ಹೀಗೆ ಬಂದು ಹಾಗೆ ಹೋದ ಸಚಿವರು!

2 ತಿಂಗಳ ಬಳಿಕ ಬಂದರೂ ಪ್ರಗತಿ ಸಭೆ ನಡೆಸಲಿಲ್ಲ •ಆಡಳಿತಾರೂಢ ಮೈತ್ರಿ ಪಕ್ಷಗಳ ಕಾರ್ಯಕರ್ತರಲ್ಲೂ ಅಸಮಾಧಾನ

Team Udayavani, Jul 2, 2019, 8:55 AM IST

hv-tdy-1..

ಹಾವೇರಿ: ಸಚಿವ ಜಮೀರ್‌ ಅಹ್ಮದಖಾನ್‌ ರೈತರೊಂದಿಗೆ ನಿಂತುಕೊಂಡೇ ಕೆಲ ನಿಮಿಷ ಮಾತನಾಡಿ ಮರಳಿದರು.

ಹಾವೇರಿ: ಬರೋಬರಿ ಎರಡು ತಿಂಗಳ ಬಳಿಕ ಸೋಮವಾರ ಜಿಲ್ಲೆಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದಖಾನ್‌, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಸಭೆ, ಚರ್ಚೆ ನಡೆಸದೆ ಮರಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆ ಭೇಟಿಯ ಪ್ರವಾಸ ಪಟ್ಟಿ ಪ್ರಕಟವಾದಾಗ ಜನರು, ಸಚಿವರು ಈಗಲಾದರೂ ಜಿಲ್ಲೆಯ ಅಭಿವೃದ್ಧಿ ಕಡೆ ಲಕ್ಷ್ಯ ವಹಿಸಬಹುದು, ಬರಪೀಡಿತ ಜಿಲ್ಲೆಯ ಪರಿಸ್ಥಿತಿ ಅವಲೋಕಿಸಬಹುದು, ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲಿಸಬಹುದು, ಮಂದಗತಿಯಲ್ಲಿ ಸಾಗಿರುವ ಜಿಲ್ಲಾಡಳಿತಕ್ಕೆ ಚುರುಕು ಮುಟ್ಟಿಸಬಹುದು, ಜಿಲ್ಲೆಯ ಜನರ ಬೇಡಿಕೆ, ಸಮಸ್ಯೆಗಳನ್ನು ಆಲಿಸಬಹುದೆಂದೇ ಭಾವಿಸಿದ್ದರು.ಆದರೆ, ಸಚಿವರು ಇದಾವುದನ್ನೂ ಮಾಡದೆ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ವಾಪಸ್‌ ಹೋಗಿರುವುದು ಸಾರ್ವಜನಿಕರನ್ನು ಕೆರಳಿಸಿದೆ.

ಒಂದು ಕಡೆ ಮುಖ್ಯ ಮಂತ್ರಿಯವರು ಗ್ರಾಮ ವಾಸ್ತವ್ಯ ಮಾಡಿ ಜನರ ಸಮಸ್ಯೆಗಳಿಗೆ ಹತ್ತಿರದಿಂದ ಸ್ಪಂದಿಸುವ ಕೆಲಸ ಮಾಡುತ್ತಿದ್ದರೆ ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತಿರುವ ಸಚಿವ ಜಮೀರ್‌ ಅಹ್ಮದಖಾನ್‌ ಮಾತ್ರ ಜಿಲ್ಲೆಯ ಜನರ ಕೈಗೆ ಸಿಗದೇ ಇರುವುದು ಸಾರ್ವಜನಿಕರಷ್ಟೇ ಅಲ್ಲ ಆಡಳಿತಾರೂಢ ಮೈತ್ರಿ ಪಕ್ಷಗಳ ಕಾರ್ಯಕರ್ತರು, ಮುಖಂಡರಲ್ಲಿ ಅಸಮಾಧಾನ ಮೂಡಿಸಿದೆ.

ಸೋಮವಾರ ಬೆಳಿಗ್ಗೆ 10.30ರ ಹೊತ್ತಿಗೆ ನಗರಕ್ಕಾಗಮಿಸಿದ ಸಚಿವ ಜಮೀರ್‌ ಅಹ್ಮದಖಾನ್‌, ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಕೆಲ ನಿಮಿಷ ಇದ್ದು ಬಳಿಕ ಶಿಶುವಿನಹಾಳದಲ್ಲಿ ಏರ್ಪಡಿಸಿದ್ದ ‘ಬಂಗಾರದಹಬ್ಬ’ ಕಾರ್ಯಕ್ರಮದಲ್ಲಿ ಭಾಗಿ ಯಾಗಿಯಾದರು. ಅಧಿಕಾರಿಗಳ ಸಭೆ ಮಧ್ಯಾಹ್ನ 3ಗಂಟೆಗೆ ನಿಗದಿಪಡಿಸಲಾಗಿತ್ತು. ಬಳಿಕ ಆ ಸಭೆಯನ್ನು 2ಗಂಟೆಗೆ ನಿಗದಿಪಡಿಸಿದರು. ಆದರೆ, ಸಚಿವರು ಮಾತ್ರ ಸಭೆ ಏರ್ಪಡಿಸಿದ್ದ ಜಿಲ್ಲಾಧಿಕಾರಿ ಕಚೇರಿಗೆ 4.30ರ ಹೊತ್ತಿಗೆ ಆಗಮಿಸಿ ಅಧಿಕಾರಿಗಳ ಸಭೆ ನಡೆಸದೆ ಸಮಯವಾಗಿದೆ ಎಂದು ಹೇಳಿ, ಅಲ್ಲೇ ಇದ್ದ ರೈತರೊಂದಿಗೆ ಕೆಲ ನಿಮಿಷ ಸಮಾಲೋಚಿಸಿ, ತರಾತುರಿಯಲ್ಲಿ ವಾಪಸ್ಸಾದರು.

ಪೊಲೀಸರಿಂದ ತಡೆ: ಬಹು ದಿನಗಳ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ನಗರಕ್ಕೆ ಬರುವ ವಿಷಯ ತಿಳಿದು ಬೇಡಿಕೆಗಳ ಮನವಿ ಸಲ್ಲಿಸಲೆಂದು ನೂರಾರು ಜನರು ಜಿಲ್ಲಾಡಳಿತ ಭವನಕ್ಕೆ ಬಂದಿದ್ದರು. ಸಚಿವರು ಬರುವ ವೇಳೆಗೆ ಪೊಲೀಸರು ಅವರನ್ನು ಜಿಲ್ಲಾಡಳಿತ ಭವನದ ಕಟ್ಟಡದ ಹೊರಗೆ ಕಳುಹಿಸಿದರು. ಕೆಲವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರಾದರೂ ಅವಕಾಶ ಮಾಡಿಕೊಡಲಿಲ್ಲ.

ಒಟ್ಟಾರೆ ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತಿರುವ ಸಚಿವ ಜಮೀರ್‌ ಅಹ್ಮದ್‌ ಜಿಲ್ಲೆಯ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದಕ್ಕೆ ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.

ಎರಡು ತಿಂಗಳ ನಂತರ ಬಂದ ಸಚಿವರು ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಪ್ರಗತಿ ಏನಾಗಿದೆ ಎಂಬುದರ ಬಗ್ಗೆ ಗಮನ ಹರಿಸಬೇಕಿತ್ತು. ವಿಳಂಬವಾಗಿ ಬಂದರೂ ಸಭೆ ನಡೆಸಿ ಪ್ರಗತಿ ಪರಿಶೀಲಿಸದಷ್ಟು ಸಂಯಮ ಸಚಿವರಿಗೆ ಇಲ್ಲದೇ ಇರುವುದು ಅವರಿಗೆ ಜಿಲ್ಲೆಯ ಮೇಲಿರುವ ನಿರಾಸಕ್ತಿ ತೋರಿಸುತ್ತದೆ. ಜಿಲ್ಲೆಯ ಉಸ್ತುವಾರಿ ನಿರ್ವಹಣೆ ಮಾಡಲು ಆಸಕ್ತಿ ಇಲ್ಲದಿದ್ದರೆ ಈ ಜವಾಬ್ದಾರಿಯನ್ನು ಬೇರೆಯವರಿಗೆ ಬಿಟ್ಟು ಕೊಡಬೇಕು.•ಶಿವಾನಂದ ಗುರುಮಠ, ರೈತ ಮುಖಂಡರು.

 

•ಎಚ್.ಕೆ.ನಟರಾಜ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.