ಹಳ್ಳಿ ಸೊಗಡಿನ ಹಟ್ಟಿಹಬ್ಬ ಸಂಭ್ರಮ


Team Udayavani, Oct 30, 2019, 1:59 PM IST

hv-tdy-1

ಹಾವೇರಿ: ದೀಪಾವಳಿ ಹಬ್ಬದ ಮೂರನೇ ದಿನವಾದ ಮಂಗಳವಾರ ಬಲಿಪಾಡ್ಯ (ಬಲಿಪ್ರತಿಪದೆ)ವನ್ನು ಜಿಲ್ಲೆಯಲ್ಲಿ “ಹಟ್ಟಿ ಹಬ್ಬ’ ಎಂಬ ಹೆಸರಿನಿಂದ ಅಪ್ಪಟ ಗ್ರಾಮೀಣ  ಸಂಪ್ರದಾಯಗಳೊಂದಿಗೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.

ಹಟ್ಟಿ ಲಕ್ಕವ್ವ ಪ್ರತಿಷ್ಠಾಪನೆ: ಕಳೆದೆರಡು ದಿನಗಳಿಂದ ಮಳೆ ಕಡಿಮೆಯಾಗಿ ಪ್ರಖರ ಬಿಸಿಲಿನ ವಾತಾವರಣವಿರುವುದರಿಂದ ಹಬ್ಬದ ಸಡಗರ ಹೆಚ್ಚಲು ಕಾರಣವಾಯಿತು. ಜಿಲ್ಲೆಯಾದ್ಯಂತ ದೇವಿ ಹಟ್ಟಿ ಲಕ್ಕವ್ವ ಪೂಜೆ, ಗೋಪೂಜೆ, ಲಕ್ಷ್ಮೀ ಪೂಜೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಬಲಿಪಾಡ್ಯದಂದು ಜಿಲ್ಲೆಯಲ್ಲಿ ಹಟ್ಟಿ ಲಕ್ಕಮ್ಮನ ಪೂಜೆ ವಿಶೇಷವಾಗಿ ಆಚರಿಸಲಾಯಿತು. ರೈತರು ಮನೆಯಲ್ಲಿರುವ ಕೃಷಿ ಬಳಕೆ ಸಾಮಗ್ರಿ ತೊಳೆದು ಅರಿಶಿಣ-ಕುಂಕುಮ, ಹೂಗಳಿಂದ ಸಿಂಗರಿಸಿ, ಹಟ್ಟಿ ಲಕ್ಕವ್ವನ ಪ್ರತಿಷ್ಠಾಪಿಸಿ ಪೂಜಿಸಿದರು.

ಸಡಗರ-ಸಂಭ್ರಮ: ಗ್ರಾಮೀಣ ರೈತರ ಮನೆಗಳಲ್ಲಿ ಹಟ್ಟಿ ಹಬ್ಬ ಅದ್ದೂರಿಯಾಗಿ, ವೈವಿಧ್ಯಪೂರ್ಣವಾಗಿ ಆಚರಿಸಲಾಯಿತು. ದೀಪಾವಳಿ ಮೊದಲ ಎರಡು ದಿನಗಳಿಗಿಂತ ಮೂರನೇ ದಿನವಾದ ಬಲಿಪಾಡ್ಯಕ್ಕೆ ಜನರು ಹೆಚ್ಚಿನ ಪ್ರಾಧಾನ್ಯತೆ ನೀಡುವುದರಿಂದ ಮಂಗಳವಾರ ಮನೆ ಮನೆಗಳಲ್ಲಿ ಸಂಭ್ರಮ, ಸಡಗರ ತುಂಬಿತ್ತು. ಸೆಗಣಿಯಲ್ಲಿ ಪಾಂಡವರನ್ನು ಮಾಡಿ ಚಂಡು ಹೂವಿನ ಐದು ಗಿಡಗಳ ನಡುವೆ ಪ್ರತಿಷ್ಠಾಪಿಸಿದರು.

ಇದರ ನಡುವೆ ಸೆಗಣಿಯಲ್ಲಿಯೇ ಲಕ್ಷ್ಮೀಯನ್ನೂ ಮಾಡಿದರು. ಈ ಲಕ್ಷ್ಮೀಯೇ ಗ್ರಾಮೀಣ ಭಾಷೆಯಲ್ಲಿ “ಹಟ್ಟಿ ಲಕ್ಕವ್ವ’ ಎಂದು ಕರೆಸಿಕೊಳ್ಳುತ್ತಾಳೆ. ಹಟ್ಟಿ ಲಕ್ಕವ್ವಗೆ ಚಿನ್ನಾಭರಣ, ವಸ್ತ್ರ, ಉತ್ರಾಣಿ ಕಡ್ಡಿ, ಹೂ ಹಾರಗಳಿಂದ ಸಿಂಗರಿಸಿ, ಹೋಳಿಗೆ, ಕಡಬು ಇತರ ಸಿಹಿ ಖಾದ್ಯಗಳ ನೈವೇದ್ಯ ಮಾಡಿ ಪೂಜಿಸಿದರು. ಹಣತೆ ದೀಪಗಳ ಬೆಳಕಲ್ಲಿ ಲಕ್ಕವ್ವ ಫಳಫಳ ಹೊಳೆದಳು.

ಮನೆ, ಕೊಟ್ಟಿಗೆ, ವ್ಯಾಪಾರ, ಉದ್ಯೋಗಕ್ಕೆ ಹೀಗೆ ನಿತ್ಯ ಉಪಯೋಗಿ ಕಸಬರಿಗೆಯಿಂದ ಹಿಡಿದು ಎಲ್ಲ ವಸ್ತುಗಳನ್ನೂ ತೊಳೆದು ಸುಣ್ಣ- ಬಣ್ಣ ಬಳಿದು ಅವುಗಳ ಸಮೀಪವೂ ಅರಿಶಿಣ-ಕುಂಕುಮ, ಉತ್ರಾಣಿ ಕಡ್ಡಿ, ಹೂಗಳಿಂದ ಸಿಂಗರಿಸಿದ ಸೆಗಣಿಯ ಪಾಂಡವರನ್ನು ಇಟ್ಟು ಪೂಜಿಸಿದರು. ತನ್ಮೂಲಕ ಪಾಂಡವರು ಪಟ್ಟ ಕಷ್ಟ ಯಾರಿಗೂ ಬಾರದಿರಲಿ ಎಂಬ ಪ್ರಾರ್ಥನೆ ಮಾಡಿದರು. ಸಂಜೆ ಸೂರ್ಯ ಮುಳುಗುವ ಹೊತ್ತಿಗೆ ಹಟ್ಟಿ ಲಕ್ಕವ್ವಳನ್ನು ಪ್ರತಿಷ್ಠಾಪಿಸಿದ ಸ್ಥಳದಿಂದ ಹೊರ ಅಂಗಳದವರೆಗೆ ಕೆಮ್ಮಣ್ಣು ಹಾಗೂ ಸುಣ್ಣದಿಂದ ಆಕಳ ಹೆಜ್ಜೆಗಳನ್ನು ಬಿಡಿಸಿ, ಹೆಜ್ಜೆಗಳ ಮೇಲೆಯೇ ಆಕಳನ್ನು ಮನೆಯೊಳಗೆ ತಂದು ಮತ್ತೂಮ್ಮೆ  ಪೂಜಿಸುವ ಮೂಲಕ ಹಟ್ಟಿ ಹಬ್ಬ ಸಂಪ್ರದಾಯಬದ್ಧವಾಗಿ ಸಂಪನ್ನಗೊಂಡಿತು.

ಕೆಲ ಅಂಗಡಿಕಾರರು ಪಾಡ್ಯದ ದಿನವೂ ಅಂಗಡಿಗಳಲ್ಲಿ ಕುಟುಂಬದ ಸದಸ್ಯರು, ಬಂಧು-ಬಾಂಧವರು, ಗೆಳೆಯರೊಂದಿಗೆ ಲಕ್ಷ್ಮೀ ಪೂಜೆ ಮಾಡಿದರು. ವಾಹನಗಳನ್ನು ತೊಳೆದು, ಹೂಗಳಿಂದ ಸಿಂಗರಿಸಿ ಪೂಜಿಸಿದರು. ಮನೆ ಮನೆಗಳಲ್ಲಿ ಪಟಾಕಿ ಸದ್ದು: ಕಿವಿಗಡಚ್ಚಿಕ್ಕುವ ರೀತಿಯ ಪಟಾಕಿ ಸದ್ದು ಎಲ್ಲೆಡೆ ಕೇಳಬೇಕು ಎಂದರೆ ಈ

ಭಾಗದಲ್ಲಿ ದೀಪಾವಳಿಯೇ ಬರಬೇಕು. ಗ್ರಾಮೀಣ ಪ್ರದೇಶದ ಮನೆ ಮನೆಗಳಲ್ಲಿ ಪಟಾಕಿ ಸದ್ದು ಕೇಳಿತು. ನಗರದಲ್ಲಂತೂ ಪಟಾಕಿ ಆರ್ಭಟ ಮುಗಿಲು ಮುಟ್ಟಿತ್ತು. ಆಧುನಿಕತೆ ಪ್ರವಾಹದಲ್ಲಿಯೂ ಜನಪದ ಸೊಗಡಿನ ದೀಪಾವಳಿ ಆಚರಣೆ ಇನ್ನೂ ಜೀವಂತವಾಗಿರುವುದು ಜಿಲ್ಲೆಯ ವಿಶೇಷ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.