ಪಶು-ಪಕ್ಷಿಗಳ ದಾಹ ತಣಿಸಲು ನೀರಿನ ಗುಂಡಿ


Team Udayavani, Apr 13, 2019, 3:09 PM IST

hav-1
ಹಾನಗಲ್ಲ: ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪ, ಕೈ ಕುಡುತ್ತಿರುವ ಮಳೆಯಿಂದಾಗಿ ಬೇಸಿಗೆಯಲ್ಲಿ ಎಲ್ಲೆಡೆ ನೀರಿಗಾಗಿ ಹಾಹಾಕಾರ ಶುರುವಾಗುವುದು ಸಹಜ. ಅದು ಪ್ರಾಣಿಗಳಿಗೂ ತಪ್ಪಿದ್ದಲ್ಲ. ಮನುಷ್ಯ ತನ್ನ ಬೇಕು ಬೇಡಗಳನ್ನು ಪೂರೈಸಿಕೊಳ್ಳುವಷ್ಟು ಜಾಣ. ಆದರೆ, ಮೂಕಪ್ರಾಣಿಗಳ ವೇದನೆ ನೀಜಕ್ಕೂ ಶೋಚನೀಯ. ಇದನ್ನರಿತ ಅರಣ್ಯ ಇಲಾಖೆ ಪ್ರಾಣಿಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣಕ್ಕೆ ಮುಂದಾಗಿದೆ.
ಹಾನಗಲ್ಲ ಮೂಲತಃ ಮಲೆನಾಡು ಪ್ರದೇಶ. ಒಂದು ಕಾಲದಲ್ಲಿ ದಟ್ಟ ಕಾಡು, ವಿವಿಧ ಪ್ರಾಣಿಗಳು ಸ್ವತ್ಛಂದವಾಗಿ
ಜೀವಿಸುತ್ತಿದ್ದ ಭೂಮಿ ಮೇಲಿನ ಸ್ವರ್ಗದಂತಿತ್ತು. ಕಳೆದ ಕೆಲವು ವರ್ಷಗಳಿಂದ ನಿಧಾನವಾಗಿ ಅರಣ್ಯ ಪ್ರದೇಶ ಕ್ಷೀಣಿಸುತ್ತ ಅಷ್ಟೋ ಇಷ್ಟೊ ಉಳಿದಿದೆ. ಇನ್ನಾದರೂ ಜಾಗೃತರಾಗಿ ಉಳಿದ ಅರಣ್ಯವನ್ನಾದರೂ ಕಾಪಾಡಿಕೊಳ್ಳುವ
ಉದ್ದೇಶದಿಂದ ಸರ್ಕಾರ, ಸಾರ್ವಜನಿಕರು ಅರಣ್ಯ ಹಾಗೂ ಕಾಡುಪ್ರಾಣಿಗಳ ರಕ್ಷಣೆಗೆ ಹಲವು ಕ್ರಮ ತೆಗೆದುಕೊಳ್ಳುತ್ತಿರುವುದು ಸಮಾಧಾನಕರ ಸಂಗತಿ.
ನೂರಾರು ಜಾತಿಯ ಗಿಡ-ಮರ: 8940 ಹೆಕ್ಟೇರ್‌ ಕಾಯ್ದಿಟ್ಟ ಅರಣ್ಯ ಪ್ರದೇಶ ಹಾಗೂ 400 ಹೆಕ್ಟೇರ್‌ ರಕ್ಷಿತ ಅರಣ್ಯ ಪ್ರದೇಶ ಸೇರಿ ಒಟ್ಟು 9340 ಹೆಕ್ಟೇರ್‌ ಅರಣ್ಯ ಪ್ರದೇಶವಿದೆ. ಮಳೆ ಅಭಾವ ಹಾಗೂ ಬೀಸಿಲಿನ ಝಳಕ್ಕೆ ಮರಗಿಡಗಳು ಒಣಗುತ್ತಿರುತ್ತವೆ. ಪರ್ಯಾಯವಾಗಿ ಅರಣ್ಯ ಇಲಾಖೆ ಹಲವು ಸಸಿ ನೆಟ್ಟರು ಬಹಳಷ್ಟು ಉಳಿಯುವುದೇ ಕಷ್ಟ ಎಂದು ಸಿಬ್ಬಂದಿ ಹೇಳುತ್ತಾರೆ. ತೇವಾಂಶದ ಕೊರತೆಯಿಂದಾಗಿ ಪ್ರಸ್ತುತ ಕೇವಲ ಶೇ. 60ರಷ್ಟು ಮರಗಿಡಗಳಿದ್ದು, ಸಾಗವಾನಿ, ಹೊನ್ನಿ, ನೇರಲೆ, ಮತ್ತಿ, ಹುನಾಲ ಸೇರಿದಂತೆ ನೂರಾರು ಜಾತಿಯ ಗಿಡಗಳೇ ಹೆಚ್ಚಿವೆ.
ಗುಂಡಿಗೆ ಹಾಕಿದ್ದ ಪ್ಲಾಸ್ಟಿಕನ್ನೂ ಬಿಡದ
 ದುಷ್ಟರು: ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿನ ಪ್ರಾಣಿಗಳಿಗೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ
ಎದುರಾಗದಿರಲಿ ಎಂದು ಇಲಾಖೆ ಗುಂಡಿಗಳನ್ನು ತೋಡಿ, ಅದಕ್ಕೆ ಪ್ಲಾಸ್ಟಿಕ್‌ ಹಾಕಿ, ದೂರದ ಊರುಗಳಿಂದ ನೀರು
ತಂದು ಈ ಗುಂಡಿಗಳಿಗೆ ಹಾಕಿ ಕಾಡು ಪ್ರಾಣಿಗಳಿಗೆ ಅನುಕೂಲ ಕಲ್ಪಿಸುತ್ತಿದ್ದರು. ಆದರೆ, ಕೆಲ ದುಷ್ಟರು ರಾತ್ರಿ ವೇಳೆ ಈ ಪ್ಲಾಸ್ಟಿಕ್‌ಗಳನ್ನೂ ಕದ್ದೊಯ್ಯುತ್ತಿದ್ದರು. ಇದರಿಂದ ಬೇಸತ್ತು ಈ ಬಾರಿ ಅಧಿಕಾರಿಗಳು ಸಿಮೆಂಟ್‌ ಹಾಗೂ ಕಬ್ಬಿಣ ಬಳಸಿ ಕಾಯಂ ಉಳಿಯುವಂತೆ ನೀರಿನ ತೊಟ್ಟಿಗಳನ್ನು ನಿರ್ಮಿಸುತ್ತಿರುವುದು ಪ್ರಾಣಿ ಪ್ರಿಯರ ಮೆಚ್ಚುಗೆ ವ್ಯಕ್ತವಾಗಿದೆ.
ನೀರು ಅರಸಿ ಬರುತ್ತಿದ್ದ ಆನೆಗಳ ದಂಡು: ಈ ಭಾಗದಲ್ಲಿ ನೀರು ಅರಸಿ ಹೆಚ್ಚಾಗಿ ಆನೆಗಳು ಬರುತ್ತಿದ್ದವು. ಅವುಗಳ
ನಿಯಂತ್ರಣಕ್ಕೆ ಹರಸಾಹಸಪಡಬೇಕಿತ್ತು. ಬೆಳೆ, ಜನ-ಜಾನುವಾರುಗಳಿಗೆ ಅದರಿಂದ ಹಾನಿಯೂ ಆಗಿದೆ. ಪ್ರಾಣಾಪಾಯವೂ ಆಗಿದೆ. ಆದರೆ, ಈಗ ನೀರಿನ ಅಭಾವದಿಂದಾಗಿ ಆನೆಗಳು ಬರುವುದೇ ಅಪರೂಪವಾಗಿದೆ. ಅರಣ್ಯ ಇಲಾಖೆಯ ಈ ಕಾಳಜಿ ಸಾರ್ವಜನಿಕರಲ್ಲೂ ಬಂದರೆ ಕಾಡಿನ ಜತೆಗೆ ಕಾಡು ಪ್ರಾಣಿಗಳೂ ಉಳಿಯುತ್ತವೆ.
ಭೂಮಿ ಮೇಲೆ ಪ್ರತಿ ಜೀವಿಗೂ ಬದುಕುವ ಹಕ್ಕಿದೆ. ಮನುಷ್ಯ ಮಾಡುವ ತಪ್ಪಿನಿಂದಾಗಿ ಮೂಕ ಪ್ರಾಣಿಗಳು ನೀರಿಗಾಗಿ
ಪರದಾಡುವಂತಾಗಿದೆ. ಇನ್ನಾದರೂ ಮಾನವ ಅರಿತು ಗಿಡ ನೆಟ್ಟು ಕಾಡು ಉಳಿಸಲು ಶ್ರಮಿಸಬೇಕಿದೆ ಎನ್ನುವುದು
ಪ್ರಜ್ಞಾವಂತರ ಮನವಿ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.