯರ್ಥಿಯ ಹ್ಯಾಟ್ರಿಕ್‌ ಗೆಲುವು ತಡೆದು ಕಾಂಗ್ರೆಸ್‌ ವಿಜಯ ಪತಾಕೆ ಹಾರಿಸಲು ಸಜ್ಜಾಗಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಏ. 3ರಂದು ನಾಮಪತ್ರ ಸಲ್ಲಿಸಿ ಬೃಹತ್‌ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನದೊಂದಿಗೆ ಚುನಾವಣಾ ಆಖಾಡಕ್ಕೆ ಪ್ರವೇಶ ಮಾಡಿದರೆ, ಗುರುವಾರ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಸಹ ಭವ್ಯ ಮೆರವಣಿಗೆಯೊಂದಿಗೆ ಬಲ ಪ್ರದರ್ಶಿಸಿ ಚುನಾವಣಾ ಕಣಕ್ಕಿಳಿದಿದ್ದಾರೆ.
ಗೆಲುವಿಗಾಗಿ ಸೆಣಸಾಟ: ಶಿವಕುಮಾರ ಉದಾಸಿ 2009, 2014 ಹೀಗೆ ಎರಡು ಬಾರಿ ಸತತ ಗೆಲುವು ಸಾಧಿಸಿ ಹ್ಯಾಟ್ರಿಕ್‌
ಗೆಲುವಿಗೆ ಸೆಣಸಾಟ ನಡೆಸಿದ್ದಾರೆ. ಎರಡು ಬಾರಿ ಕಾಂಗ್ರೆಸ್‌ನ ಮುಸ್ಲಿಂ ಅಲ್ಪಸಂಖ್ಯಾತ ಅಭ್ಯರ್ಥಿ ಸಲೀಂ ಅಹ್ಮದ್‌ ಅವರನ್ನು
ಪರಾಭವಗೊಳಿಸಿದ ಉದಾಸಿ, ಈಗ ಕಾಂಗ್ರೆಸ್‌ನ ಹೊಸ ಅಭ್ಯರ್ಥಿ ಡಿ.ಆರ್‌. ಪಾಟೀಲ ಅವರನ್ನು ಎದುರಿಸಲು ಅಗತ್ಯ
ಕಾರ್ಯತಂತ್ರ ರೂಪಿಸಿಕೊಂಡಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ ಇದೇ ಪ್ರಥಮ ಬಾರಿಗೆ ಕ್ಷೇತ್ರದಿಂದ ಲೋಕಸಭೆ ಚುನಾವಣೆ ಎದುರಿಸಲು
ಸಜ್ಜಾಗಿದ್ದಾರೆ. ಡಿ.ಆರ್‌. ಪಾಟೀಲ ನಾಲ್ಕು ಬಾರಿ ಶಾಸಕರಾಗಿದ್ದು ಗದಗ ಜಿಲ್ಲೆಯಲ್ಲಿ ಚಿರಪರಿಚಿತರು. ಡಿ.ಆರ್‌. ಪಾಟೀಲ ಅವರು ಕಳೆದೆರಡು ಚುನಾವಣೆಗಳಿಂದ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆಸಿದ್ದರು.
ಟಿಕೆಟ್‌ಗಾಗಿ ನಡೆಸಿದ ಪೈಪೋಟಿಯ ಕಾರಣದಿಂದಲೇ ಅವರು ಕ್ಷೇತ್ರದಲ್ಲಿ ಹೆಚ್ಚು ಚಿರಪರಿಚಿತರಾಗಿದ್ದಾರೆ. ಇನ್ನು ಡಿ.ಆರ್‌. ಪಾಟೀಲ ಅವರು ಕಾಂಗ್ರೆಸ್‌ನ ಪ್ರಭಾವಿ ಮುಖಂಡ ಎಚ್‌. ಕೆ. ಪಾಟೀಲ ಅವರ ಸಹೋದರ ಸಂಬಂ ಧಿಯಾಗಿದ್ದು
ಅವರ ಪ್ರಭಾವವೂ ಅವರ ಬೆನ್ನಿಗಿದೆ. ಅಪಾರ ರಾಜಕೀಯ ಅನುಭವದೊಂದಿಗೆ ಎದುರಾಳಿಯನ್ನು ಮಣಿಸಲು ಮುಂದಾಗಿದ್ದಾರೆ.
ಪ್ರಚಾರಾಸ್ತ್ರ : ಕ್ಷೇತ್ರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಈ ಬಾರಿ ಸ್ಥಳೀಯ ವಿಚಾರಗಳಿಗಿಂತ ರಾಷ್ಟ್ರೀಯ ವಿಚಾರಗಳನ್ನೇ ತಮ್ಮ ಪ್ರಚಾರದ ಪ್ರಮುಖ ಅಸ್ತ್ರಗಳನ್ನಾಗಿಸಿಕೊಂಡಿವೆ. ಮೋದಿ ಹಾಗೂ ರಾಹುಲ್‌ ಕುರಿತು ಟೀಕೆ, ಕೇಂದ್ರದಲ್ಲಿ ಆಡಳಿತದಲ್ಲಿದ್ದಾಗ ತಮ್ಮ ಪಕ್ಷದ ಸರ್ಕಾರಗಳು ಮಾಡಿದ ಸಾಧನೆ, ರಾಜಕೀಯ ಪಕ್ಷಗಳ ಮೇಲಿರುವ ರಾಷ್ಟ್ರೀಯ ಆಪಾದನೆಗಳೇ ಈ ಬಾರಿ ಪ್ರಚಾರದಲ್ಲಿ ಅಗ್ರಸ್ಥಾನ ಪಡೆಯುತ್ತಿವೆ. ಇವುಗಳ ಆಧಾರದಲ್ಲಿಯೇ ಚುನಾವಣೆ ಎದುರಿಸಲು ರಾಜಕೀಯ ಪಕ್ಷಗಳು ಸಜ್ಜಾಗಿವೆ.
ಧಾರವಾಡದಲ್ಲಿ ವಿನಯ್‌ ಉಮೇದುವಾರಿಕೆ
 ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಗುರುವಾರ ನಾಮಪತ್ರ ಸಲ್ಲಿಸಿದರು. ಬುಧವಾರ 8 ಸಾವಿರಕ್ಕೂ ಅಧಿಕ ಜನರೊಂದಿಗೆ ಬಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ನಾಮಪತ್ರ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಗುರುವಾರ 15 ಸಾವಿರದಷ್ಟು ಜನರೊಂದಿಗೆ ಆಗಮಿಸಿ ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯ ದಿನವಾಗಿತ್ತು.
ಮೆರವಣಿಗೆ ನಿಧಾನಕ್ಕೆ ಸಾಗಿದ್ದನ್ನು ಗಮನಿಸಿದ ವಿನಯ ಕುಲಕರ್ಣಿ ಅವರು ಮೊದಲೇ ಜಿಲ್ಲಾಧಿಕಾರಿ ಕಚೇರಿಗೆ
ಆಗಮಿಸಿ ನಾಮಪತ್ರದ ಒಂದು ಪ್ರತಿ ಸಲ್ಲಿಕೆ ಮಾಡಿದರು. ನಂತರ ಮರಳಿ ಮತ್ತೆ ಜುಬಿಲಿ ವೃತ್ತಕ್ಕೆ ತೆರಳಿ ಮೆರವಣಿಗೆ ಮೂಲಕ ಆಗಮಿಸಿ ಮತ್ತೆರಡು ಪ್ರತಿ ನಾಮಪತ್ರ ಸಲ್ಲಿಕೆ ಮಾಡಿದರು. ಮೊದಲ ಸಲ ಪ್ರತಿಜ್ಞಾವಿಧಿಯ ಪ್ರಮಾಣ ವಚನ ಓದುವಾಗ ಅವಸರದಲ್ಲಿ ವಿನಯ ಕುಲಕರ್ಣಿ ಅವರು ತಮ್ಮ ಹೆಸರು ಹೇಳದೇ ಓದಿದರು. ಜಿಲ್ಲಾಧಿಕಾರಿ ದೀಪಾ ಚೋಳನ್‌ ಸೂಚನೆ ಮೇರೆಗೆ ಮತ್ತೆ ಪ್ರತಿಜ್ಞಾವಿಧಿ ಓದಿದರು. ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ, ಮಾಜಿ ಸಂಸದ ಪ್ರೊ| ಐ.ಜಿ. ಸನದಿ, ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ, ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಶಾಸಕ ಎನ್‌. ಎಚ್‌. ಕೋನರಡ್ಡಿ, ನಾಗರಾಜ ಛಬ್ಬಿ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ವಿಧಾನ ಪರಿಷತ್‌ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಸದಾನಂದ ಡಂಗನವರ, ಅಲ್ಕೋಡ ಹನುಮಂತಪ್ಪ, ಎಂ.ಎಸ್‌. ಅಕ್ಕಿ, ಇಸ್ಮಾಯಿಲ್‌ ತಮಟಗಾರ, ಅನ್ವರ ಮುಧೋಳ, ಶರಣಪ್ಪ ಕೊಟಗಿ ಮೊದಲಾದವರು ವಿನಯ್‌ಗೆ ಸಾಥ್‌ ನೀಡಿದರು.
„ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.