ಎಲ್ಲಾ ಓಕೆ ಶೌಚಗೃಹ ಇಲ್ಲ ಯಾಕೆ?


Team Udayavani, Nov 18, 2019, 1:34 PM IST

hv-tdy-1

ರಾಣಿಬೆನ್ನೂರ: ಸುಮಾರು 1.30 ಲಕ್ಷದ ಜನಸಂಖ್ಯೆ ಹೊಂದಿರುವ ನಗರದಲ್ಲಿ ಒಂದೇ ಒಂದು ಗ್ರಂಥಾಲಯವಿದ್ದು, 1979ರಲ್ಲಿ ಸ್ಥಾಪನೆಗೊಂಡಿದೆ. ಇಲ್ಲಿನ ಸಂಗಂ ವೃತ್ತದ ಬಳಿ ಕೇಂದ್ರ ಗ್ರಂಥಾಲಯವು 2012ರಲ್ಲಿ 1.30 ಕೋಟಿ ರೂ. ಅನುದಾನದಲ್ಲಿ ನವೀಕರಣಗೊಂಡು ಸುಸಜ್ಜಿತ 6 ಕೊಠಡಿಗಳನ್ನು ಹೊಂದಿದೆ. “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ಎಂದು ಆಕರ್ಷಿಸುವ ನಾಮಫಲಕದೊಂದಿಗೆ ಓದುಗರನ್ನು ಬರಮಾಡಿಕೊಳ್ಳುತ್ತಿದೆ.

ಮಾಜಿ ಶಾಸಕ ಹಾಗೂ ವಿಧಾನಸಭಾ ಮಾಜಿ ಸಭಾಪತಿ ಕೋಳಿವಾಡ ಅವರು ಈ ಗ್ರಂಥಾಲಯಕ್ಕೆ 1979ರಲ್ಲಿ ಅಡಿಗಲ್ಲು ಹಾಕಿದ್ದರು. ನಂತರ 2012 ರಲ್ಲಿ ಮಾಜಿ ಶಾಸಕ ದಿ| ಜಿ.ಶಿವಣ್ಣನವರ ಆಡಳಿತಾವಧಿಯಲ್ಲಿ ಈ ಗ್ರಂಥಾಲಯವು ಲೋಕಾರ್ಪಣೆಗೊಂಡಿತು. ಇಲ್ಲಿ 35 ಸಾವಿರ ಪುಸ್ತಕಗಳು ಲಭ್ಯವಿದ್ದು, ಇದರಲ್ಲಿ 30 ಸಾವಿರ ಕನ್ನಡ, 4500 ಇಂಗ್ಲಿಷ್‌, 500 ಹಿಂದಿ ಪುಸ್ತಕಗಳು ಲಭ್ಯ ಇವೆ. ರಾಜ್ಯಮಟ್ಟದ ದಿನಪತ್ರಿಕೆಗಳು ಮತ್ತು ಸ್ಥಳೀಯ ಪತ್ರಿಕೆ ಸೇರಿದಂತೆ ವಾರ ಪತ್ರಿಕೆ ಹಾಗೂ ಮಾಸ ಪತ್ರಿಕೆ ಸಹ ಓದುಗರಿಗೆ ಲಭ್ಯವಿದೆ.

ಇಂದಿನ ದಿನಮಾನಗಳಲ್ಲಿ ಯುವಕರು ವಾಟ್ಸ್  ಆ್ಯಪ್‌, ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಕಾಲಹರಣ ಮಾಡುತ್ತಿರುವ ಪರಿಣಾಮ ಪುಸ್ತಕ ಹಾಗೂ ಪತ್ರಿಕೆಗಳ ಓದುವ ಹವ್ಯಾಸ ಮರೆತಿದ್ದಾರೆ. ಪ್ರತಿದಿನ 300ಕ್ಕೂ ಅಧಿಕ ಜನ ಈ ಗ್ರಂಥಾಲಯಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನುವುದೇ ಸಂತಸದ ಸಂಗತಿ. 300 ಓದುಗರು ಆಜೀವ ಸದಸ್ಯತ್ವ ಹೊಂದಿದ್ದಾರೆ. ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಪಠ್ಯಕ್ಕೆ ಸಂಬಂಧಿ ಸಿದ ಪುಸ್ತಕ ಪಡೆದು ಓದುತ್ತಿರುವುದು ಗ್ರಂಥಾಲಯಕ್ಕೆ ಇನ್ನೂ ಹೆಚ್ಚು ಮೆರಗು ತಂದಿದೆ. ಪ್ರಸ್ತುತ ಈ ಗ್ರಂಥಾಲಯದ ಪಕ್ಕ ಮಕ್ಕಳ ಗ್ರಂಥಾಲಯ ಕಟ್ಟಡ ಕಾಮಗಾರಿ ಚಾಲ್ತಿಯಲ್ಲಿದೆ. ಇದು ಸಹ ಬೇಗ ಆರಂಭವಾದಲ್ಲಿ ಮಕ್ಕಳ ಅಭ್ಯಾಸಕ್ಕೂ ಅನುಕೂಲವಾಗಲಿದೆ.

ಸುಸಜ್ಜಿತ ಕಟ್ಟಡದಲ್ಲಿ ಶೌಚಗೃಹ ಸಮಸ್ಯೆ: 1.30 ಕೋಟಿ ರೂ. ಅನುದಾನದಲ್ಲಿ ನಿರ್ಮಾಣವಾಗಿರುವ ಭವ್ಯ ಕಟ್ಟಡದಲ್ಲಿ ಶೌಚಕ್ಕೆ ಸಮಸ್ಯೆ ಉದ್ಬವಿಸಿದೆ. ಕಟ್ಟಡ ನಿರ್ಮಾಣವಾಗಿ ಕೇವಲ 7 ವರ್ಷದಲ್ಲಿ ಶೌಚಗೃಹದಲ್ಲಿನ ಛಂಬರ್‌ಗಳು ಕುಸಿದಿವೆ. ಅದರ ದುರಸ್ತಿ ಕಾರ್ಯ ಮಾಡಿಸದೆ ಶೌಚಗೃಹ ಬಾಗಿಲು ಹಾಕಲಾಗಿದೆ.

ಕಟ್ಟಡದಲ್ಲಿ ಮಹಿಳೆ ಮತ್ತು ಪುರುಷರ ಪ್ರತ್ಯೇಕ ಮೂರು ಶೌಚಾಲಯಗಳು ನಿರ್ಮಾಣವಾಗಿದ್ದು, ಕಟ್ಟಡ ನವೀಕರಣಗೊಂಡ ಕೆಲವೇ ದಿನಗಳಲ್ಲಿ ಶೌಚಾಲಯದ ಛಂಬರ್‌ಗಳು ಕುಸಿದು ದುರಸ್ತಿಗೆ ಬಂದಿದೆ. ಮೇಲಧಿ ಕಾರಿಗಳ ಗಮನಕ್ಕೆ ತರಲಾಗಿದ್ದು, ಶೀಘ್ರವೇ ದುರಸ್ತಿ ಮಾಡಲಾಗುವುದು.  –ಬಿದ್ದಾಡೆಪ್ಪ ಮಾಳನಾಯಕನಹಳ್ಳಿ, ಸಹಾಯಕ ಗ್ರಂಥಪಾಲಕ

 

-ಮಂಜುನಾಥ ಕುಂಬಳೂರು

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri Congress candidate Anandaswamy Gaddadevaramath filed nomination papers

Haveri: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.