ಕಸದ ತೊಟ್ಟಿಗಳಾದ ಖಾಲಿ ನಿವೇಶನಗಳು


Team Udayavani, Oct 1, 2019, 2:29 PM IST

hv-tdy-1

ಹಾವೇರಿ: ದೇಶದೆಲ್ಲೆಡೆ ಈಗ ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಆದರೆ, ಹಾವೇರಿ ನಗರಸಭೆ ಮಾತ್ರ ಇದಕ್ಕೆ ಹೊರತಾಗಿದೆ. ನಗರದಲ್ಲಿ ಅಸ್ವಚ್ಛತೆ ತಾಂಡವಾಡುತ್ತಿದ್ದು, ಅದರಲ್ಲೂ ಖಾಲಿ ನಿವೇಶನಗಳಂತೂ ಕಸದ ತೊಟ್ಟಿಗಳಾಗಿ ಮಾರ್ಪಟ್ಟು ಸುತ್ತಲಿನ ಜನರಿಗೆ ತಲೆನೋವಾಗಿ ಕಾಡುತ್ತಿವೆ. ನಗರದಲ್ಲಿ ನೂರಾರು ಖಾಲಿ ನಿವೇಶನಗಳಿದ್ದು, ಮಾಲೀಕರು ಅವುಗಳನ್ನು ಹಾಗೆಯೇ. ಬಿಟ್ಟಿರುವುದರಿಂದ ಅವು ಕಸದ ತೊಟ್ಟಿಯಂತಾಗಿವೆ.

ಜತೆಗೆ ಗಿಡಗಂಟಿಗಳು ಬೆಳೆದು ನಗರದ ಅಂದ ಕೆಡಿಸಿವೆ. ಜಿಲ್ಲಾ ಕೇಂದ್ರ ಹಾವೇರಿ ನಗರ ಬೆಳೆಯುತ್ತಲೇ ಇದೆ. ಜನಸಂಖ್ಯೆಗೆ ತಕ್ಕಂತೆ ಮೂಲ ಸೌಲಭ್ಯವೂ ಹೆಚ್ಚಬೇಕಿತ್ತು. ಆದರೆ, ಇಲ್ಲಿ ಘನ ತ್ಯಾಜ್ಯ ಪ್ರಮಾಣ ಮಾತ್ರ ಬೆಳೆಯುತ್ತಲೇ ಇದ್ದು, ಎಲ್ಲಿ ನೋಡಿದರಲ್ಲಿ ಕಸ, ಕೊಳಚೆಯ ಹಾವಳಿಯೇ ಅಧಿಕವಾಗಿದೆ. ಇದು ಬೆಳೆಯುತ್ತಿರುವ ಎಲ್ಲ ನಗರಗಳ ಸಮಸ್ಯೆ ಎಂದು ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿ ಧಿಗಳು ಜಾರಿಕೊಂಡರೂ, ಖಾಸಗಿ ಹಾಗೂ ಸರ್ಕಾರದ ಖಾಲಿ ಜಾಗವೆಲ್ಲ ಕೊಳಚೆಮುಕ್ತ ಮಾಡುವಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಿತ್ತು. ಅದೂ ಕೂಡ ಇಲ್ಲಿ ಆಗಿಲ್ಲ ಎಂಬುದು ಖೇದಕರ ಸಂಗತಿ.

ನಿವೇಶನಗಳೇ ಕಸದ ತೊಟ್ಟಿ: ನಗರದಲ್ಲಿ ಕಸ ಚೆಲ್ಲಲು ನಗರಸಭೆ ಎಲ್ಲ ಕಡೆ ತೊಟ್ಟಿ ಇಟ್ಟಿಲ್ಲ. ಆದರೆ, ಎಲ್ಲ ಬಡಾವಣೆಗಳಲ್ಲೂ ಖಾಲಿ ನಿವೇಶನಗಳಿವೆ. ಅವು ಈಗ ಕಸದ ತೊಟ್ಟಿಯಾಗಿ ಪರಿವರ್ತನೆಯಾಗಿವೆ. ಮನೆ ಕಟ್ಟಿಕೊಳ್ಳುವ ಉದ್ದೇಶದಿಂದ ಅನೇಕರು ನಿವೇಶನ ಖರೀದಿಸಿ ಇಟ್ಟುಕೊಂಡಿದ್ದಾರೆ ಹೊರತು ನಿವೇಶನ ಸುತ್ತ ಕಾಂಪೌಂಡ್‌ ನಿರ್ಮಿಸಿ, ಆಳೆತ್ತರ ಬೆಳೆದ ಗಿಡಗಂಟಿಗಳನ್ನು ಕಟಾವು ಮಾಡುವ ಕಾರ್ಯ ಮಾತ್ರ ಮಾಡುತ್ತಿಲ್ಲ. ಇದರಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಕಾಡಿನಲ್ಲಿ ಮನೆ ಮಾಡಿಕೊಂಡ ಅನುಭವವಾಗುತ್ತಿದೆ. ಕ್ರಿಮಿ ಕೀಟಗಳು, ಹಾವು ಚೇಳು, ವಿಷ ಜಂತುಗಳು ಖಾಲಿ ನಿವೇಶನಗಳಲ್ಲಿ ಮನೆ ಮಾಡಿಕೊಂಡಿವೆ. ಆಗಾಗ ಅಕ್ಕಪಕ್ಕದ ಮನೆಗಳಿಗೂ ಇವು ನುಗ್ಗಿ ಭಯದ ವಾತಾವರಣ ನಿರ್ಮಿಸುತ್ತಿವೆ.

ಆಳೆತ್ತರ ಬೆಳೆದಿದೆ ಪೊದೆ: ನಗರದಲ್ಲಿ ಇಂಥ ನೂರಾರು ಖಾಲಿ ನಿವೇಶನಗಳಿದ್ದು, ಅಲ್ಲೆಲ್ಲ ಗಿಡಗಂಟಿಗಳು ಆಳೆತ್ತರಕ್ಕೆ ಬೆಳೆದು ನಿಂತಿವೆ. ನಿವೇಶನಗಳ ಮಾಲೀಕರು ಅವುಗಳನ್ನು ಕಟಾವು ಮಾಡುವ ಗೋಜಿಗೂ ಹೋಗುತ್ತಿಲ್ಲ. ಇದೇ ರೀತಿ ಸರ್ಕಾರಿ ಜಾಗಗಳೂ ಹಾಳು ಬಿದ್ದಿವೆ. ಉದ್ಯಾನವನಕ್ಕೆಂದು ಬಿಟ್ಟ ಅನೇಕ ಜಾಗವೂ ಇದೇ ರೀತಿ ಕಳೆ ಬೆಳೆದು ನಿಂತಿವೆ. ಇದು ನಗರದ ಸೌಂದರ್ಯ ಜತೆಗೆ ಪರಿಸರವನ್ನೇ ಹಾಳು ಮಾಡುತ್ತಿದೆ. ಆದರೂ ನಗರಸಭೆಯವರು ಮಾತ್ರ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಇರುವ ಚರಂಡಿ, ರಸ್ತೆಯನ್ನೇ ಸ್ವಚ್ಛವಾಗಿಡುವುದು ತಲೆ ನೋವಾಗಿರುವಾಗ ಖಾಲಿ ನಿವೇಶನದಲ್ಲಿ ಬೆಳೆದ ಗಿಡಗಂಟಿ ಕತ್ತರಿಸುವುದು ಹೇಗೆ ಸಾಧ್ಯ ಎಂಬಂತೆ ವರ್ತಿಸುತ್ತಿದೆ. ಖಾಲಿ ನಿವೇಶನಗಳಲ್ಲಿ ಬೆಳೆದ ಗಿಡಗಳನ್ನು ಕಟಾವು ಮಾಡಿ ಸ್ವತ್ಛವಾಗಿಡುವುದು ಆಯಾ ನಿವೇಶನಗಳ ಮಾಲೀಕರ ಜವಾಬ್ದಾರಿ. ಈ ನಿಟ್ಟಿನಲ್ಲಿ ನಗರಸಭೆ ಆಡಳಿತ ಮಂಡಳಿ ಸಂಬಂಧಪಟ್ಟವರಿಗೆ ಸೂಕ್ತ ನೋಟಿಸ್‌ ಜಾರಿ ಮಾಡಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಕ್ರಮ ಕೈಗೊಳ್ಳಬೇಕಿದೆ.

ನಿವೇಶನದಲ್ಲಿ ಬೆಳೆದಿರುವ ಗಿಡಗಂಟಿ ತೆಗೆದು ಸ್ವತ್ಛಗೊಳಿಸುವಂತೆ ಹಲವಾರು ಬಾರಿ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್‌ ನೀಡಲಾಗಿದೆ. ಆದರೆ, ಕೆಲವರು ಇನ್ನೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ನಗರಸಭೆಯಿಂದಲೇ ಸ್ವತ್ಛಗೊಳಿಸಿ ಅದಕ್ಕೆ ತಗಲುವ ವೆಚ್ಚವನ್ನು ನಿವೇಶನ ಮಾಲೀಕರಿಂದ ವಸೂಲಿ ಮಾಡಲಾಗುವುದು.  –ಪರಿಸರ ಅಧಿಕಾರಿ, ನಗರಸಭೆ

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.