ಮತ್ತೆ ಗೊಂದಲಕ್ಕೆ ಸಿಲುಕಿದ ಜಿಪಂ ಕಟ್ಟಡ


Team Udayavani, Sep 17, 2019, 12:02 PM IST

hv-tdy-1

ಹಾವೇರಿ: ಉದ್ಘಾಟನೆ ಗೊಂದಲದಲ್ಲಿ ಸಿಲುಕಿದ ಜಿಪಂ ಆಡಳಿತ ಭವನ.

ಹಾವೇರಿ: ಕ‌ಟ್ಟಡಕ್ಕೆ ರಾಜಕೀಯ ನಾಯಕರ ಹೆಸರಿಡುವ ವಿಚಾರ ಗೊಂದಲದಲ್ಲಿ ಸಿಲುಕಿ ಸುದ್ದಿಯಾಗಿದ್ದ ಜಿಲ್ಲಾ ಪಂಚಾಯಿತಿಯ ನೂತನ ಆಡಳಿತ ಭವನ, ಈಗ ಉದ್ಘಾಟನೆ ವಿಚಾರದಲ್ಲಿ ಮತ್ತೆ ಗೊಂದಲಕ್ಕೆ ಸಿಲುಕಿ ಸುದ್ದಿಯಾಗಿದೆ.

ಜಿಲ್ಲಾ ಪಂಚಾಯಿತಿಯ ನೂತನ ಆಡಳಿತ ಭವನ ಅಧಿಕೃತವಾಗಿ ಉದ್ಘಾಟನೆ ಆಗಿದೆಯೋ ಇಲ್ಲವೋ ಎಂಬುದು ಈಗ ಸೃಷ್ಟಿಯಾಗಿರುವ ಹೊಸ ಗೊಂದಲ. ಸೆ. 19ರಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರಿಂದ ಆಡಳಿತ ಭವನ ಉದ್ಘಾಟನೆಗೆ ಸಿದ್ಧತೆ ನಡೆದಿರುವ ಹಿನ್ನೆಲೆಯಲ್ಲಿ ಈ ಗೊಂದಲ ಶುರುವಾಗಿದೆ.

ಜಿಪಂ ಆಡಳಿತ ಭವನದ ನೂತನ ಕಟ್ಟಡವನ್ನು 2018ರ ವಿಧಾನಸಭೆ ಚುನಾವಣೆಗೂ ಮುನ್ನ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರಕ್ಕೆ ಬಂದಾಗ ಮುನ್ಸಿಪಲ್ ಮೈದಾನದಲ್ಲಿ ನಡೆದ ವಿವಿಧ 36 ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯ ಶಿಲಾನ್ಯಾಸ ಸಂದರ್ಭದಲ್ಲಿಯೇ ಜಿಪಂ ಆಡಳಿತ ಭವನದ ಶಿಲಾನ್ಯಾಸ ಫಲಕವನ್ನಿಟ್ಟು ಉದ್ಘಾಟನೆ ಮಾಡಲಾಗಿದೆ. ಒಮ್ಮೆ ಮುಖ್ಯಮಂತ್ರಿಯವರಿಂದ ಉದ್ಘಾಟನೆ ಆದ ಮೇಲೆ ಮುಗಿಯಿತು. ಮತ್ತೆ ಉದ್ಘಾಟನೆ ಮಾಡುವುದು ಆಭಾಸ ಎನಿಸುತ್ತದೆ ಎಂಬುದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ ಅವರ ವಾದ.

ಪ್ರತಿವಾದ: ಜಿಪಂ ಆಡಳಿತ ಭವನ ಕಟ್ಟಡ ಉದ್ಘಾಟನೆ ಆಗಿರುವ ಬಗ್ಗೆ ಜಿಪಂ ಸದಸ್ಯರಿಗೂ ಮಾಹಿತಿ ಇಲ್ಲ. ಸದಸ್ಯರನ್ನು ಆಹ್ವಾನಿಸುವ ಯಾವ ಶಿಷ್ಟಾಚಾರವೂ ಪಾಲನೆ ಆಗಿಲ್ಲ. ಅಂದಿನ ಆಮಂತ್ರಣ ಪತ್ರಿಕೆಯಲ್ಲಿ ಕಟ್ಟಡ ಉದ್ಘಾಟನೆಯ ಉಲ್ಲೇಖವೂ ಇರಲಿಲ್ಲ. ಜಿಪಂ ಇಂಜಿನಿಯರಿಂಗ್‌ ಅಭಿಯಂತರು ಸಹ ಕಟ್ಟಡ ಇನ್ನೂ ಉದ್ಘಾಟನೆಯಾಗಿಲ್ಲ ಎಂದು ಹಿರಿಯ ಅಧಿಕಾರಿಗಳ ಸಭೆಯಲ್ಲಿಯೇ ಸ್ಪಷ್ಟಪಡಿಸಿದ್ದಾರೆ. ಕೇವಲ ಒಂದು ವಾರದ ಹಿಂದಷ್ಟೇ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ದಾರೆಂಬ ಬರಹ ಇರುವ ಶಿಲಾಫಲಕವನ್ನು ಆಡಳಿತ ಭವನ ಕಟ್ಟಡಕ್ಕೆ ಅಳವಡಿಸಲಾಗಿದೆ. ಫಲಕ ಅಳವಡಿಸುವುದನ್ನೂ ಸದಸ್ಯರ ಗಮನಕ್ಕೆ ತಂದಿಲ್ಲ. ಅಷ್ಟಕ್ಕೂ ನೂತನ ಕಟ್ಟಡವನ್ನು ಜಿಪಂಗೆ ಇವತ್ತಷ್ಟೇ ಹಸ್ತಾಂತರಿಸಲಾಗಿದೆ. ಹೀಗಾಗಿ ಜಿಪಂ ಆಡಳಿತ ಭವನದ ಕಟ್ಟಡ ಅಧಿಕೃತವಾಗಿ ಉದ್ಘಾಟನೆಯಾಗಿಲ್ಲ. ಆದ್ದರಿಂದ ಈಗ ಉದ್ಘಾಟನೆ ಮಾಡಲಾಗುತ್ತಿದೆ ಎಂಬುದು ಜಿಪಂನ ಹಾಲಿ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಅವರ ಪ್ರತಿವಾದ. ಹಾಲಿ ಮತ್ತು ಮಾಜಿ ಅಧ್ಯಕ್ಷರ ನಡುವಿನ ಈ ಜಟಾಪಟಿ ಮತ್ತೆ ಜಿಪಂ ಆಡಳಿತ ಭವನ ಕಟ್ಟಡ ಗೊಂದಲಕ್ಕೆ ಸಿಲುಕಿ ರಾಜಕೀಯ ಚರ್ಚೆಗೆ ಇಂಬು ನೀಡಿದೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.