ವಾಯು ಮಾಲಿನ್ಯ ತಡೆಗೆ ಜೈವಿಕ ಇಂಧನ ಬಳಸಿ

ಪ್ರತಿ ವರ್ಷ ಆ.10 ರಂದು ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಆಚರಿಸಲಾಗುತ್ತಿದೆ

Team Udayavani, Aug 17, 2022, 6:28 PM IST

ವಾಯು ಮಾಲಿನ್ಯ ತಡೆಗೆ ಜೈವಿಕ ಇಂಧನ ಬಳಸಿ

ಹಾವೇರಿ: ಕರಿದ ಅಡುಗೆ ಎಣ್ಣೆಯನ್ನು ಮರು ಬಳಸುವುದು ಆರೋಗ್ಯಕ್ಕೆ ಹಾನಿಕರ. ಈ ಎಣ್ಣೆಯನ್ನು ಜೈವಿಕ ಇಂಧನವಾಗಿ ಮಾರ್ಪಡಿಸಬಹುದು. ಇದರಿಂದ ಪರಸರ ಹಾನಿ ಹಾಗೂ ಮಾನವನ ಆರೋಗ್ಯದ ಹಾನಿಯನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್‌ ಹೇಳಿದರು.

ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಜಿಲ್ಲಾ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕೇಂದ್ರ, ಕೃಷಿ ಮಹಾವಿದ್ಯಾಲಯ, ಹನುಮನಮಟ್ಟಿ, ಕರ್ನಾಟಕ ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ವಿಭಾಗ ಹಾಗೂ ನೀಡ್ಸ್‌ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೊಡ್ಡ ದೊಡ್ಡ ನಗರಗಳಲ್ಲಿ ಹೆಚ್ಚಾಗುತ್ತಿರುವ ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ 1893ರಲ್ಲಿ ಸರ್‌ ರುಡಾಲ್‌  ಅವರು ಶೇಂಗಾ (ನೆಲಗಡಲೆ) ಎಣ್ಣೆಯಿಂದ ಜೈವಿಕ ಇಂಧನ ತಯಾರಿಸಿದರು. ಬಳಸಿದ ನೆಲಗಡಲೆ ಎಣ್ಣೆಯನ್ನು ವಾಹನಗಳಿಗೆ ಬಳಸಬಹುದು ಎನ್ನುವುದನ್ನು ಕಂಡು ಹಿಡಿದರು. ಇಂದು ಜೈವಿಕ ಇಂಧನದ ಪ್ರಾಮುಖ್ಯತೆ ಹೆಚ್ಚಾಗಿದೆ. ಪರಿಸರ ನಾಶ, ವಾಯು ಮಾಲಿನ್ಯ ತಡೆಯಲು ಜೈವಿಕ ಇಂಧನ ಬಳಕೆ ಹೆಚ್ಚಾಗಬೇಕು ಎಂದು ಹೇಳಿದರು.

ಉಪ ಅರಣ್ಯ ಸಂರಕ್ಷಣಾ ಧಿಕಾರಿ ಬಾಲಕೃಷ್ಣ ಎಸ್‌. ಮಾತನಾಡಿ, ನಮ್ಮ ಸುತ್ತ-ಮುತ್ತ ಬೇವು, ಹೊಂಗೆ ಇತ್ಯಾದಿ ಮರಗಳನ್ನು ಹೆಚ್ಚು ಹೆಚ್ಚು ನೆಡಬೇಕು. ಇದರಿಂದ ಪರಿಸರದ ಸಂರಕ್ಷಣೆಯಾಗುವುದಲ್ಲದೇ, ಮರಗಳ ಬೀಜಗಳಿಂದ ಜೈವಿಕ ಇಂಧನ ತಯಾರಿಸಬೇಕು. ಆದ್ದರಿಂದ, ಸ್ವ ಸಹಾಯ ಗುಂಪಿನ ಸದಸ್ಯರು ಇಂತಹ ಗಿಡಗಳ ಬೀಜಗಳನ್ನು ಸಂಗ್ರಹಿಸಿ, ಹತ್ತಿರದಲ್ಲಿರುವ ಜೈವಿಕ ಇಂಧನ ಘಟಕಕ್ಕೆ ನೀಡಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕೃಷಿ ಮಹಾವಿದ್ಯಾಲಯದ ಡೀನ್‌ ಹಾಗೂ ಮುಖ್ಯಸ್ಥ ಡಾ|ಎಂ.ವಿ. ಮಂಜುನಾಥ ಮಾತನಾಡಿ, ಪೆಟ್ರೋಲ್‌, ಡೀಸೆಲ್‌ ಬಳಕೆಗೆ ಪರ್ಯಾಯವಾಗಿ ಮೊಟ್ಟ ಮೊದಲಿಗೆ 1893ರಲ್ಲಿ ಸರ್‌ ರುಡಾಲ್‌  ಅವರು ಆ. 10ರಂದು ನೆಲಗಡಲೆ-ಶೇಂಗಾ ಎಣ್ಣೆಯಿಂದ ಜೈವಿಕ ಇಂಧನ ತಯಾರಿಸಬಹುದೆಂಬುದನ್ನು ಕಂಡುಹಿಡಿದರು.ಆದ್ದರಿಂದ, ಪ್ರತಿ ವರ್ಷ ಆ.10 ರಂದು ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ಜಾಗತಿಕ ತಾಪಮಾನ ಏರಿಕೆ ತಡೆಗಟ್ಟಲು ಸೌರಶಕ್ತಿಯಿಂದ-ವಿದ್ಯುತ್‌ ಬಳಕೆ ಹಾಗೂ ಕೃಷಿ ಶಕ್ತಿಯಿಂದ-ಹೊಂಗೆ, ಬೇವಿನ ಮರಗಳನ್ನು ಹೆಚ್ಚು ಹೆಚ್ಚು ಬೆಳೆಸಿ ಜೈವಿಕ ಇಂಧನ ತಯಾರಿಸುವ ಕುರಿತು ಮನದಟ್ಟು ಮಾಡಿದರು. 2030ರ ವೇಳೆಗೆ ಹೆಚ್ಚು ಹೆಚ್ಚು ಜೈವಿಕ ಇಂಧನ ಸ್ಥಾವರಗಳನ್ನು ಸ್ಥಾಪಿಸೋಣ ಎಂದರು.

ಹನುಮನಮಟ್ಟಿ ಮಹಾವಿದ್ಯಾಲಯದ ಜೈವಿಕ ಇಂಧನ ಘಟಕದ ಸಂಯೋಜಕಿ ಡಾ|ಪ್ರಿಯಾ ಪಿ. ಹಾಗೂ ಕೃಷಿ ಉಪನಿರ್ದೇಶಕಿ ಸ್ಫೂರ್ತಿ ಜಿ.ಎಸ್‌., ನೀಡ್ಸ್‌ ಸಂಸ್ಥೆಯ ಎಚ್‌.ಎಫ್‌. ಅಕ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಡಾ|ರಾಜಾನಂದ ಹಿರೇಮಠ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.