ಕೋವಿಡ್ ಗಿಂತ ದೊಡ್ಡ ಗ್ರಹಣ ಯಾವುದೂ ಇಲ್ಲ; ಸಚಿವ ಬಿ.ಸಿ. ಪಾಟೀಲ್
Team Udayavani, Jun 21, 2020, 6:25 PM IST
ಹಾವೇರಿ: ಇಂದು ಕೋವಿಡ್-19ಗಿಂತ ದೊಡ್ಡ ಗ್ರಹಣ ಯಾವುದೂ ಇಲ್ಲ. ಗ್ರಹಣ ಹಿಡಿದಿದೆ ಎಂದು ಯಾರೂ ಉಸಿರಾಡುವುದನ್ನು ನಿಲ್ಲಿಸುವುದಿಲ್ಲ. ಗ್ರಹಣ ಪ್ರಕೃತಿಯಲ್ಲಿ ನಡೆಯುವ ಸಹಜ ಕ್ರಿಯೆ. ಹಾಗಾಗಿ ಗ್ರಹಣಕ್ಕೆ ಹೆಚ್ಚು ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಅವರು ರವಿವಾರ ಹಿರೇಕೆರೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೆಲವು ಜನರು ಗ್ರಹಣವನ್ನೇ ಉದ್ಯೋಗ ಮಾಡಿಕೊಂಡು ಅಪಪ್ರಚಾರ ಮಾಡುವುದು, ಜನರಲ್ಲಿ ಮೂಢನಂಬಿಕೆ ಬಿತ್ತುವುದು ಮಾಡುತ್ತಾರೆ. ಇದು ಸರಿಯಲ್ಲ ಎಂದರು.
ಗಡಿಯಲ್ಲಿ ನಡೆದ ಭಾರತ-ಚೀನಾ ಸೈನಿಕರ ಘರ್ಷಣೆ ವಿಚಾರವಾಗಿ ಕಾಂಗ್ರೆಸ್ನವರು ಟೀಕೆ ಮಾಡುತ್ತಿದ್ದಾರೆ. ಅವರಿಗೆ ಟೀಕೆ ಮಾಡುವುದು ಬಿಟ್ಟರೆ ಬೇರೆ ಏನೂ ಕೆಲಸವಿಲ್ಲ. ಟೀಕೆ ಮಾಡುವುದನ್ನೇ ತಮ್ಮ ಉದ್ಯೋಗವಾಗಿಸಿಕೊಂಡಿದ್ದಾರೆ ಎಂದರು.
ನಮ್ಮ ದೇಶದ ಮೇಲೆ ಯಾರೇ ಆಕ್ರಮಣ ಮಾಡಿದರೂ ಪ್ರತ್ಯುತ್ತರ ಕೊಡುವುದು ನಮ್ಮ ಕರ್ತವ್ಯ. ಅದನ್ನು ನಮ್ಮ ಪ್ರಧಾನಿಯವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಕಾಂಗ್ರೆಸ್ನವರು ಅದಕ್ಕೂ ಟೀಕೆ ಮಾಡುವುದು, ಕೋವಿಡ್-19 ಸೋಂಕಿಗೂ ಟೀಕೆ ಮಾಡಿದರೆ ಟೀಕೆಗೆ ಅರ್ಥ ಇರಲ್ಲ. ಟೀಕೆಗಳು ಯಾವತ್ತೂ ಸಕಾರಾತ್ಮಕವಾಗಿರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?