ಜಿಲ್ಲಾಡಳಿತಕ್ಕೆ ತಲೆ ನೋವಾದ ಸೋಂಕಿತ


Team Udayavani, May 23, 2020, 5:25 AM IST

ಜಿಲ್ಲಾಡಳಿತಕ್ಕೆ ತಲೆ ನೋವಾದ ಸೋಂಕಿತ

ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ ಪತ್ತೆಯಾದ ಮೂರು ಪ್ರಕರಣಗಳಲ್ಲಿ ಒಂದು ಭಾರಿ ಆತಂಕ ಸೃಷ್ಟಿಸಿದ್ದು ಈತನ ಸಂಪರ್ಕ ಪತ್ತೆ ಹಚ್ಚುವುದೇ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಪತ್ತೆಯಾದ ಪಿ-1691 ಸೋಂಕಿತ ಎಲ್ಲೆಲ್ಲಿ, ಯಾರಿಗೆಲ್ಲ ಸಂಪರ್ಕಕ್ಕೆ ಬಂದು ಸೋಂಕು ಹಬ್ಬಿಸಿರಬಹುದು ಎಂಬ ಭಯ ಶುರುವಾಗಿದೆ. ಈ ಭಯ ಜಿಲ್ಲೆ ಅಷ್ಟೇ ಅಲ್ಲ ರಾಜ್ಯ ರಾಜಧಾನಿಯ ಜನರನ್ನೂ ಆವರಿಸಿದೆ. ಶುಕ್ರವಾರ ಸಂಜೆವರೆಗೂ ಬೆಂಗಳೂರಿನಲ್ಲಿಯೇ ಇರುವ ಈತನನ್ನು ಶೀಘ್ರ ಹಾವೇರಿಗೆ ಕರೆತರಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಆತ ತನ್ನ ಟ್ರಾವೆಲ್‌ ಹಿಸ್ಟರಿ ಹೇಳಿದಾಗಲೇ ಎಲ್ಲೆಲ್ಲಿ ಯಾರಿಗೆಲ್ಲ ಕ್ವಾರಂಟೈನ್‌ ಮಾಡಬೇಕು? ತಪಾಸಣೆ ಮಾಡಬೇಕು ಎಂಬುದು ತಿಳಿಯಲಿದೆ.

ಈ ಸೋಂಕಿತ ಶಿಗ್ಗಾವಿ ತಾಲೂಕಿನ ಬಂಕಾಪುರದ ನಿವಾಸಿಯಾಗಿದ್ದು 22 ವರ್ಷದ ಯುವಕನಾಗಿದ್ದಾನೆ. ಚಾಲಕನಾಗಿರುವ ಈತನ ಮೂಲ ಗ್ರಾಮ ಯಾವುದು ಎಂಬುದು ಇನ್ನೂ ಖಚಿತವಾಗಿಲ್ಲ. ಈತ ಬಂಕಾಪುರದಲ್ಲಿ ರೂಮ್‌ ಒಂದನ್ನು ಬಾಡಿಗೆಗೆ ಪಡೆದಿದ್ದನು. ಮೇ 5, 8 ಹಾಗೂ 12ರಂದು ಮುಂಬಯಿ “ವಾಸಿ’ ಕೋಲ್ಡ್‌ ಸ್ಟೋರೇಜ್‌ಗೆ ಬಂಕಾಪುರದಿಂದ ಲಾರಿಯಲ್ಲಿ ಮೆಣಸಿನಕಾಯಿ ಲೋಡ್‌ ಮಾಡಿಕೊಂಡು ಹೋಗಿದ್ದನು. ಈತ ಮುಂಬಯಿಗೆ ಹೋಗಿ ಬಂದ ಸುದ್ದಿ ಅರಿತ ಸ್ಥಳೀಯರು ಆತನಿಗೆ ಆರೋಗ್ಯ ತಪಾಸಣೆ ಮಾಡಿಕೊಳ್ಳಲು ಒತ್ತಾಯಿಸಿದರು. ಜನರ ಒತ್ತಾಯದ ಮೇರೆಗೆ ಆತ ಮೇ 19 ರಂದು ಸ್ವಯಂ ಆಗಿ ಬಂದು ಪರೀಕ್ಷೆಗಾಗಿ ಗಂಟಲು ದ್ರವ ನೀಡಿ ಹೋಗಿದ್ದನು. ವರದಿ ಬರುವ ಮೊದಲೇ ಬೆಂಗಳೂರಿಗೆ ಅನಾನಸ್‌ ಲೋಡ್‌ ಮಾಡಿಕೊಂಡು ಹೋಗಿದ್ದಾನೆ. ಶುಕ್ರವಾರ ಬೆಳಗ್ಗೆ ವರದಿ ಪಾಸಿಟಿವ್‌ ಬರುತ್ತಿದ್ದಂತೆ ಆತನನ್ನು ಬೆಂಗಳೂರಿನಿಂದ ಹಾವೇರಿಗೆ ಕರೆದುಕೊಂಡು ಬರಲಾಗುತ್ತಿದೆ. ಉಳಿದೆರಡು ಪ್ರಕರಣಗಳಲ್ಲಿ ಟ್ರಾವೆಲ್‌ ಹಿಸ್ಟರಿ ಸ್ಪಷ್ಟವಾಗಿದ್ದು, ಒಂದು ಪ್ರಕರಣದ ಪೂರ್ಣ ಹಿಸ್ಟರಿ ಈವರೆಗೆ ಗೊತ್ತಾಗಿಲ್ಲ. ಹೀಗಾಗಿ ಈ ಸೋಂಕಿತನಿಂದ ಯಾರಿಗೆಲ್ಲ ಕ್ವಾರಂಟೈನ್‌ ಮಾಡಬೇಕು ಎಂಬುದು ಹಿಸ್ಟರಿ ತಿಳಿದಾಗಲೇ ಗೊತ್ತಾಗಬೇಕಿದೆ.

ಲಕ್ಷಣಗಳು ಇರಲಿಲ್ಲ… :  ಪಿ-1691 ಸೋಂಕಿತನಿಗೆ ಕೋವಿಡ್  ಲಕ್ಷಣಗಳು ಇರಲಿಲ್ಲ. ಹಾಗಾಗಿ ಆತ ಆರಾಮಾಗಿದ್ದನು. ಆದರೆ, ಈತ ಮುಂಬಯಿಗೆ ಹೋಗಿ ಬಂದಿರುವ ಮಾಹಿತಿ ಇದ್ದ ಸ್ಥಳೀಯರು ಹಾಗೂ ರೂಮ್‌ ಬಾಡಿಗೆ ಕೊಟ್ಟವರು ಆರೋಗ್ಯ ತಪಾಸಣೆಗೆ ಒತ್ತಾಯಿಸಿದ್ದರು. ಅವರ ಒತ್ತಾಯದ ಮೇರೆಗೆ ಮೇ 19 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಪರೀಕ್ಷೆಗಾಗಿ ಗಂಟಲು ದ್ರವ ಕೊಟ್ಟು ಹೋಗಿದ್ದನು. ಸ್ವಯಂ ಆಗಿ ಬಂದು ತಪಾಸಣೆ ಮಾಡಿಕೊಂಡರೆ ಅವರನ್ನು ಕ್ವಾರಂಟೈನ್‌ ಮಾಡುವುದಿಲ್ಲ. ಮಾದರಿಯನ್ನು ನೇರವಾಗಿ ಬೆಂಗಳೂರು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ವರದಿ ಪಾಸಿಟಿವ್‌ ಬಂದಿದೆ. ಇದರ ಬಗ್ಗೆ ಅರಿವಿಲ್ಲದ ಆತ ಅನಾನಸ್‌ ಲೋಡ್‌ ಮಾಡಿಕೊಂಡು ಬೆಂಗಳೂರಿಗೆ ಹೋಗಿದ್ದು ಆತನನ್ನು ಪೊಲೀಸರ ಸಹಾಯದಿಂದ ಹಾವೇರಿಗೆ ಕರೆತರಲಾಗುತ್ತಿದೆ. ವಿಚಾರಣೆಯಿಂದಷ್ಟೇ ಆತನ ಟ್ರಾವೆಲ್‌ ಹಿಸ್ಟರಿ ಗೊತ್ತಾಗಬೇಕಿದೆ.  – ಯೋಗೇಶ್ವರ, ಅಪರ ಜಿಲ್ಲಾಧಿಕಾರಿ.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.