ಕೋವಿಡ್ ವಾರಿಯರ್ಗೆ ಪುಷ್ಪ ನಮನ
Team Udayavani, May 21, 2020, 1:40 PM IST
ಹಾನಗಲ್ಲ: ಕಾಯಕ ಶ್ರದ್ಧೆಯಿಂದ ಕೋವಿಡ್ ಜಾಗೃತಿಗೆ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ತಾಲೂಕಿನ ವಿವಿಧ ಇಲಾಖೆ ನೌಕರರ ಶ್ರಮ ಸಾರ್ಥಕವಾಗಿದೆ. ಈ ಕಾರಣಕ್ಕಾಗಿಯೇ ಹಾನಗಲ್ಲ ತಾಲೂಕು ಕೋವಿಡ್ ಮುಕ್ತವಾಗಿರಲು ಸಾಧ್ಯವಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.
ಕೋವಿಡ್ ವಾರಿಯರ್ಸ್ ಗೆ ಪುಷ್ಪ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘಿಸಿದವರಿಂದ ಅತಿ ಹೆಚ್ಚು ದಂಡ ವಸೂಲಿ ಮಾಡಿದ ಜಿಲ್ಲೆನಮ್ಮದಾಗಿದೆ. ಜಿಲ್ಲೆಯ ಪೊಲೀಸರು ಹೆಚ್ಚು ದಕ್ಷತೆಯಿಂದ ಕಾರ್ಯ ನಿರ್ವಹಿಸಿರುವುದಕ್ಕೆ ಇದು ಸಾಕ್ಷಿ. ಅಲ್ಲದೆ ಸಾರ್ವಜನಿಕರು ಕೂಡ ಪೊಲೀಸ್ ಕಾರ್ಯಾಚರಣೆಗೆ ಅಂಜುವಂತಹ ಸ್ಥಿತಿ ನಿರ್ಮಾಣವಾಗಿರುವುದು ಖೇದಕರ ಸಂಗತಿ. ನಮ್ಮ ಆರೋಗ್ಯಕ್ಕಾಗಿ ನಾವೇ ಜಾಗೃತವಾಗಬೇಕು. ಸಾಮಾಜಿಕ ಅಂತರ ಎನ್ನುವುದಕ್ಕಿಂತ ಶಾರೀರಿಕ ಅಂತರ ಎಂಬ ಪದ ಸರಿಯಾದುದು ಎಂದು ವ್ಯಾಖ್ಯಾನಿಸಿದರು. ಶಾಸಕ ಸಿ.ಎಂ. ಉದಾಸಿ, ತಾಲೂಕಾಡಳಿತದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ