ನೀರು ಪೂರೈಕೆಗೆ ಅನುದಾನ ಬಳಸಿ
•14ನೇ ಹಣಕಾಸು ಯೋಜನೆಯ ಅನುದಾನ ಕುಡಿಯುವ ನೀರಿಗಾಗಿ ಮೀಸಲಿಡಿ
Team Udayavani, Jun 26, 2019, 11:00 AM IST
ಹಿರೇಕೆರೂರ: ತಾಪಂ ಸಭಾಭವನದಲ್ಲಿ ಶಾಸಕ ಬಿ.ಸಿ.ಪಾಟೀಲ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮತ್ತು ಅಧ್ಯಕ್ಷರ ಸಭೆ ನಡೆಯಿತು.
ಹಿರೇಕೆರೂರ: ಸರ್ಕಾರದ 14ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾದ ಹಣ ಸಂಪೂರ್ಣವಾಗಿ ಕುಡಿಯುವ ನೀರಿನ ಸಮಸ್ಯೆಗೆ ಬಳಸಬೇಕು. ಈ ಬಗ್ಗೆ ಸರ್ಕಾರವೇ ಸ್ಪಷ್ಟ ನಿರ್ದೇಶನ ನೀಡಿದ್ದು, ಇದಕ್ಕೆ ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ.ಸಿ.ಪಾಟೀಲ ಎಚ್ಚರಿಸಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ರಟ್ಟೀಹಳ್ಳಿ, ಹಿರೇಕೆರೂರು ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು.
ಸತತ 5 ವರ್ಷಗಳಿಂದ ಬರಗಾಲ ಆವರಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕುಡಿಯುವ ನೀರಿಗಾಗಿ ಈಗಾಗಲೆ 130 ಬೊರವೆಲ್ ಕೊರೆಸಲಾಗಿದೆ. 75 ಖಾಸಗಿ ರೈತರ ಬೊರವೆಲ್ಗಳಿಂದ ಹಾಗೂ ಟ್ಯಾಂಕರಗಳಿಂದ ನೀರು ಪೂರೈಲಾಗುತ್ತಿದ್ದರೂ ನೀರು ಸಾಕಾಗದೇ ಸಮಸ್ಯೆ ಎದುರಾಗುತ್ತಿದ್ದು, ಮಳೆ ಬರುವವರೆಗೆ ಸಾರ್ವಜನಿಕರು ನೀರನ್ನು ಮಿತವ್ಯಯವಾಗಿ ಬಳಸಬೇಕು. ಈ ಬಗ್ಗೆ ಗ್ರಾಪಂ ಅಧ್ಯಕ್ಷರು, ಪಿಡಿಒ ಅವರು ಜನರಿಗೆ ಮನವರಿಕೆ ಮಾಡಬೇಕು. ಕುಡಿಯುವ ನೀರಿಗಾಗಿ ಕೊರೆಸಿದ ಕೊಳವೆಬಾವಿಗಳ ಬಗ್ಗೆ ಎಂಜಿನಿಯರ್ ಮತ್ತು ಪಿಡಿಒ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿ, ನಿಷ್ಪಕ್ಷಪಾತ ವರದಿ ತಯಾರಿಸಿ ನನ್ನ ಗಮನಕ್ಕೆ ತರಬೇಕು ಎಂದರು.
ನಂತರ ಬೋರವೆಲ್ ವಾಹನದ ಮಾಲೀಕರಿಗೆ ಹಣ ಸಂದಾಯ ಮಾಡಬೇಕು. ಇದರಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. 14 ಹಣಕಾಸು ಯೋಜನೆಯ ರೂಪುರೇಷೆ ನಿಯಮಗಳನ್ನು ಬದಲಿಸಿದ್ದು, ಈ ಯೋಜನೆಯ ಹಣ ಮೊದಲು ಚೆಕ್ ನೀಡಲಾಗುತ್ತಿತ್ತು. ಈಗ ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಬಗ್ಗೆ ಪಿಡಿಒ ಅವರು ಗ್ರಾಪಂ ಅಧ್ಯಕ್ಷರ ಗಮನಕ್ಕೆ ತರಬೇಕು ಎಂದು ಸೂಚಿಸಿದರು. ಸಭೆಯಲ್ಲಿ ತಾಪಂ ಇಒ ಸಂತೋಷಕುಮಾರ ತಳಕಲ್, ರಟ್ಟೀಹಳ್ಳಿ, ಹಿರೇಕೆರೂರು ತಾಲೂಕಿನ ಎಲ್ಲ ಗ್ರಾಪಂ ಅಧ್ಯಕ್ಷರು, ಪಿಡಿಒಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ