ದೇಸಾಯಿ ಮಠ ಶ್ರೀಗಳ ಕಾರ್ಯ ಶ್ಲಾಘನೀಯ 

ನಿವೃತ್ತ ಪ್ರಾಚಾರ್ಯ ಕೆ.ಎಸ್‌.ಕೌಜಲಗಿ ಅಭಿಮತ

Team Udayavani, May 25, 2022, 3:38 PM IST

16

ಬಂಕಾಪುರ: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ದೇಸಾಯಿ ಮಠದ ಶ್ರೀ ಮಹಾಂತ ಸ್ವಾಮಿಗಳ ಅಮೃತ ಮಹೋತ್ಸವದ ಅಂಗವಾಗಿ ಶ್ರೀ ಮಠದ ಸ್ವಾಮಿಜೀಗಳು ಮಠದ ಆವರಣದಲಿ ಕ್ಯಾನ್ಸರ್‌, ಪಾರ್ಶ್ವವಾಯು ರೋಗಿಗಳ ಶುಶ್ರೂಷಾ ಕೇಂದ್ರ ಸ್ಥಾಪಿಸುತ್ತಿರುವುದು ಅವರ ಸಮಾಜ ಸೇವೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹುಬ್ಬಳ್ಳಿಯ ನಿವೃತ್ತ ಪ್ರಾಚಾರ್ಯ ಕೆ.ಎಸ್‌.ಕೌಜಲಗಿ ಹೇಳಿದರು.

ಪಟ್ಟಣದ ದೇಸಾಯಿ ಮಠದ ಆವರಣದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ದೇಸಾಯಿ ಮಠದ ಶ್ರೀ ಮಹಾಂತ ಸ್ವಾಮಿಗಳವರ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ರಂಗಗಳ ಸಾಧಕರಿಗೆ ಸನ್ಮಾನ ಹಾಗೂ 187ನೇ ಮಾಸಿಕ ಶಿವಾನುಭವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀಗಳು ವೈಚಾರಿಕ ಮನೋಭಾವನೆ ಹೊಂದಿದವರಾಗಿದ್ದು, ಮೌಡ್ಯ ತೊಲಗಿಸಲು ಶ್ರಮಿಸುತ್ತಿದ್ದಾರೆಂದು ಹೇಳಿದರು.

ಡಾ|ಆರ್‌.ಎಸ್‌.ಅರಳೆಲೆಮಠ ಮಾತನಾಡಿ, ಬಸವ ತತ್ವ ಮೈಗೂಡಸಿಕೊಂಡ ಶ್ರೀಗಳು ಸಮಾಜದ ಏಳ್ಗೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಇಳಿ ವಯಸ್ಸಿನಲ್ಲೂ ಏಳೆಯರಾಗಿ ಅವರ 75ನೇ ಅಮೃತ ಮಹೋತ್ಸವದ ಅಂಗವಾಗಿ ವರ್ಷವಿಡೀ ಸಾಧನೆಗೈದ ವಿದ್ಯಾರ್ಥಿಗಳಿಗೆ ತುಲಾಭಾರ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಧಾರವಾಡ ಮುರಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ದೇಸಾಯಿಮಠದ ಶ್ರೀಗಳು ಎಂ.ಎ.ಪದವೀಧರ ರಾಗಿದ್ದು, ಬಸವಣ್ಣನವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಜಾತೀಯತೆ ಮೇಟ್ಟಿ ಸರ್ವ ಜನಾಂಗದವರ ಒಳಿತಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದ ಶ್ರೀಮಠದ ಪೀಠಾಧಿಪತಿ ಶ್ರೀ ಮಹಾಂತ ಸ್ವಾಮಿಗಳು, ಸಮಾಜ ನಮಗೇನು ನೀಡಿದೆ ಎಂಬುದು ಮುಖ್ಯವಲ್ಲ. ಸಮಾಜಕ್ಕಾಗಿ ನಾವು ಏನು ಮಾಡಿದ್ದೇವೆ ಎಂಬುದು ಮುಖ್ಯವಾಗಿದೆ. ನಾವು ದುಡಿದು ನಮಗಾಗಿ, ನಮ್ಮ ಹೆಂಡತಿ ಮಕ್ಕಳಿಗಾಗಿ ಖರ್ಚು ಮಾಡಿದರೆ ಸಾಲದು. ಅದರ ಜೊತೆಗೆ ನಾವು ಉಳಿಸಿದ ಹಣದಲ್ಲಿ ಸ್ವಲ್ಪ ಹಣವನ್ನು ಸಮಾಜ ಸೇವೆಗೆ ಮೀಸಲಿರಿಸಿದಾಗ ಮಾತ್ರ ಮಾನವ ಜನ್ಮ ಸಾರ್ಥಕತೆ ಹೊಂದಲಿದೆ. ನಮ್ಮ 75ನೇ ಅಮೃತ ಮಹೋತ್ಸವದ ಅಂಗವಾಗಿ ವರ್ಷವಿಡೀ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಐದು ಜನ ಕ್ಯಾನ್ಸರ್‌ ಪೀಡಿತರಿಗೆ ನಮ್ಮ ಮಠದಲ್ಲಿ ಶುಶ್ರೂಷೆ ನೀಡುವುದರ ಜೊತೆಗೆ, ವಿದ್ಯಾರ್ಥಿಗಳ ತುಲಾಭಾರ, ಗರ್ಭಿಣಿಯರಿಗೆ ಸಹಾಯ ಹಸ್ತ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಂಪ್ಲಿ ಶ್ರೀ ಅಭಿನವ ಸ್ವಾಮೀಜಿ ಮಾತನಾಡಿದರು. ಸಭೆಯಲ್ಲಿ ನಿವೃತ್ತ ಶಿಕ್ಷಕರು, ವಿವಿಧ ಕ್ಷೇತ್ರಗಳ ಸಾಧಕರು, ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ರಾಚೋಟೇಶ್ವರ ದೇಸಾಯಿಮಠ, ಬಸವಂತರಾವ್‌ ದೇಸಾಯಿ, ಮೋಹನ ಮೆಣಸಿನಕಾಯಿ, ಅನೀಲಕುಮಾರ ದೇಸಾಯಿ, ಗಿರಿರಾಜ ದೇಸಾಯಿ, ಶೋಭಾ ಹಾವಣಗಿ, ಸತೀಶ ಆಲದಕಟ್ಟಿ, ಡಿ.ಎನ್‌.ಕುಡಲ, ನೀಲಪ್ಪ ಕುರಿ, ಆನಂದ ಮತ್ತಿಗಟ್ಟಿ, ಸಿ.ಆರ್‌.ದೇಸಾಯಿ ಇತರರಿದ್ದರು. ಗಂಗೂಬಾಯಿ ದೇಸಾಯಿ, ಬಿ.ಎಸ್‌.ಗಿಡ್ಡಣ್ಣವರ ನಿರೂಪಿಸಿದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.