ಉನ್ನತ ಶಿಕ್ಷಣಕ್ಕೆ ಟೈಮ್ ಫೌಂಡೇಷನ್ ಸಹಕಾರಿ
Team Udayavani, May 19, 2019, 1:02 PM IST
ರಾಣಿಬೆನ್ನೂರ: ನಿರಂಜನ ಪೂಜಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಣಿಬೆನ್ನೂರ: ಇಂದಿನ ಆಧುನಿಕತೆಯ ತಂತ್ರಜ್ಞಾನ ಯುಗದಲ್ಲಿ ಪಾಲಕರು ಮತ್ತು ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರ ಮುಂದಿನ ಭವಿಷ್ಯಕ್ಕಾಗಿ ಕನಸು ಕಾಣುತ್ತಿರುತ್ತಾರೆ. ಅವರ ಅನುಕೂಲಕ್ಕಾಗಿಯೇ ನಗರದಲ್ಲಿ ಇದೀಗ ಟೈಮ್ ಫೌಂಡೇಷನ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಟೈಮ್ ಫೌಂಡೇಷನ್ ಆಡಳಿತಾಧಿಕಾರಿ ನಿರಂಜನ ಪೂಜಾರ ಹೇಳಿದರು.
ಶನಿವಾರ ನಗರದ ಉನ್ನತಿ ಪದವಿ ಪೂರ್ವ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಸಂದರ್ಭದಲ್ಲಿ ಕೆಲ ಪಾಲಕರು ಮತ್ತು ಪೋಷಕರು ತಮ್ಮ ಮಕ್ಕಳಿಗೆ ವೈದ್ಯಕೀಯ ಮತ್ತು ಐಐಟಿ ಶಿಕ್ಷಣ ಕೊಡಿಸುವ ಗುರಿಯನ್ನು ಹೊಂದಿರುತ್ತಾರೆ. ದೇಶದ ಪ್ರತಿಷ್ಠಿತ ಸಂಸ್ಥೆಗಳಾದ ಐಐಟಿ ಮತ್ತು ಎಐಐಎಂಎಸ್ ಶಿಕ್ಷಣ ಪಡೆಯಬೇಕು ಎಂಬುದು ಪ್ರತಿ ವಿದ್ಯಾರ್ಥಿಗಳ ಕನಸಾಗಿರುತ್ತದೆ. ಅಂತಹ ವಿದ್ಯಾರ್ಥಿಗಳ ಕನಸು ನನಸು ಮಾಡುವ ಉದ್ದೇಶದಿಂದ ಈ ಸಂಸ್ಥೆಯನ್ನು ಸಾಮಾಜಿಕ ಕಳಕಳಿಯ ಹಿತದೃಷ್ಟಿಯಿಂದ ನಗರದಲ್ಲಿ ತೆರೆಯಲಾಗಿದೆ ಎಂದರು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ