ಫೆ.8-9ರಂದು ವಾಲ್ಮೀಕಿ ಜಾತ್ರೋತ್ಸವ
Team Udayavani, Jan 4, 2021, 3:35 PM IST
ಹಾವೇರಿ: ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ 3ನೇ ವರ್ಷದಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ, ಮಠದ 23ನೇ ವಾರ್ಷಿಕೋತ್ಸವ, ಲಿಂ.ಪುಣ್ಯಾನಂದಪುರಿ ಶ್ರೀಗಳ 13ನೇ ಪುಣ್ಯಾರಾಧನೆ, ಪ್ರಸನ್ನಾನಂದ ಶ್ರೀಗಳ 13ನೇ ವರ್ಷದ ಪಟ್ಟಾ ಧಿಕಾರ ಮಹೋತ್ಸವ ಕಾರ್ಯಕ್ರಮ ಫೆ. 8, 9ರಂದು ನಡೆಯಲಿದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.
ನಗರದ ಶಿವಶಕ್ತಿ ಪ್ಯಾಲೇಸ್ನಲ್ಲಿ ಆಯೋಜಿಸಲಾಗಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ವಾಲ್ಮೀಕಿ ಜಾತ್ರೆಯಪೂರ್ವದಲ್ಲಿಯೇ ಮುಖ್ಯಮಂತ್ರಿಗಳು 2ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿನೀಡಿದ ಭರವಸೆಯಂತೆ ವಾಲ್ಮೀಕಿ ಸಮಾಜಕ್ಕೆ ಶೇ.7.5 ಮೀಸಲಾತಿಯನ್ನು ಘೋಷಿಸಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಇಲ್ಲದೇ ಹೋದರೆ, ಸರ್ಕಾರದೊಂದಿಗೆ ಸಂಘರ್ಷಕ್ಕಿಳಿಯುವುದು ಶತಸಿದ್ಧ.ಹೋರಾಟಕ್ಕೆ ಸಮಾಜ ಬಾಂಧವರು ಸಿದ್ಧರಾಗಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ವಾಲ್ಮೀಕಿ ಸಮಾಜ ನಾಲ್ಕನೇ ದೊಡ್ಡ ಸಮುದಾಯವಾಗಿದ್ದು, ವಾಲ್ಮೀಕಿ ಸಮಾಜಕ್ಕೆ ಉದ್ಯೋಗಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಶೇ.7.5ಮೀಸಲಾತಿನೀಡುವಂತೆ ಕಳೆದ ಮೂರು ದಶಕಗಳಿಂದ ಹೋರಾಟಮಾಡಲಾಗುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿ ಸಿದಂತೆ ರಚಿಸಲಾದ ನಾಗಮೋಹನದಾಸ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ವಾಲ್ಮೀಕಿ ಜಾತ್ರೆಯಪೂರ್ವದಲ್ಲಿ ಜಾರಿಗೊಳಿಸಬೇಕು. ಇಲ್ಲದೇ ಹೋದರೆತಾವು ಸಮಾಜದೊಂದಿಗೆ ಉಗ್ರ ಹೋರಾಟ ನಡೆಸಲು ಸಿದ್ಧರಿರುವುದಾಗಿ ತಿಳಿಸಿದರು.
ವಾಲ್ಮೀಕಿ ಜಾತ್ರೆ ಕೇವಲ ಜಾತ್ರೆಯಲ್ಲ, ಜಾಗೃತಿ ಜಾತ್ರೆಯಾಗಿದೆ. ಈಗಾಗಲೇ ಅನೇಕ ಸಮಾಜದವರು ಅವರವರ ಸಾಂಸ್ಕೃತಿಕ ನಾಯಕರ ಹೆಸರಲ್ಲಿ ಸಂಘಟಿತರಾಗುತ್ತಿದ್ದಾರೆ. ದೇಶದಲ್ಲಿ ವಾಲ್ಮೀಕಿ ಸಮಾಜ ವಿವಿಧ ಹೆಸರುಗಳಲ್ಲಿ ಕರೆಯಲ್ಪಡುತ್ತಿದೆ. ಇವನ್ನೆಲ್ಲ ಸಮೀಕರಿಸಿ ಒಂದೇ ವೇದಿಕೆಗೆ ತರುವ ಸವಾಲು ನಮ್ಮ ಮುಂದಿದೆ. ಆ ದಿಸೆಯಲ್ಲಿ ಜಾತ್ರಾ ಮಹೋತ್ಸವ ಆಯೋಜಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ 108 ತಾಲೂಕುಗಳಲ್ಲಿ ಪ್ರವಾಸ ಮಾಡಿ ವಾಲ್ಮೀಕಿ ಜಾತ್ರೆಯ ಬಗ್ಗೆ ಹಾಗೂ ಶೇ.7.5 ಮೀಸಲಾತಿ ವಿಳಂಬದ ಬಗ್ಗೆ ಸಮಾಜ ಬಾಂಧವರಲ್ಲಿ ಅರಿವು ಮೂಡಿಸಲಾಗಿದ್ದು, ಜನೇವರಿಅಂತ್ಯಕ್ಕೆ ಇನ್ನುಳಿದ ತಾಲೂಕುಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರಾದ ಕೆ.ಮಂಜಣ್ಣ, ಅಶೋಕ ತಳವಾರ, ಮಂಜುಳಾ ಕರಬಸಮ್ಮನವರ, ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿ ವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ರಮೇಶ ಆವನಟ್ಟಿ ಮಾತನಾಡಿದರು.ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಶೇಖರಕಳ್ಳಿಮನಿ, ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶೋಕ ಹರನಗಿರಿ, ಪ್ರಮುಖರಾದ ಶ್ರೀಧರ ದೊಡ್ಡಮನಿ, ಅನಿಲ ಕುಮಾರ ಮರೋಳ, ಪ್ರಮೋದ ನಲವಾಗಿಲ, ಡಾ.ರಮೇಶ ತೆವರಿ, ಶೇಖರ ಕರಬಸಮ್ಮನವರ, ಈಶಪ್ಪ ಭೀಮಕ್ಕನವರ, ಶಿವಪ್ಪ ಜವಳಿ, ಮಲ್ಲಿಕಾರ್ಜುನ ಬೂದಗಟ್ಟಿ, ಬಸವರಾಜ ತಡಸದ, ಬಸವ ರಾಜ ಭೀಮಕ್ಕನವರ, ಸಿ.ವಿ.ಬ್ಯಾಡಗಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ