ಮಹಾಪುರುಷರ ಬದುಕಿನ ಮೌಲ್ಯ ನಮಗೆ ದಾರಿದೀಪ
Team Udayavani, Oct 14, 2019, 1:02 PM IST
ಹಿರೇಕೆರೂರ: ರಾಮಾಯಣವು ಸರ್ವಕಾಲಕ್ಕೂ ಪ್ರಸ್ತುತವಾದ ಮಹಾಗ್ರಂಥ ವಾಗಿದ್ದು, ನಮ್ಮ ಬದುಕು ತಿದ್ದಿಕೊಳ್ಳುವ ಸರಳ ಹಾಗೂ ಸುಂದರ ಸಾಧನವಾಗಿದೆ. ನಾವು ಮಹಾಪುರುಷರ ಮೌಲ್ಯಗಳನ್ನು ಅರಿತು ನಡೆದಾಗ ಮಾತ್ರ ಪುನೀತರಾಗುತ್ತೇವೆ ಎಂದು ಮುಖ್ಯ ಶಿಕ್ಷಕ ಚಂದ್ರಶೇಖರ ಅಂಗಡಿ ಹೇಳಿದರು.
ರಟ್ಟಿಹಳ್ಳಿ ತಾಲೂಕಿನ ಕವಳಿಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉತ್ತಮ ಸಂಸ್ಕಾರ, ಒಳ್ಳೆಯ ಪರಿಸರ, ವಿದ್ಯೆ, ಉತ್ತಮ ಮಾರ್ಗದರ್ಶನಗಳಿಂದ ಮಹಾ ಪುರುಷರಾಗಲು ಸಾಧ್ಯ ಹಾಗೂ ಸಜ್ಜನರ ಸಹವಾಸದಿಂದ, ಸಾಧನೆಯ ಬಲದಿಂದ ಮಾತ್ರ ಶ್ರೇಷ್ಠತೆ ಬರುತ್ತದೆ ವಿನಃ ಹುಟ್ಟಿನಿಂದಲ್ಲ ಎಂಬುದು ವಾಲ್ಮೀಕಿಯವರ ಜೀವನ ಚರಿತ್ರೆ ಯಿಂದ ತಿಳಿಯುತ್ತದೆ. ಆದಿಕವಿ ವಾಲ್ಮೀಕಿಯವರು ವೇದೋಪನಿಷತ್ತು ಪುರಾಣಗಳಲ್ಲಿ ಕುಶಲಿಗಳಾಗಿದ್ದರು ಮತ್ತು ಮಹಾತಪಸ್ವಿಗಳಾಗಿದ್ದರು. 24 ಸಹಸ್ರ ಶ್ಲೋಕಗಳನ್ನೊಳಗೊಂಡ ರಾಮಾಯಣ ಎಂಬ ಮಹಾಕಾವ್ಯ ರಚಿಸಿದ್ದಾರೆ ಎಂದರು.
ಎಸ್ಡಿಎಂಸಿ ಅಧ್ಯಕ್ಷ ರಾಜಶೇಖರ ಹುಲಗಿನಕಟ್ಟಿ, ಉಪಾಧ್ಯಕ್ಷೆ ಲತಾ ಹಿರೇಮಠ, ಶಶಿಕಲಾ ಕಂಬಾಳಿಮಠ, ರೇಣುಕಾರಾಧ್ಯ ಹಿರೇಮಠ, ಪ್ರೇಮಾ ಹಿರೇಮಠ, ಮುತ್ತುರಾಜ ಪವಾರ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್