ರೈತ ಸಂಘದ ಹೆಸರಲ್ಲಿ ನೌಕರರ ಮೇಲೆ ದೌರ್ಜನ್ಯ


Team Udayavani, Oct 23, 2019, 9:47 AM IST

hv-tdy-1

ಹಿರೇಕೆರೂರ: ರೈತ ಸಂಘದ ಹೆಸರಿನಲ್ಲಿ ಸರ್ಕಾರಿ,ಅರೆ ಸರ್ಕಾರಿ ನೌಕರರ ಮತ್ತು ಸಿಬ್ಬಂದಿಗಳ ಮೇಲಾಗುತ್ತಿರುವ ದೌರ್ಜನ್ಯ ತಡೆಯಬೇಕು ಮತ್ತು ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನಲ್ಲಿ ರೈತ ಸಂಘದ ಹೆಸರಿನಲ್ಲಿ ಪ್ರತಿಭಟನೆ ಕರೆದು ಮುಷ್ಕರ ಮಾಡುತ್ತಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಅದು ಅವರ ಹಕ್ಕು. ಅದನ್ನ ಪ್ರತಿಪಾದಿಸಿಕೊಳ್ಳಬಹುದು. ಆದರೆ, ಅಧಿಕಾರಿಗಳನ್ನು ಕರೆದು ಸಾರ್ವಜನಿಕರ ಎದುರು ಅಸಭ್ಯವಾಗಿ ಅಶ್ಲೀಲವಾಗಿ ನಿಂದಿಸುವುದನ್ನು ನೌಕರರ ಸಂಘ ಖಂಡಿಸುತ್ತದೆ. ಅಕ್ಟೋಬರ 21ರಂದು ನಡೆದ ರೈತರ ಮುಷ್ಕರದಲ್ಲಿ ಹಿರೇಕೆರೂರು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳನ್ನು ರೈತ ಸಂಘದ ರಾಮಣ್ಣ ಕೆಂಚಳ್ಳೇರ ಅವಾಚ್ಯ ಹಾಗೂ ಅಶ್ಲೀಲ ಪದಗಳಿಂದ ನಿಂದಿಸಿರುವುದು ಖಂಡಾನಾರ್ಹ.

ಇಂಥ ವಾತಾವರಣದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮುಕ್ತ ಮನಸ್ಸಿನಿಂದ ಕಾರ್ಯ ನಿರ್ವಹಿಸುವುದು ಕಷ್ಟ ಸಾಧ್ಯ. ಭಯದ ವಾತಾವರಣ ಸೃಷ್ಟಿ ಮಾಡುತ್ತಿರುವುದನ್ನು ತಡೆದು ನೌಕರರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಮುಷ್ಕರದ ಹೆಸರಿನಲ್ಲಿ ಕಚೇರಿಗಳಿಗೆ ಬೀಗ ಹಾಕಿ ನೌಕರರನ್ನು ಕೂಡಿ ಹಾಕಿ ಸಾರ್ವಜನಿಕ ಕೆಲಸಗಳಿಗೆ ಅಡ್ಡಿಪಡಿಸಲಾಗುತ್ತಿದೆ.

ಇದರಿಂದ ನೌಕರರಿಗೆ ಮಾನಸಿಕ ಕಿರಿಕಿರಿ ಹಾಗೂ ಕಾರ್ಯದಕ್ಷತೆ ಕುಂದುವಂತೆ ಮಾಡುತ್ತಿರುವುದು ಕಂಡು ಬಂದಿದೆ. ಈ ರೀತಿಯ ಮುಷ್ಕರ ನಡೆಸಿ ಸಿಬ್ಬಂದಿಗಳ ಮೇಲೆ ಒತ್ತಡ ಹೇರುತ್ತಿದ್ದು, ಇದರಿಂದ ತಾಲೂಕಿನಾದ್ಯಂತ ನೌಕರ ವರ್ಗದವರು ತಾಲೂಕಿನಲ್ಲಿ ಕೆಲಸ ನಿರ್ವಹಿಸುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ನೌಕರರನ್ನು ಸಾಮೂಹಿಕವಾಗಿ ವರ್ಗಾವಣೆಯನ್ನಾದರು ಮಾಡಿ ಎನ್ನುವ ತೀರ್ಮಾನಕ್ಕೆ ಬರುವಂತಾಗಿದೆ.

ಮುಷ್ಕರದ ಹೆಸರಿನಲ್ಲಿ ನೌಕರರ ತೇಜೋವಧೆ ಮಾಡಿ ಅಸಭ್ಯವಾಗಿ ಮಾತನಾಡಿದ ಹಾಗೂ ನೌಕರರನ್ನು ನಿಂದಿಸಿದ ರಾಮಣ್ಣ ಕೆಂಚಳ್ಳೇರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ನೌಕರರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕಿನಾದ್ಯಂತ ಆಡಳಿತ ಯಂತ್ರ ಸ್ತಬ್ದಗೊಳಿಸಿ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಮನವಿಯಲ್ಲಿ ಎಚ್ಚರಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿ ಕಾರಿಗಳು ಎಲ್ಲ ಇಲಾಖೆಗಳು ಸರ್ಕಾರಿ ನೌಕರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.