‘ಅವ್ವ’ ಶಿಶುಪಾಲನಾ ಕೇಂದ್ರ ಉದ್ಘಾಟನೆ
ಸರ್ಕಾರಿ ಮಹಿಳಾ ನೌಕರರ ಮಕ್ಕಳ ಪಾಲನೆ
Team Udayavani, May 17, 2022, 2:50 PM IST
ಹಾವೇರಿ: ಜಿಲ್ಲಾಡಳಿತ ಹಾಗೂ ಜಿಪಂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರ ಮಕ್ಕಳ (5 ವರ್ಷದೊಳಗಿನ) ಆರೈಕೆಗೆ ಜಿಪಂ ಕಟ್ಟಡದಲ್ಲಿ ಆರಂಭಿಸಲಾದ “ಅವ್ವ’ ಶಿಶು ಪಾಲನಾ ಕೇಂದ್ರವನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೋಮವಾರ ಉದ್ಘಾಟಿಸಿದರು.
ಪಾಲನಾ ಕೇಂದ್ರದಲ್ಲಿ ಇರಿಸಲಾದ ಮಕ್ಕಳ ತೊಟ್ಟಿಲಿನಲ್ಲಿ ನೌಕರರ ಶಿಶುವೊಂದನ್ನು ಮಲಗಿಸಿದರು. ಕಚೇರಿ ಕೆಲಸದ ಸಮಯದಲ್ಲಿ ಮನೆಯಲ್ಲಿ 0-5 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು ವ್ಯವಸ್ಥೆ ಇಲ್ಲದ ಕಾಯಂ ಹಾಗೂ ಹೊರಗುತ್ತಿಗೆ ಮಹಿಳಾ ನೌಕರರು ತಮ್ಮ ಮಕ್ಕಳನ್ನು “ಅವ್ವ’ ಶಿಶುಪಾಲನಾ ಕೇಂದ್ರದಲ್ಲಿ ಬಿಡಬಹುದು.
ಬೆಳಗ್ಗೆ 10ರಿಂದ ಸಂಜೆ 5:30ರ ವರೆಗೆ ಮಕ್ಕಳ ಆರೈಕೆಗೆ ಆಯಾಗಳನ್ನು ನೇಮಕ ಮಾಡಲಾಗಿದೆ. ಅರ್ಹ ಮಕ್ಕಳಿಗೆ ಪ್ರಾಥಮಿಕ ಪೂರ್ವ ಶಿಕ್ಷಣ ನೀಡಲು ಶಿಕ್ಷಕರನ್ನು ಸಹ ನೇಮಕ ಮಾಡಲಾಗಿದೆ. ಜೊತೆಗೆ ಮಕ್ಕಳಿಗೆ ಅಲ್ಪೋಹಾರ ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆಟೋಟಕ್ಕೆ ಶಿಶುಪಾಲನಾ ಕೇಂದ್ರದಲ್ಲಿ ಆಟಿಕೆಗಳು, ತೊಟ್ಟಿಲು, ಆಕರ್ಷಕ ಗೋಡೆ ಬರಹ, ತೊಟ್ಟಿ, ಅಕ್ಷರ ಪಟ, ಚಿಕ್ಕ ಕುರ್ಚಿಗಳು ಸೇರಿದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಮಾತನಾಡಿ, ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ ಹಾಗೂ ಜಿಪಂನಲ್ಲಿ ಎರಡು ಕೇಂದ್ರ ಆರಂಭಿಸಲು ಅವಕಾಶವಿದ್ದು, ಜಿಲ್ಲಾಡಳಿತ ಹಾಗೂ ಜಿಪಂ ಎರಡು ಒಂದೇ ಆವರಣದಲ್ಲಿರುವುದರಿಂದ ಜಿಲ್ಲಾ ಕೇಂದ್ರದಲ್ಲಿ ಪ್ರಥಮವಾಗಿ ಆರಂಭವಾಗಿದೆ. ಈ ಕೇಂದ್ರದಲ್ಲಿ ಆರಂಭಿಕವಾಗಿ ಎಂಟು ಮಕ್ಕಳು ದಾಖಲಾಗಿದ್ದಾರೆ ಎಂದರು.
ಹೆಚ್ಚು ಮಹಿಳಾ ಕಾರ್ಮಿಕರು ಕೆಲಸ ಮಾಡುವ ರಾಣಿಬೆನ್ನೂರಲ್ಲಿ ಹಾಗೂ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ತಲಾ ಒಂದು “ಅವ್ವ’ ಶಿಶುಪಾಲನಾ ಕೇಂದ್ರಗಳನ್ನು ಶೀಘ್ರವಾಗಿ ಆರಂಭಿಸಲಾಗುವುದು. ಹೆಚ್ಚು ಮಹಿಳಾ ಕಾರ್ಮಿಕರು ಹೊಂದಿರುವ ತಾಲೂಕಾ ಕೇಂದ್ರಗಳಲ್ಲಿ “ಅವ್ವ’ ಶಿಶುಪಾಲನಾ ಕೇಂದ್ರ ತೆರೆಯಲಾಗುವುದು ಎಂದು ಹೇಳಿದರು. ಜಿಪಂ ಸಿಇಒ ಮಹಮ್ಮದ ರೋಷನ್, ಅಬಕಾರಿ ಇಲಾಖೆ ಉಪ ಆಯುಕ್ತರಾದ ಶೈಲಜಾ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಅಮೃತಗೌಡ ಪಾಟೀಲ, ಸ್ವಾದಾರ ಕೇಂದ್ರದ ಪರಿಮಳಾ ಜೈನ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ