ಹಾವು ಹಿಡಿಯುವ ಪೊಲೀಸ್‌!


Team Udayavani, Feb 10, 2020, 5:09 PM IST

hv-tdy-1

ಹಾವೇರಿ: “ಹಾವು’ ಎಂಬ ಶಬ್ದ ಕೇಳಿದರೆ ಸಾಕು ಹೌಹಾರುವವರೇ ಹೆಚ್ಚು. ಅದರಲ್ಲಂತೂ ಮನೆಯೊಳಗೆ, ಅಂಗಳಕ್ಕೆ ಹಾವು ಹೆಡೆಎತ್ತಿ ಬಂತೆಂದರೆ ಕಾಲಿಗೆ ಬುದ್ದಿ ಹೇಳುವವರೇ ಹೆಚ್ಚು. ಆದರೆ, ಹಾವೇರಿಯ ರಮೇಶ “ಹಾವು’ ಎಂಬ ಶಬ್ದ ಕೇಳಿದರೆ ಸಾಕು ಹಾವಿದ್ದಲ್ಲಿಯೇ ಓಡಿ ಬರುತ್ತಾರೆ!

ಈ ರಮೇಶ ಅವರಿಗೆ ಹಾವು ಎಂದರೆ ಸ್ವಲ್ಪವೂ ಅಂಜಿಕೆಯೇ ಇಲ್ಲ. ವೃತ್ತಿಯಲ್ಲಿ ಪೊಲೀಸ್‌ ಆಗಿದ್ದು, ಈತನ ಪೊಲೀಸ್‌ ವರಸೆಗೆ ಹಾವುಗಳು ಹೆದರಿ ಸುಮ್ಮನೆ ಅವರ ಕೈವಶ ವಾಗುತ್ತವೆ. ಪೊಲೀಸ್‌ ವೃತ್ತಿಯ ಜತೆಗೆ ಹಾವು ಹಿಡಿಯುವ ಪ್ರವೃತ್ತಿ ಹೊಂದಿರುವ ರಮೇಶ, ಹಾವಿಗೆ ಯಾವ ತೊಂದರೆಯಾಗದ ಹಾಗೆ ಸಲೀಸಾಗಿ ಹಾವು ಹಿಡಿದು ಹತ್ತಿರದ ಕಾಡಿಗೆ ಬಿಟ್ಟು ಬರುತ್ತಾರೆ. ರಮೇಶ ಅವರು ಪೊಲೀಸ್‌ ಇಲಾಖೆ ಸೇರಿ 15ವರ್ಷ ಗತಿಸಿವೆ. ಜಿಲ್ಲಾ ಸಶಸ್ತ್ರ ಪೊಲೀಸ್‌ ಪಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಹಾವೇರಿಯ ಸುತ್ತಮುತ್ತಲಿನ ಜನರು ಇವರನ್ನು “ಸ್ನೇಕ್‌ ರಮೇಶ’ ಎಂದೇ ಕರೆಯುತ್ತಾರೆ.

ಹಾವು ಹಿಡಿಯುವ ಧೈರ್ಯ, ಚಾಕಚಕ್ಯತೆ ಇವರಿಗೆ ಬಾಲ್ಯದಿಂದಲೇ ಬಳುವಳಿಯಾಗಿ ಬಂದಿದೆ. ರಮೇಶ ಅವರ ತಂದೆ ಹಿರೇಕೆರೂರ ತಾಲೂಕಿನ ಡಮ್ಮಳ್ಳಿ ಗ್ರಾಮದ ನಿವಾಸಿ. ಅವರು ಮೀನುಗಳನ್ನು ಹಿಡಿಯಲು ಕೆರೆಗಳಿಗೆ ತೆರಳುತ್ತಿದ್ದರು. ಮೀನಿನ ಬಲೆಯಲ್ಲಿ ಸಣ್ಣಪುಟ್ಟ ಹಾವುಗಳು ಸಹ ಬಂದು ಬಿಡುತ್ತಿದ್ದವು. ತಂದೆಯೊಡನೆ ರಮೇಶ ಆ ಕಾಲದಲ್ಲಿಯೇ ಅವುಗಳನ್ನು ಹಿಡಿದು ಜೀವಂತವಾಗಿ ಹೊರಗೆ ಬಿಡುತ್ತಿದ್ದರು. ಹೀಗಾಗಿ ಅವರಿಗೆ ಹಾವೆಂದರೆ ಅಂಜಿಕೆ ಎಂಬುದೇ ಇಲ್ಲ. ಇದೇ ಮುಂದೆ ರಮೇಶ ಅವರಿಗೆ ಹವ್ಯಾಸವಾಗಿ ಬಿಟ್ಟಿದೆ. ಯಾರಾದರೂ ಹಾವು ಬಂದಿದೆ ಎಂದಾಗ ಪ್ರೌಢಶಾಲೆಯಲ್ಲಿದ್ದಾಗಲೂ ಅನೇಕ ಹಾವುಗಳನ್ನು ರಮೇಶ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ನಂತರದ ಅವ ಧಿಯಲ್ಲಿ ಹಾವು ಹಿಡಿಯ ಬಲ್ಲ ಅನೇಕ ವ್ಯಕ್ತಿಗಳನ್ನು ಭೇಟಿ ಮಾಡಿ ಅವರು ಅನುಸರಿಸುವ ತಂತ್ರಗಾರಿಕೆಯನ್ನು ಅರಿತುಕೊಂಡು ಅದನ್ನು ಪ್ರಯೋಗಿಸಲು ಶುರುಮಾಡಿದ್ದು, ಈಗ ಹಾವು ಹಿಡಿಯುವುದರಲ್ಲಿ ಕರಗತರಾಗಿದ್ದಾರೆ.

ಈ ವರೆಗೆ 3500ಕ್ಕೂ ಅಧಿಕ ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ನಾಗರಹಾವು, ಕೊಳಕ ಮಂಡಲ, ನೀರು ಹಾವು, ಹಸಿರು ಹಾವು ಇತ್ಯಾದಿ 8-10 ಜಾತಿಯ ಹಾವುಗಳನ್ನು ಹಿಡಿದ ಸಾಹಸಿಯಾಗಿದ್ದಾರೆ.ಬರಿ ಕೈಯಿಂದಲೇ ಹಾವಿನ ಬಾಲ ಹಿಡಿದುಅದನ್ನು ಚೀಲಕ್ಕೆ ಹಾಕುತ್ತಾರೆ. ಹಾವು ಬಂದಿದೆ ಎಂದು ಯಾರೇ ಕರೆ ಮಾಡಿದರೂ ಸಾಕು ರಮೇಶ ಬಿಡುವಿದ್ದರೆ ಸ್ಥಳಕ್ಕೆ ಧಾವಿಸಿ, ಹಾವನ್ನು ಹಿಡಿದು ಹಾವುಗಳನ್ನು ಸಾಯಿಸದೇ ಅವುಗಳಿಗೂ ಬದುಕುವ ಅವಕಾಶ ನೀಡಿ ಎಂದು ಜನರಲ್ಲಿ ತಿಳಿವಳಿಕೆ ನೀಡುತ್ತಾರೆ. ಪೊಲೀಸ್‌ ಇಲಾಖೆಗೆ ಸೇರಿದ ಬಳಿಕ ಹಿರಿಯ ಅ ಧಿಕಾರಿಗಳು ಹಾವು ಹಿಡಿಯುವ ರಮೇಶ ಅವರ ಪ್ರವೃತ್ತಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಹಾವು ಯಾವಾಗ, ಎಲ್ಲಿ ಬರುತ್ತದೆಂದು ಹೇಳಲು ಆಗದು. ಆದ್ದರಿಂದ ನಿಮ್ಮ ಮೊಬೈಲ್‌ನಲ್ಲಿ ಸ್ನೇಕ್‌ ರಮೇಶ್‌ ಅವರನ್ನು ಸಂಪರ್ಕಿಸಲು ಮೊ. 81978 48386 /97425 63214ನ್ನು ನಮೂಸಿಟ್ಟುಕೊಂಡರೆ ಉಪಯೋಗಕ್ಕೆ ಬರಬಹುದು.

ಹಾವು ಹಿಡಿಯುವುದು ಅಪಾಯಕಾರಿ ಕೆಲಸ ಎಂದು ಗೊತ್ತಿದೆ. ಆದರೆ, ಈ ವರೆಗೂ ಯಾವುದೇ ತೊಂದರೆ ಎದುರಾಗಿಲ್ಲ. 3500ಕ್ಕೂ ಅಧಿಕ ಹಾವು ಹಿಡಿದಿದ್ದೇನೆ. ಇದರಲ್ಲಿ ತಂತ್ರಗಾರಿಕೆ ಮಹತ್ವ. ಹಾವುಗಳನ್ನು ಹಿಡಿಯುವ ವಿಚಾರದಲ್ಲಿ ಯಾವುದೇ ಫಲ ಅಪೇಕ್ಷಿಸದೆ ಇದೊಂದು ಸಾಮಾಜಿಕ ಸೇವೆ ಎಂದು ಮಾಡುತ್ತಿದ್ದೇನೆ.  –ರಮೇಶ, ಉರಗ ಪ್ರೇಮಿ ಪೊಲೀಸ್‌

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.