ರೈತ ಮಹಿಳೆ ಉದ್ಯಮಿಯಾದ ಕಥೆ!


Team Udayavani, Dec 21, 2019, 4:34 PM IST

hv-tdy-1

ಅಕ್ಕಿಆಲೂರು: ಮಹಿಳೆ ಮನಸ್ಸು ಮಾಡಿದರೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಬಲ್ಲಳು ಎಂಬುದಕ್ಕೆ ಸಮೀಪದ ಲಕ್ಷ್ಮೀಪುರ ನಾಗವೇಣಿ ಬಾಬಣ್ಣ ಗೊಲ್ಲರ ಎಂಬ ಮಹಿಳೆಯೇ ಸಾಕ್ಷಿ. ಕಳೆದ 15 ವರ್ಷಗಳಿಂದ ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿರುವ ಅವರು ಅದರಲ್ಲಿ ಯಶಸ್ಸನ್ನೂ ಕಂಡಿದ್ದಾರೆ.

ಪ್ರಾಥಮಿಕ ಹಂತದ ಶಿಕ್ಷಣವೂ ಪಡೆಯದ ನಾಗವೇಣಿ ಅವರು ಕೃಷಿ ಕ್ಷೇತ್ರದಲ್ಲಿ ಎಲ್ಲರೂ ಮೆಚ್ಚುವಂತಹ ಸಾಧನೆ ಮಾಡಿದ್ದಾರೆ. ಕೃಷಿ ಮೇಲೆ ಅವರಿಗೆ ಎಲ್ಲಿಲ್ಲದ ಒಲವು, ಶ್ರದ್ಧೆ. ಕೃಷಿ ಕೂಡ ಅವರ ಕೈಹಿಡಿದಿದೆ. ಬಡತನ ಸಾಧಕರಿಗೆ ಮಾರಕವಲ್ಲ ಎಂಬುದು ಅರಿತಿದ್ದ ನಾಗವೇಣಿ ಛಲದಿಂದಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಪತಿಗೆ ಆಸರೆಯಾಗಿ ನಿಂತಿರುವ ಅವರು ವರ್ಷದಿಂದ ವರ್ಷಕ್ಕೆ ಹೆಚ್ಚಿನ ಆದಾಯ ಗಳಿಸುತ್ತ ಇತರರಿಗೆ ಮಾದರಿ ಎನಿಸಿದ್ದಾರೆ.

ಶಾಲೆಯ ಮುಖವನ್ನೇ ನೋಡದ ನಾಗವೇಣಿ ಗೊಲ್ಲರ, ಎರೆಹುಳು ಸಾಕಾಣಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕಾಯಕದಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ. ಕೃಷಿ ಕುಟುಂಬದಿಂದ ಬಂದಿದ್ದ ನಾಗವೇಣಿ ರೈತ ಬಾಬಣ್ಣ ಗೊಲ್ಲರ ಅವರ ಕೈಹಿಡಿದು, ಪತಿಗೆ ಸಹಕಾರಿಯಾಗುವ ಉದ್ದೇಶದಿಂದ ಕೃಷಿ ಕಾಯಕಕ್ಕೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ. ಪತಿ ಬಾಬಣ್ಣರಿಗೆ ಎರೆಹುಳು ಸಾಕಾಣಿಕೆ ಬಗ್ಗೆ ಆಸಕ್ತಿ ಇತ್ತು. ಇದನ್ನರಿತ ನಾಗವೇಣಿ ತಾನೂ ಕೂಡ ಅವರೊಟ್ಟಿಗೆ ಎರೆಹುಳು ಸಾಕಾಣಿಕೆ ಮಾಡಬೇಕೆಂಬ ಹಂಬಲದಿಂದ ಬೇರೆಯವರು ಸಾಕಿದ್ದ 2 ಕೆಜಿ ಎರೆಹುಳು ತಂದು ಪೋಷಣೆ ಮಾಡಿದ್ದರು. ನಂತರ ಎರೆಹುಳು ಗೊಬ್ಬರ ತಯಾರಿಕೆಯನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಾರೆ. ನಾಗವೇಣಿ ಅವರು ಆಯ್ಕೆ ಮಾಡಿಕೊಂಡಿರುವ ಎರೆಹುಳು ಗೊಬ್ಬರ ತಯಾರಿಕೆ ಮತ್ತು ಎರೆಹುಳು ಸಾಕಣೆ ವೃತ್ತಿ ಇದೀಗ ಉದ್ಯಮ ಸ್ವರೂಪ ಪಡೆದುಕೊಳ್ಳುತ್ತಿದೆ. ಇವರು ತಯಾರಿಸುತ್ತಿರುವ ಎರೆಹುಳು ಗೊಬ್ಬರಕ್ಕೆ ಹೆಚ್ಚು ಬೇಡಿಕೆಯೂ ಬರಲಾರಂಭಿಸಿದೆ.  ಇಲ್ಲಿನ ಎರೆಹುಳು ಗೊಬ್ಬರ ಕುಂದಾಪುರ, ಉಡುಪಿ, ಮಹಾರಾಷ್ಟ್ರ, ಶಿವಮೊಗ್ಗ, ಗಂಗಾವತಿ, ರಾಯಚೂರು, ದಾವಣಗೆರೆ, ಬೆಳಗಾವಿ, ಧಾರವಾಡ ಹೀಗೆ ರಾಜ್ಯದ ವಿವಿಧ ಭಾಗಗಳಿಗೆ ತಲುಪುತ್ತಿದೆ.

ಸಹಾಯಧನ ಪಡೆದು ಸಾಹಸ: ಖಾದಿ ಗ್ರಾಮೋದ್ಯೋಗ ಯೋಜನೆಯಡಿ ಸಹಾಯಧನ ಪಡೆದು ನಾಗವೇಣಿ, ತನ್ನ ಬಳಿ ಇದ್ದ ಹಣವನ್ನೂ ಹಾಕಿ 39 ಅಡಿ ಉದ್ದ ಮತ್ತು 27 ಅಡಿ ಅಗಲದ ಶೆಡ್‌ ಅನ್ನು ಎರೆಹುಳು ಸಾಕಣೆ ಮತ್ತು ಗೊಬ್ಬರ ತಯಾರಿಕೆಗಾಗಿ ನಿರ್ಮಿಸಿದ್ದಾರೆ. ಅದರಲ್ಲಿ ಸುಮಾರು 10 ತೊಟ್ಟಿ ನಿರ್ಮಿಸಿಗೊಬ್ಬರ ತಯಾರಿಸಲು ಪ್ರಾರಂಭಿಸಿದ್ದರು. ಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದ್ದರಿಂದ ಒಂದು ನೆಲದ ತೊಟ್ಟಿ ಮತ್ತು ಒಂದು ತಿಪ್ಪೆ ತೊಟ್ಟಿಯನ್ನು ನಿರ್ಮಿಸಿ ಅದರಲ್ಲಿ ಎರೆಹುಳು ಬಿಟ್ಟು ಗೊಬ್ಬರ ತಯಾರಿಕೆಯಲ್ಲಿ ನಾಗವೇಣಿ ತೊಡಗಿದ್ದಾರೆ. “ಗೊಬ್ಬರದ ತೊಟ್ಟಿಗಳಿಗೆ ಹಸಿರೆಲೆ ಸೊಪ್ಪು, ಚದುರಂಗ ಸೊಪ್ಪು, ಗೊಬ್ಬರದ ಸೊಪ್ಪು ಬಿಳಿಹುಲ್ಲಿನ ಪುಡಿ ಇನ್ನು ಅನೇಕ ತ್ಯಾಜ್ಯವಸ್ತು ಹಾಕಿ ಕೊಳೆಯಲು ಬಿಟ್ಟು ನಂತರ ಎರೆಹುಳು ಬಿಡುತ್ತಾರೆ. ಶೇ.50 ತೇವಾಂಶ ಇರುವಂತೆ ನೋಡಿಕೊಳ್ಳುತ್ತಾರೆ. ತೊಟ್ಟಿಗಳ ಮೇಲೆ ಬಿಸಿಲಿನ ಝಳ ಬೀಳದಂತೆ ಎಚ್ಚರ ವಹಿಸುತ್ತಾರೆ. ತ್ಯಾಜ್ಯ ವಸ್ತುಗಳನ್ನೆಲ್ಲ ಹುಳುಗಳುತಿಂದು ಹಾಕಿ ಚಹಾಪುಡಿಯಂತಹ ಎರೆಹುಳು ಗೊಬ್ಬರ ಸಿದ್ಧವಾಗುತ್ತದೆ. ಯುಡ್ರಿಲೇಸ್‌ ಜರ್ಮನ್‌ ತಳಿ ಮತ್ತು ಐಸೇನೀಯಾ ಪೆಟಿಡಾ  ಎರೆಹುಳು ಸಾಕುವುದರಿಂದ ಗೊಬ್ಬರ ಬೇಗ ಸಿದ್ಧವಾಗುತ್ತದೆ’ ಎನ್ನುತ್ತಾರೆ ನಾಗವೇಣಿ.

ತಾವು ತಯಾರಿಸಿದ ಗೊಬ್ಬರ ತಮ್ಮ ಸ್ವಂತ ಹೊಲಕ್ಕೆ ಉಪಯೋಗಿಸುತ್ತಾರೆ ಮತ್ತು ತಾವೇ ಸಿದ್ಧಪಡಿಸಿದ ಸಂಜೀವಿನಿ ಎರೆ ಗೊಬ್ಬರ ಎಂ ಹೆಸರಿನಲ್ಲಿ ಬ್ರ್ಯಾಂಡೆಡ್‌ 50 ಕೆಜಿ ಚೀಲದಲ್ಲಿ ಮಾರಾಟ ಮಾಡುತ್ತಾರೆ. ಎರೆಹುಳು ಮಾರಾಟದಿಂದ ವರ್ಷಕ್ಕೆ ಏನ್ನಿಲ್ಲ ಎಂದರೂ 1ರಿಂದ 2 ಲಕ್ಷದವರೆಗೆ ಲಾಭ ಗಳಿಸುತ್ತಾರೆ. ತಮಗಿರುವ 5 ಎಕರೆ ಜಮೀನಿನಲ್ಲಿ ಭತ್ತ, ಅಡಕೆ, ಬಾಳೆ ಅಷ್ಟೇ ಅಲ್ಲದೇ ಹೈನುಗಾರಿಕೆ ಮಾಡಿದ್ದಾರೆ. ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಮತ್ತು ವಿನಾಕಾರಣ ಕಾಲಹರಣ ಮಾಡುವ ಇಂದಿನ ಯುವಕ-ಯುವತಿಯರಿಗೆ ನಾಗವೇಣಿ ಗೊಲ್ಲರ ಮಾದರಿ ರೈತ ಮಹಿಳೆ.

ಕಳೆದ 10-15 ವರ್ಷಗಳಿಂದ ಎರೆಹುಳುವಿನ ಗೊಬ್ಬರ ತಯಾರಿಕೆಯಲ್ಲಿ ತೊಡಗಿಕೊಂಡಿದ್ದೇನೆ. ಸ್ವತಃ ನಮ್ಮ ಹೊಲಕ್ಕೆ ಗೊಬ್ಬರ ಸಿಂಪಡಿಸುವ ಮೂಲಕ ಕೃಷಿಯಿಂದ ಸಾಕಷ್ಟು ಲಾಭ ಬಂದಿದೆ. ಇತ್ತೀಚಿನ ದಿನಗಳಲ್ಲಿ ಗೊಬ್ಬರ ತಯಾರಿಕೆ ಹೆಚ್ಚಿನ ಆರ್ಥಿಕಸಹಾಯವನ್ನೂ ಮಾಡುತ್ತಿದೆ. ಪತಿಯ ಸಹಕಾರವೂ ಈ ಕಾರ್ಯಕ್ಕೆ ಪ್ರೇರಣೆಯಾಗಿದೆ.   –ನಾಗವೇಣಿ ಬಾಬಣ್ಣ ಗೊಲ್ಲರರೈತ ಮಹಿಳೆ

 

-ಪ್ರವೀಣಕುಮಾರ ಶಿ. ಅಪ್ಪಾಜಿ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.