ಮಳೆಯಿಂದ ಹಿಂಗಾರು ಹಂಗಾಮಿಗೂ ಕುತ್ತು !

ಆಗಾಗ ಸುರಿಯುವ ಮಳೆಯಿಂದ ಹಿಂಗಾರು ಬಿತ್ತನೆಗೂ ಹಿನ್ನಡೆ-ಅನ್ನದಾತರಿಗೆ ಆತಂಕ

Team Udayavani, Oct 20, 2022, 4:03 PM IST

22

ಹಾವೇರಿ: ಪ್ರಸಕ್ತ ವರ್ಷ ಮುಂಗಾರು ಅವಧಿಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಬೆಳೆಗಳು ನೆಲಕಚ್ಚಿ ರೈತರು ನಷ್ಟ ಅನುಭವಿಸಿದ್ದು ಒಂದಡೆಯಾದರೆ, ಸದ್ಯ ಹಿಂಗಾರು ಹಂಗಾಮು ಆರಂಭಗೊಂಡಿದ್ದರೂ ಆಗಾಗ್ಗೆ ಸುರಿಯುತ್ತಿರುವ ಮಳೆಯಿಂದಾಗಿ ಹಿಂಗಾರು ಬಿತ್ತನೆಗೂ ಹಿನ್ನಡೆಯಾಗುತ್ತಿದೆ. ಹೀಗಾಗಿ, ರೈತರು ಎರಡೂ ಹಂಗಾಮಿನ ಬೆಳೆ ಕಳೆದುಕೊಳ್ಳುವ ಆತಂಕದ ಸ್ಥಿತಿ ಎದುರಿಸುವಂತಾಗಿದೆ.

ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಅದರಲ್ಲೂ ಕಳೆದ ಎರಡು ತಿಂಗಳಲ್ಲಿ ನಿರಂತರವಾಗಿ ಮಳೆಯಾಗುತ್ತಲೇ ಇದ್ದು, ಸುಮಾರು ಒಂದು ಲಕÒ‌ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಮುಂಗಾರು ಹಂಗಾಮಿನ ಬೆಳೆ ಹಾನಿಯಾಗಿದೆ. ಕಳೆದ ಒಂದು ವಾರದಿಂದ ಜಿಲ್ಲಾದ್ಯಂತ ಮಳೆಯಾಗುತ್ತಲೇ ಇದೆ. ಇದರಿಂದ ಮುಂಗಾರು ಹಂಗಾಮಿನಲ್ಲಿ ಬೆಳೆದ ಮೆಕ್ಕೆಜೋಳ, ಸೋಯಾ, ಶೇಂಗಾ ಇತ್ಯಾದಿ ಬೆಳೆ ಕಟಾವು ಇನ್ನೂ ಮುಗಿದಿಲ್ಲ. ವಾಡಿಕೆಯಂತೆ ಈಗ ಹಿಂಗಾರು ಬಿತ್ತನೆ ಶುರುವಾಗಬೇಕಿತ್ತು. ಆದರೆ, ಮಳೆ ಬಿಡದೇ ಸುರಿಯುತ್ತಿರುವುದರಿಂದ ಹಿಂಗಾರು ಬಿತ್ತನೆ ವಿಳಂಬವಾಗಿದ್ದು, ರೈತರ ಆತಂಕಕ್ಕೆ ಕಾರಣವಾಗಿದೆ.

70 ಸಾವಿರ ಹೆಕ್ಟೇರ್‌ ಗುರಿ: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ 70 ಸಾವಿರ ಹೆಕ್ಟೇರ್‌ ಬಿತ್ತನೆ ಗುರಿಯಿದೆ. ಈಗಾಗಲೇ ಸಬ್ಸಿಡಿ ದರದಲ್ಲಿ ರೈತರಿಗೆ ಬಿತ್ತನೆ ಬೀಜವನ್ನು ಕೃಷಿ ಇಲಾಖೆ ಮೂಲಕ ವಿತರಿಸಲಾಗುತ್ತಿದೆ. ಹಿಂಗಾರಿ ಜೋಳ, ಶೇಂಗಾ, ಕಡಲೆ, ಹೆಸರು, ಗೋವಿನಜೋಳ ಬಿತ್ತನೆ ಶುರುವಾಗಬೇಕಿತ್ತು. ಆದರೆ, ಜಿಲ್ಲೆಯಲ್ಲಿ ಹೆಚ್ಚಿನ ಪ್ರದೇಶದಲ್ಲಿ ಬೆಳೆಯುವ ಜೋವಿನಜೋಳ ಕಟಾವಿಗೆ ಸಾಧ್ಯವಾಗುತ್ತಿಲ್ಲ. ನಿರಂತರ ಮಳೆಯಿಂದ ರೈತರು ಜೋಳ ಕಟಾವು ಮಾಡಿಲ್ಲ. ಅಲ್ಲದೇ ಹೊಲಗಳಲ್ಲಿ ನೀರು ನಿಂತು, ತೇವಾಂಶ ಅಧಿಕವಾಗಿ ಕಾಲಿಡಲೂ ಸಾಧ್ಯವಾಗದ ಪರಿಸ್ಥಿತಿಯಿದೆ. ಇದರಿಂದ ಹೊಸದಾಗಿ ಬಿತ್ತನೆ ಆರಂಭಿಸುವುದು ಸಾಧ್ಯವಿಲ್ಲ. ಒಂದು ವಾರ ಬಿಸಿಲು ಬಿದ್ದರಷ್ಟೇ ಹೊಲಗಳ ತೇವಾಂಶ ಕಡಿಮೆಯಾಗಿ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ಆರಂಭಿಸಬಹುದಾಗಿದೆ. ಇನ್ನೂ ಮಳೆ ಮುಂದುವರಿದರೆ ಹಿಂಗಾರು ಹಂಗಾಮು ಆರಂಭವೇ ವಿಳಂಬವಾಗಲಿದೆ.

ಹೊಲದಲ್ಲಿ ಹೆಚ್ಚುತ್ತಿರುವ ಕಳೆ: ನಿರಂತರ ಸುರಿದ ಮಳೆಯಿಂದ ಹೊಲಗಳಲ್ಲಿ ಕಳೆ ವ್ಯಾಪಕವಾಗಿ ಬೆಳೆದಿದೆ. ಬೆಳೆಗಳ ಮಧ್ಯೆ ಬೆಳೆದಿದ್ದ ಕಳೆ ಕೀಳಲು ಸಹ ರೈತರಿಂದ ಆಗಿರಲಿಲ್ಲ. ಈಗ ಅದು ದೊಡ್ಡದಾಗಿ ಬೆಳೆದಿದ್ದು, ಕಳೆ ನಾಶಪಡಿಸುವುದೇ ರೈತರಿಗೆ ಸವಾಲಾಗಿ ಪರಿಣಮಿಸಿದೆ. ಮುಂಗಾರು ಹಂಗಾಮಿನ ಬೆಳೆ ಕೈಗೆ ಸಿಗದೇ ರೈತರು ಸಂಕಷ್ಟದಲ್ಲಿದ್ದಾರೆ. ಅಳಿದುಳಿದ ಬೆಳೆಯನ್ನೂ ಕಟಾವು ಮಾಡಲಾಗದೇ ರೈತರು ಪರಿತಪಿಸುತ್ತಿದ್ದಾರೆ. ಸಾಲಸೂಲ ಮಾಡಿ ಹಾಕಿದ್ದ ಗೊಬ್ಬರ, ಬಿತ್ತನೆ ಬೀಜದ ಖರ್ಚು ಕೂಡ ರೈತರಿಗೆ ಸಿಗುವ ಸಾಧ್ಯತೆ ಕಡಿಮೆಯಿದೆ. ಈಗ ಕಳೆ ಕೀಳಲು ಕೂಲಿ ಕೊಡುವ ಶಕ್ತಿ ಕೂಡ ರೈತರಿಗಿಲ್ಲ. ಮುಂಗಾರು ಹಂಗಾಮಿನ ಬೆಳೆ ಸಂಪೂರ್ಣ ಕೈಕೊಟ್ಟಿದ್ದು, ಹಿಂಗಾರು ಬೆಳೆಯನ್ನಾದರೂ ಬೆಳೆಯಬೇಕೆಂದರೆ ಮಳೆ ಬಿಡುತ್ತಿಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಸದ್ಯಕ್ಕೆ ಹೊಲಗದ್ದೆಗಳಲ್ಲಿ ಅಧಿಕ ತೇವಾಂಶವಿದ್ದು, ಈಗಲೇ ಬಿತ್ತನೆ ಆರಂಭಿಸುವುದು ಸೂಕ್ತವಲ್ಲ. ಇದರಿಂದ ಬಿತ್ತನೆ ಮಾಡಿದ ಬೀಜ ಮೊಳಕೆಯೊಡೆಯುವುದು ಕಷ್ಟ. ಅಲ್ಲದೇ, ಕೀಟ ಹಾಗೂ ರೋಗ ಬಾಧೆಯೂ ಅ ಧಿಕವಾಗುವ ಸಾಧ್ಯತೆಯಿದೆ. ಮುಂಗಾರು ಬೆಳೆ ಕಳೆದುಕೊಂಡಿರುವ ರೈತರು ಈಗ ಅವಸರ ಮಾಡಿದೇ ಒಂದೆರಡು ವಾರ ಕಾದು ನೋಡಿ ಬಿತ್ತನೆಗೆ ಮುಂದಾಗಬೇಕು.  –ಅಶೋಕ ಪಿ., ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ

ಮುಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದ ಬೆಳೆಗಳು ಹಾನಿಗೊಂಡು ಅಪಾರ ನಷ್ಟ ಅನುಭವಿಸುವಂತಾಗಿದೆ. ಅಳೆದುಳಿದ ಬೆಳೆಗಳನ್ನು ಕಟಾವು ಮಾಡಿಕೊಳ್ಳಲು ಸಹ ಮಳೆ ಬಿಡುವು ನೀಡುತ್ತಿಲ್ಲ. ಅಲ್ಲದೇ, ಸದ್ಯ ಹಿಂಗಾರು ಹಂಗಾಮು ಶುರುವಾಗಿದ್ದರೂ ಹೊಲಗಳನ್ನು ಸ್ವತ್ಛಗೊಳಿಸಲು ಸಾಧ್ಯವಾಗಿಲ್ಲ. ನಿರಂತರ ಮಳೆಯಿಂದಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದ್ದು, ಹಿಂಗಾರು ಬಿತ್ತನೆ ಸಹ ಸಾಧ್ಯವಾಗಿಲ್ಲ.  –ಶಿವಪ್ಪ ಅರಳಿ, ರೈತರು

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.