ಗ್ರಾಪಂ ನೌಕರರ ಬೇಡಿಕೆ ಈಡೇರಿಸಿ
Team Udayavani, Sep 18, 2019, 11:43 AM IST
ಹಾವೇರಿ: ಗ್ರಾಪಂ ನೌಕರರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಿಐಟಿಯು ಸಂಯೋಜಿತ ರಾಜ್ಯ ಗ್ರಾಪಂ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗ್ರಾಪಂ ನೌಕರರು ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ಈಗಾಗಲೇ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರು ಎಲ್ಲ ನೌಕರರ ಸೇವಾ ನಿಯಮಾವಳಿಗಳನ್ನು ಸಿ ಮತ್ತು ಡಿ ದರ್ಜೆ ಮಾಡಲು ಒಪ್ಪಿಕೊಂಡಿದ್ದು ಕೂಡಲೇ ಮಂಜೂರಾತಿ ನೀಡಬೇಕು.ಎಲ್ಲ ನೌಕರರಿಗೆ ಸೆಪ್ಟೆಂಬರ್ ತಿಂಗಳಿನಿಂದ ಇಎಫ್ಎಂಎಸ್ ಮೂಲಕ ಪ್ರತಿ ತಿಂಗಳ ವೇತನ ನೀಡಬೇಕು. 6ರಿಂದ 20 ತಿಂಗಳಿನಿಂದ ಬಾಕಿಯಿರುವ ವೇತನವನ್ನು ಸ್ಥಳೀಯ ಸಂಪನ್ಮೂಲದ ಶೇ. 40, 14ನೇ ಹಣಕಾಸು ನಿಧಿಯಿಂದ ಶೇ. 10ರಷ್ಟನ್ನು ಪಾವತಿಸಲು ರಾಜ್ಯ ಸರ್ಕಾರದ ಆದೇಶವಿದ್ದರೂ ನೌಕರರಿಗೆ ಪಾವತಿಸಿಲ್ಲ. ಕೂಡಲೇ ವೇತನ ಪಾವತಿಸಬೇಕು. ಎಂ.ಎಸ್. ಸ್ವಾಮಿ ವರದಿ ಜಾರಿಗೊಳಿಸಬೇಕು ಎಂದು ಗ್ರಾಪಂ ನೌಕರರು ಒತ್ತಾಯಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ವಿ.ಕೆ. ಬಾಳಿಕಾಯಿ, ಪ್ರಧಾನ ಕಾರ್ಯದರ್ಶಿ ಜಗದೀಶ ಕೋಟಿ, ರಾಜ್ಯ ಉಪಾಧ್ಯಕ್ಷ ಬಿ.ಐ. ಈಳಗೇರ, ಸಿಐಟಿಯು ಸಂಚಾಲಕ ವಿನಾಯಕ ಕುರುಬರ, ಪರಮೇಶ ಪುರದ, ಮಹಾಂತೇಶ ಎಲಿ, ಬಸವರಾಜ ಬೋವಿ, ಅಂದಾನೆಪ್ಪ ಹೆಬಸೂರ ಇತರರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು