ವೀರಶೈವ ಧರ್ಮ ಸಮೃದ್ಧಿ-ಜ್ಞಾನದ ಸಂಕೇತ


Team Udayavani, Apr 3, 2021, 8:07 PM IST

ಕಜಹಗ್ದಸೆರತಯುಹಗ

ಅಕ್ಕಿಆಲೂರು : ದೇಶದಲ್ಲಿ ಹತ್ತು ಹಲವು ಧರ್ಮಗಳು ನೆಲೆಯೂರಿದ್ದು, ಹೊರ ದೇಶಗಳ ವಿವಿಧ ಧರ್ಮಗಳಿಗೂ ಭಾರತ ಆಶ್ರಯ ತಾಣವಾಗಿದೆ. ಇವೆಲ್ಲವುಗಳ ಪೈಕಿ ವೀರಶೈವ ಧರ್ಮ ಸಮೃದ್ಧಿ ಮತ್ತು ಜ್ಞಾನದ ಸಂಕೇತವಾಗಿ ಜಗತ್ತನ್ನು ರಕ್ಷಿಸುವ ಉದ್ದೇಶ ಹೊಂದಿದೆ ಎಂದು ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಹೇಳಿದರು.

ಪಟ್ಟಣದ ಮುತ್ತಿನಕಂತಿಮಠ ಗುರುಪೀಠದಲ್ಲಿ ಲಿಂ.ವೀರರಾಜೇಂದ್ರ ಶಿವಾಚಾರ್ಯ ಶ್ರೀಗಳ 29ನೇ ಪುಣ್ಯಸ್ಮರಣೋತ್ಸವ, ನೂತನ ಶಿಲಾಮಠದ ಹೊಸ್ತಿಲು ಪೂಜಾ ಕಾರ್ಯಕ್ರಮದ ಪ್ರಯುಕ್ತ ನಡೆದ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಸನಾತನ ಕಾಲದಲ್ಲಿ ಸ್ಥಾಪಿತಗೊಂಡು ವಿಶ್ವಮಾನ್ಯವಾಗಿ ಪ್ರಕಾಶಿಸುತ್ತಿರುವ ವೀರಶೈವ ಧರ್ಮ ಸ್ವಾವಲಂಬಿ ಮತ್ತು ಪರಿಪೂರ್ಣವಾಗಿದೆ. ಸಮಾಜದಲ್ಲಿರುವ ಜಾತೀಯತೆ, ಅಸಮಾನತೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿ ಕಲ್ಯಾಣ ರಾಜ್ಯ ಸ್ಥಾಪಿಸುವ ಉದ್ದೇಶದಿಂದ ಕಾರ್ಯನಿರತವಾಗಿರುವ ಮಠ- ಮಾನ್ಯಗಳೊಂದಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದರು.

ಹಾವೇರಿ ಹುಕ್ಕೇರಿಮಠದ ಸದಾಶಿವ ಶ್ರೀಗಳು ಆಶೀರ್ವಚನ ನೀಡಿ, ಪ್ರಾಚೀನ ಪರಂಪರೆಯ ಉಳವಿಗಾಗಿ ಮಠ-ಮಾನ್ಯಗಳಿಂದು ಮನೆಗೆ ಗೋಡೆ ಮತ್ತು ತೋಟಕ್ಕೆ ಬೇಲಿಯಂತೆ ರûಾ ಕವಚವಾಗಿ ಕಾರ್ಯಪ್ರವೃತ್ತವಾಗಿವೆ. ಸಮುದಾಯದಲ್ಲಿ ಅಧರ್ಮದ ಆರಾಧಕರಾಗಿ ಶಾಂತಿ ಕದಡುವ ಕೆಲಸದಲ್ಲಿ ತೊಡಗಿರುವ ದುಷ್ಠ ಶಕ್ತಿಗೆ ತಕ್ಕ ಪಾಠ ಕಲಿಸುವ ಮೂಲಕ ನಮ್ಮ ದೇಶಕ್ಕಿರುವ ವಿಶ್ವಗುರುವೆಂಬ ಬಿರುದನ್ನು ಸಂರಕ್ಷಿಸುವಲ್ಲಿ ಯುವಶಕ್ತಿ ಮುಂದಾಗಬೇಕಿದೆ.

ಸಮಾಜದಲ್ಲಿ ಅನೇಕ ದುಶ್ಚಟಗಳಿಗೆ ಅಂಟಿಕೊಂಡು ಭವಿಷ್ಯ ಹಾಳು ಮಾಡಿಕೊಳ್ಳುತ್ತಿರುವ ಯುವಪೀಳಿಗೆ ಸಮಾಜಮುಖೀ ಕಾರ್ಯ ಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಜವಾಬ್ದಾರಿ ಪ್ರದರ್ಶಿಸಬೇಕೆಂದರು. ಹಾವೇರಿ ಹರಸೂರು ಬಣ್ಣದ ಮಠದ ಅಭಿನವ ರುದ್ರ ಮಲ್ಲಿಕಾರ್ಜುನ ಶ್ರೀಗಳು ಆಶೀರ್ವಚನ ನೀಡಿದರು. ನಂತರ ಗದಗಿನ ಸದಾನಂದ ಶಾಸ್ತ್ರೀಗಳು ಪ್ರವಚನ ಆರಂಭಿಸಿದರು.

ಕೊತ್ತಲಚಿಂತಿಯ ಶರಣಕುಮಾರ ಗವಾಯಿಗಳು ಸಂಗೀತ, ಕಂಚಿನೆಗಳೂರಿನ ಷಣ್ಮುಖಯ್ಯ ಹಿರೇಮಠ ವಾಯ್‌ಲಿನ್‌, ಗುಲ್ಬರ್ಗಾದ ಸಂತೋಷಕುಮಾರ ತಬಲಾ ಸಾಥ್‌ ನೀಡಿದರು. ಅಕ್ಕಿಆಲೂರಿನ ಗ್ರಾಪಂ ಸದಸ್ಯರನ್ನು ಸನ್ಮಾನಿಸಲಾಯಿತು. ಗಂಗಪ್ಪನವರು ಸಾಲವಟಿಗಿ, ಪ್ರಭಣ್ಣನವರು ಬೆಲ್ಲದ ಸೇರಿದಂತೆ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.