ಭೂಮಿಗೆ ನ್ಯಾಯಯುತ ಬೆಲೆ ನೀಡಲು ಆಗ್ರಹ


Team Udayavani, Feb 5, 2020, 3:23 PM IST

hv-tdy-3

ಗುತ್ತಲ: ರಸ್ತೆ ಯೋಜನೆಗೆ ನಾವು ಭೂಮಿ ಕೊಡಲು ಸಿದ್ಧ. ಆದರೆ ನಮಗೆ ವಿಶೇಷ ಭೂ ಸ್ವಾಧೀನ ಎಂಬುದನ್ನು ಬಿಟ್ಟು ಸಾಮಾನ್ಯ ಸ್ವಾಧೀನ ಪ್ರಕ್ರಿಯೆಗೆ ಅವಕಾಶ ಮಾಡಿ. ಇದರಿಂದ ನ್ಯಾಯಾಲಯದಲ್ಲಿ ನಮ್ಮ ಭೂಮಿಗೆ ನ್ಯಾಯಯುತ ಬೆಲೆ ಪಡೆದುಕೊಳ್ಳಲು ಅವಕಾಶ ಸಿಗುತ್ತದೆ ಎಂದು ರೈತರು ಒಕ್ಕೊರಲಿನಿಂದ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಗದಗ-ಹೊನ್ನಾಳಿ ರಾಜ್ಯ ಹೆದ್ದಾರಿ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳಲಿರುವ ರೈತರ ಹಾಗೂ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅ ಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ರೈತರು ಆಗ್ರಹಿಸಿ ಮಾತನಾಡಿದರು.

ಜಿಪಂ ಮಾಜಿ ಸದಸ್ಯ ಸಿ.ಬಿ. ಕುರವತ್ತಿಗೌಡರ ಮಾತನಾಡಿ, ನಾವು ಬಂಗಾರದಂಥ ಭೂಮಿ ಕಳೆದುಕೊಳ್ಳುತ್ತಿದ್ದೇವೆ. ಪಟ್ಟಣದ ಸಮೀಪದಲ್ಲಿಯೇ ಇರುವ ನಮ್ಮ ಭೂಮಿಗೆ ಅಪಾರ ಬೆಲೆಯಿದೆ. ಸರ್ಕಾರದ ಯೋಜನೆಗೆ ನಮ್ಮ ವಿರೋಧವಿಲ್ಲ. ಪಪಂ ವ್ಯಾಪ್ತಿಯಲ್ಲಿನ 1, 2 ಹಾಗೂ 3 ಕಿ.ಮೀ ಹತ್ತಿರದ ಜಮೀನುಗಳಿಗೆ ಪ್ರತಿ ಗುಂಟೆಗೆ ಕನಿಷ್ಠ 90 ಸಾವಿರ ನಿಗ ದಿಯಾಗಿದೆ. ಆದರೆ ತಾವು ಪ್ರತಿ ಗುಂಟೆಗೆ ಕೊಡುವ 20-30 ಸಾವಿರ ರೂ. ನಮಗೆ ಒಪ್ಪಿಗೆ ಇಲ್ಲ ಎಂದರು.

ರೈತ ತೇಜರಾಜ ಜಾನ್ಮನಿ ಮಾತನಾಡಿ, ರಾಜ್ಯ ಹೆದ್ದಾರಿ ನಿರ್ಮಾಣವಾದರೆ ವಾಣಿಜ್ಯ ಮಳಿಗೆ, ದಾಬಾ, ಪೆಟ್ರೋಲ್‌ ಬಂಕ್‌ ಸ್ಥಾಪನೆ ಹೀಗೆ ಹಲವು ಉದ್ಯಮಗಳನ್ನು ಮಾಡಿ ರೈತರು ಶ್ರೀಮಂತರಾಗಬಹುದು. ಹಲವು ಆಮಿಷ ರೈತರಿಗೆ ನೀಡಿದ್ದೀರಿ. ಎಲ್ಲರಿಗೂ ಅವುಗಳನ್ನು ಮಾಡಲು ಸಾಧ್ಯವೆ. ಅಷ್ಟೊಂದು ಬಂಡವಾಳ ಹೂಡಲು ರೈತರಿಗೆ ಎಲ್ಲಿಂದ ಹಣ ಬರಬೇಕು? ಎಂದು ಪ್ರಶ್ನಿಸಿದಾಗ ಅಧಿಕಾರಿಗಳು ಉತ್ತರಿಸದೇ ತಡವರಿಸಿದರು. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ಇಂಜನಿಯರ್‌ ಎಚ್‌. ಎಸ್‌ ಆನಂದ, ನಿಮ್ಮ ಅಭಿಪ್ರಾಯ-ಸಲಹೆಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ನೀಡುತ್ತೇನೆ. ಬೇಡಿಕೆಯಂತೆ ಸಾಮಾನ್ಯ ಸ್ವಾಧೀನ ಪ್ರಕ್ರಿಯೆ ಮಾಡಲು ತುಂಬ ಸಮಯ ಬೇಕಾಗುತ್ತದೆ. ಹೆದ್ದಾರಿ ಕಾಮಗಾರಿ ಆರಂಭಿಸಲು ತಾವು ಅವಕಾಶ ಕೊಡಿ ಎಂದು ವಿನಂತಿಸಿದಾಗ ಎಲ್ಲ ರೈತರು ನಮ್ಮ ಬೇಡಿಕೆ ಈಡೇರಿಸದ ಹೊರತು ನಾವು ಒಪ್ಪಿಗೆ ನೀಡಲ್ಲ ಎಂದು ಪಟ್ಟು ಹಿಡಿದಾಗ ಸಭೆ ಮೊಟಕುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೊಟ್ರಯ್ಯಸ್ವಾಮಿ ಕೋವಳ್ಳಿಮಠ, ಪಿ.ಎಂ. ಕೋವಳ್ಳಮಠ, ಕುಮಾರ ಕುರಬಗೇರಿ, ಮಾಲತೇಶ ಕಿತ್ತೂರ, ಖಲೀಲಹ್ಮದ ಖಾಜಿ, ನೀಲಮಣಿಗಾರ, ವಿಶ್ವನಾಥ ನಂದಿ ಸೇರಿದಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಎಇ ಜಗದೀಶ ದೊಡ್ಡಮನಿ, ಎಇಇ ಶ್ರೀಶೈಲ ಹೊನಕೇರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.