ಖಾಸಗಿ ಶಾಲೆಗೆ ಮಕ್ಕಳನ್ನು ಕಳುಹಿಸೋದೇ ಪ್ರತಿಷ್ಠೆ

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆತರೂ ಮನಸ್ಸು ಮಾಡದ ಪಾಲಕರು

Team Udayavani, Jul 7, 2019, 3:45 PM IST

hv-tdy-4..

ಬ್ಯಾಡಗಿ: 'ಗುರುಪ್ರೇರಣಾ' ತರಬೇತಿ ಕಾರ್ಯಾಗಾರವನ್ನು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಫ್‌.ಬಾರ್ಕಿ ಉದ್ಘಾಟಿಸಿದರು.

ಬ್ಯಾಡಗಿ: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದ್ದರೂ ಮಕ್ಕಳನ್ನು ಖಾಸಗಿ ಶಾಲೆಗೆ ಸೇರುಸುವುದನ್ನೇ ಪ್ರತಿಷ್ಠೆ ಮಾಡಿಕೊಂಡ ಪಾಲಕರು, ಸರ್ಕಾರದ ಉಚಿತ ಸೌಲಭ್ಯಗಳ ಹೊರತಾಗಿಯೂ ಇತ್ತಕಡೆ ಮುಖ ಮಾಡುತ್ತಿಲ್ಲ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಫ್‌.ಬಾರ್ಕಿ ಕರೆ ನೀಡಿದರು.

ಶಿಡೇನೂರಿನ ಎಸ್‌ಜಿಬಿಡಿ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಸರ್‌ ಸಿ.ವಿ.ರಾಮನ್‌ ವಿಜ್ಞಾನ ವೇದಿಕೆ ತಾಲೂಕು ಘಟಕಗಳ ಆಶ್ರಯದಲ್ಲಿ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕರಿಗಾಗಿ ಏರ್ಪಡಿಸಿದ್ದ ‘ಗುರುಪ್ರೇರಣಾ’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಕರ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲಿನ ಮೋಹದಿಂದಾಗಿ ವ್ಯವಸ್ಥೆಗೆ ಅಳಿವು ಉಳಿವಿನ ಪ್ರಶ್ನೆ ಎದುರಾಗಿದ್ದು, ಇನ್ನಾದರೂ ಸರ್ಕಾರಿ ಶಾಲೆಗಳ ಶಿಕ್ಷಕರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಕುರಿತು ಕಲಿಕಾ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಕಳೆದೊಂದು ವರ್ಷಗಳಿಂದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಖಾಸಗಿ ಶಾಲೆಗಳ ಬಣ್ಣಬಣ್ಣದ ಕಟ್ಟಡಗಳಿಂದ ಆಕರ್ಷಣೆಗೊಳಗಾದ ಪಾಲಕರು ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುತ್ತಿದ್ದಾರೆ. ಇನ್ನಾದರೂ ನಮ್ಮ ಸರ್ಕಾರಿ ಶಾಲೆಗಳ ಶಿಕ್ಷಕರು ಶಾಲೆಯ ವಾತಾವರಣವನ್ನು ಉತ್ತಮವಾಗಿಟ್ಟುಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದರು.

ಶಿಕ್ಷಕರಲ್ಲೇ ನೂರೆಂಟು ಸಂಘಟನೆಗಳನ್ನು ಹುಟ್ಟುಹಾಕಿಕೊಳ್ಳಲಾಗಿದ್ದು, ಶಿಕ್ಷಕರ ನಡುವೆ ಗುಂಪುಗಾರಿಕೆ ಆರಂಭವಾಗಲು ಕಾರಣವಾಗಿದೆ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಉಸಿರುಗಟ್ಟಿದ ವಾತಾವರಣ ನಿರ್ಮಾಣವಾಗಿದ್ದು, ಭೋದನೆಗೆ ನಡೆಯಬೇಕಾಗಿದ್ದ ಪೈಪೋಟಿ ಬದಲಾಗಿ ಅಧಿಕಾರಕ್ಕಾಗಿ ನಡೆಯುತ್ತಿದೆ. ಗುಣಾತ್ಮಕ ಶಿಕ್ಷಣವೆಂಬುದು ನಮ್ಮಲ್ಲೇ ದೊರೆಯುತ್ತಿದೆ. ಅದಾಗ್ಯೂ ಬಹುತೇಕ ಶಿಕ್ಷಕರು ತಮ್ಮ ಸಾಮರ್ಥ್ಯವನ್ನು ಒರೆಗೆ ಹಚ್ಚುತ್ತಿಲ್ಲ ಎಂದು ಖೇದ ವ್ಯಕ್ತಪಡಿಸಿದರು.

ಖಾಸಗಿ ಶಾಲೆ ಆಡಳಿತ ಮಂಡಳಿಗಳು ಆಶ್ಚರ್ಯ ವ್ಯಕ್ತಪಡಿಸುವಷ್ಟರ ಮಟ್ಟಿಗೆ ಸರ್ಕಾರಿ ಶಾಲೆ ಮಕ್ಕಳ ಫಲಿತಾಂಶ ಬರಬೇಕು. ಒಂದು ವೇಳೆ ನಿರೀಕ್ಷಿತ ಫಲಿತಾಂಶ ಬರದೇ ಹೋದಲ್ಲಿ ಮುಖ್ಯಶಿಕ್ಷಕರು ಮತ್ತು ಅಲ್ಲಿನ ಸಹಶಿಕ್ಷಕರು ಆತ್ಮಾವಲೋಕನೆ ಮಾಡಿಕೊಳ್ಳಬೇಕು. ಇದನ್ನು ಬಿಟ್ಟು ಸಂಬಂಧವಿರದ ಕಾರಣಗಳನ್ನು ಮುಂದೊಡ್ಡಿ ತಮ್ಮ ಮೇಲಿನ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೆಲಸವಾಗಬಾರದು ಎಂದರು.

ಎಸ್‌ಜಿಬಿಡಿ ಪ್ರೌಢಶಾಲೆ ಮುಖ್ಯಶಿಕ್ಷಕ ಕೆ.ಎಸ್‌.ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸರ್‌ ಸಿ.ವಿ.ರಾಮನ್‌ ವಿಜ್ಞಾನ ವೇದಿಕೆಯ ಅಧ್ಯಕ್ಷ ಜೆ.ಎಸ್‌.ಹೇರೂರ, ರಮೇಶ ಮಳವಳ್ಳಿ, ರವಿ ಆನ್ವೇರಿ, ಸಿ.ಶಿವಕುಮಾರ, ಜಿ.ಬಿ.ಬೂದಿಹಾಳ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri Congress candidate Anandaswamy Gaddadevaramath filed nomination papers

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.