ಮಧುವಣಗಿತ್ತಿಯಂತೆ ಶೃಂಗಾರಗೊಂಡ ಮಾದರಿ ಮತಗಟ್ಟೆ


Team Udayavani, Apr 23, 2019, 2:06 PM IST

gad-4

ಅಕ್ಕಿಆಲೂರು: ಏ. 23ರಂದು ನಡೆಯಲಿರುವ ಲೋಕಸಭೆ ಚುನಾವಣೆ ನಿಮಿತ್ತ ಮತದಾರರನ್ನು ಮತದಾನ ಕೇಂದ್ರಗಳತ್ತ ಸೆಳೆಯುವ ಉದ್ಧೇಶದಿಂದ ಇಲ್ಲಿನ ಗ್ರಾಪಂ ಮತಗಟ್ಟೆ ಮಾದರಿ ಮತಗಟ್ಟೆಯಾಗಿ ಆಯ್ಕೆಯಾಗಿದ್ದು, ಗ್ರಾಪಂ ಆವರಣದಲ್ಲಿ ಮಾದರಿ ಮತಗಟ್ಟೆ ನಿರ್ಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಲಯ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ಮತ್ತು ವಿಕಲಚೇತನರ ಕೊಠಡಿ, ವಿಶ್ರಾಂತಿ ಕೊಠಡಿ, ಮತಗಟ್ಟೆ ಅಧಿಕಾರಿಗಳ ಕೊಠಡಿಗಳು ಕೈಬೀಸಿ ಕರೆಯುವಂತೆ ಸಿಂಗಾರಗೊಂಡಿರುವ ಗ್ರಾಪಂ ಆವರಣ, ವಿಶೇಷ ಆಸನಗಳ ವ್ಯವಸ್ಥೆ ಸೇರಿದಂತೆ ಇನ್ನಿತರ ವಿಶೇಷ ಸೌಲಭ್ಯಗಳನ್ನು ಮಾದರಿ ಮತಗಟ್ಟೆ ಒಳಗೊಂಡಿದ್ದು, ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸದ್ಯ ಮತದಾರರನ್ನು ತನ್ನತ್ತ ಆಕರ್ಷಿಸುತ್ತಿದೆ.

ಗ್ರಾಮ ಪಂಚಾಯಿತಿ ಆಡಳಿತ ವರ್ಗ ಮತ್ತು ಸಿಬ್ಬಂದಿ ವರ್ಗದವರು ತಮ್ಮ ಇಚ್ಛಾಶಕ್ತಿಯಿಂದ ನಿರ್ಮಿಸಿರುವ ಈ ಮಾದರಿ ಮತಗಟ್ಟೆ ಮತ ಚಲಾವಣೆ ಮಾಡಲು ಹಿಂದೇಟು ಹಾಕುವ ಮತದಾರರಿಗೆ ಮತದಾನದ ಮಹತ್ವ ತಿಳಿಸಲು ಸನ್ನದ್ಧವಾಗಿ ನಿಂತಿದೆ. ತಾಲೂಕಿಗೆ ಒಂದರಂತೆ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಇಲ್ಲಿನ ಗ್ರಾಪಂ ಕಾರ್ಯಾಲಯ ವಿಶೇಷ ಮತಗಟ್ಟೆಯಾಗಿ ನಿರ್ಮಾಣಗೊಂಡಿದೆ.

ಮಾದರಿ ಮತಗಟ್ಟೆಯಲ್ಲಿ ಎಲ್ಲ ಸೌಕರ್ಯಗಳೂ ಶಿಸ್ತುಬದ್ಧವಾಗಿ ನಿರ್ಮಾಣಗೊಂಡಿದ್ದು, ಮತದಾನದ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಆಕರ್ಷಣೆಯಾಗಿದೆ. ಗ್ರಾಪಂ ಕಾರ್ಯಾಲಯವೂ ಕೂಡ ಮದುವೆ ಮನೆಯಂತೆ ಸಿಂಗಾರಗೊಂಡಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಂಪೂರ್ಣವಾಗಿ ಬಿಳಿ ಬಟ್ಟೆ, ಬಲೂನ್‌, ಪ್ರತ್ಯೇಕ ಆಸನಗಳ ವ್ಯವಸ್ಥೆ, ಫ್ಯಾನ್‌ ಸೇರಿದಂತೆ ಆಕರ್ಷಣೆಗೆ ಪ್ರಾಮುಖ್ಯತೆ ನೀಡಲಾಗಿದೆ.

ಗಾರ್ಡನ್‌ ಪ್ರಮುಖ ಆಕರ್ಷಣೆ: ತಾಲೂಕಿನಲ್ಲಿ ಅತ್ಯಂತ ಸುಂದರವಾದ ಗ್ರಾಪಂ ಕಾರ್ಯಾಲಯವಾಗಿ ಅಕ್ಕಿಆಲೂರು ಗ್ರಾಪಂ ರೂಪುಗೊಂಡಿದ್ದು, ಇಲ್ಲಿ ಸುತ್ತಲೂ ನಿರ್ಮಿಸಲಾಗಿರುವ ಗಾರ್ಡನ್‌ನಿಂದಾಗಿ ಮಾದರಿ ಮತಗಟ್ಟೆಯನ್ನು ಇಲ್ಲಿಯೆ ಸ್ಥಾಪಿಸಿಲಾಗಿದ್ದು ಮತದಾರರನ್ನು ಆಕರ್ಷಿಸುತ್ತಿದೆ. ಮತದಾನಕ್ಕಾಗಿ ಬರುವ ಮತದಾರರಿಗೆ ಬಿಸಿಲು ಕಾಡದಂತೆ ಪೆಂಡಾಲ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಒಟ್ಟಾರೆ ಮತದಾನದ ಜಾಗೃತಿ ಮತ್ತು ಮತದಾನದ ಪ್ರಮಾಣದಲ್ಲಿ ಹೆಚ್ಚಳ ತರುವುದು ಮಾದರಿ ಮತಗಟ್ಟೆಯ ಪ್ರಮುಖ ಉದ್ಧೇಶವಾಗಿದೆ.

ಮಾದರಿ ಮತಗಟ್ಟೆಯಾಗಿ ಅಕ್ಕಿಆಲೂರು ಗ್ರಾಪಂ ಕಾರ್ಯಾಲಯ ಆಯ್ಕೆಗೊಂಡಿರುವುದು ಸಂತಸ ತಂದಿದೆ. ಇಲ್ಲಿನ ಗಾರ್ಡನ್‌ ವ್ಯವಸ್ಥೆ, ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ, ಹಾಲ್ ವ್ಯವಸ್ಥೆ ಎಲ್ಲವನ್ನು ಪರಿಗಣಿಸಿ ಜಿಲ್ಲಾಡಳಿತ ಮಾದರಿ ಮತಗಟ್ಟೆ ಸ್ಥಾಪಿಸಲು ಅನುವು ಮಾಡಿಕೊಟ್ಟಿದೆ. ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಿಸಬೇಕಿದೆ.
• ಪಿ.ಎಸ್‌.ಬಿಜ್ಜೂರ, ಗ್ರಾಪಂ ಪಿಡಿಒ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri Congress candidate Anandaswamy Gaddadevaramath filed nomination papers

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.