ವಿವೇಕ ಸಂದೇಶ ಯುವಜನತೆಗೆ ದಾರಿದೀಪ


Team Udayavani, Jan 13, 2020, 1:00 PM IST

hv-tdy-1

ಗುತ್ತಲ: ದೇಶದ ಸಂಸ್ಕೃತಿ, ಪರಂಪರೆ, ಧರ್ಮದ ಮಹತ್ವವನ್ನು ಜಗತ್ತಿನ ಎಲ್ಲ ರಾಷ್ಟ್ರಗಳಲ್ಲಿ ಪರಿಚಯಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜನ್ಮದಿನ ಕೇವಲ ಆಚರಣೆಗೆ ಮಾತ್ರ ಸೀಮಿತವಾಗದಿರಲಿ. ಬದಲಾಗಿ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಪಪಂ ಸದಸ್ಯ ನಾಗರಾಜ ಎರಿಮನಿ ಹೇಳಿದರು.

ಪಟ್ಟಣದ ಬಸ್‌ ನಿಲ್ದಾಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಸಿಡಿಲ ಸಂತ ಸ್ವಾಮಿ ವಿವೇಕಾನಂದರ 157ನೇ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮ ಸನಾತನ ಧರ್ಮವಾಗಿದ್ದು, ಅದನ್ನು ಉಳಿಸಿ ಬೆಳೆಸುವ ಸಂಕಲ್ಪ ತೊಡಬೇಕಿದೆ. ಯುವಕರ ಸ್ಫೂರ್ತಿಯಾಗಿರುವ ವಿಶ್ವಗುರು ವಿವೇಕಾನಂದರು ಕೇವಲ 39 ವರ್ಷಗಳಲ್ಲಿ ಅದ್ವಿತೀಯ ಸಾಧನೆಯ ಮೂಲಕ ಭಾರತದ ಕೀರ್ತಿ ತಂದವರು ಎಂದರು.

ಬಂಜಾರ್‌ ಸಂಘದ ಜಿಲ್ಲಾ ಅಧ್ಯಕ್ಷ ಈರಪ್ಪ ಲಮಾಣಿ ಮಾತನಾಡಿ, ಶಿಕಾಗೋ ಸಭೆಯಲ್ಲಿ ಎಲ್ಲರು ತಮ್ಮ ಧರ್ಮವೇ ಶ್ರೇಷ್ಠ ಎಂದರು. ಆದರೆ, ವಿವೇಕಾನಂದರು ಸರ್ವಧರ್ಮ ಸಮನ್ವಯದ ಬಗ್ಗೆ ಹೇಳಿ ಜಗತ್ತಿನ ಕಣ್ಣು ತೆರೆಯಿಸಿದ ಜ್ಞಾನ ಜ್ಯೋತಿ ಎಂದರು. ವಿವೇಕಾನಂದರ ಜನ್ಮ ದಿನವನ್ನು ರಾಷ್ಟ್ರೀಯ ಯುವಕರ ದಿನವನ್ನಾಗಿ ಆಚರಿಸುತ್ತೇವೆ. ಆರೋಗ್ಯವಂತ ಯುವಕರಿದ್ದಲ್ಲಿ ದೇಶದ ನಿರ್ಮಾಣ ಸಾಧ್ಯ. ಪ್ರತಿ ಯುವಕರು ದುರಾಲೋಚನೆ ಬಿಟ್ಟು ಉತ್ತಮ ದೇಶ ಕಟ್ಟುವಲ್ಲಿ ಶ್ರಮ ವಹಿಸಬೇಕು. ಇಂತಹ ನಾಯಕರ ಜೀವನ ಚರಿತ್ರೆ ಓದುವ ಮೂಲಕ ಸಮರ್ಥ ಭಾರತ ಹಾಗೂ ಸದೃಢ ಭಾರತದ ಸಂಕಲ್ಪ ಮಾಡಬೇಕು ಎಂದರು.

ಶಿಕ್ಷಕರಾದ ನಾಗರಾಜ ಕಾಯಕದ ಮಾತನಾಡಿ, ಬಡವರು, ಹಾವಾಡಿಗರ ದೇಶ ಎನ್ನುತ್ತಿದ್ದ ಪಾಶ್ಚಿಮಾತ್ಯರು ಸ್ವಾಮಿವಿವೇಕಾನಂದರ ವೈವಿಧ್ಯೆತೆಯಲ್ಲಿ ಏಕತೆಯನ್ನು ಹೊಂದಿರುವ ಬಗೆಗಿನ ಮಾತುಗಳನ್ನು ಆಲಿಸಿದ ಮೇಲೆ ಅವರ ಕಲ್ಪನೆಯೆ ಬದಲಾಯಿತು ಎಂದರು.

ಪಪಂ ಸದಸ್ಯರಾದ ಲಿಂಗೇಶ ಬೆನ್ನೂರ, ಗುಡ್ಡಪ್ಪ ಗೊರವರ, ಪ್ರಕಾಶ ಸೊಪ್ಪಿನ, ಸಂಜಯ ಗಾಂಧಿ ಸಂಜೀವಣ್ಣನವರ, ಪ್ರಕಾಶ ಬಾರ್ಕಿ, ದಿನೇಶ ಜಾನ್ಮನೆ, ಶಿವಣ್ಣ ಬಂಡಿವಡ್ಡರ, ಪ್ರಶಾಂತ ಬೆನ್ನೂರ, ಡಾ| ಕಿರಣಕುಮಾರ ಬಡಪ್ಪನವರ, ಅರುಣ ಕೆಂಚಮಲ್ಲ, ಮೃತ್ಯುಂಜಯ ರಿತ್ತಿಮಠ, ಕುಮಾರ ಚಿಗರಿ, ಚನ್ನವೀರಯ್ಯ ಸುತ್ತೂರಮಠ, ನವೀನ ದಾಮೋದರ, ಪ್ರಕಾಶ ಹೊನ್ನಮ್ಮನವರ, ಗುರು ಮಠದ, ವಿನಯ ಕೂಡಲಮಠ, ಮಾಲತೇಶ ಮಡಿವಾಳರ, ಬಾಬಣ್ಣ ರಾಣಿಬೆನ್ನುರ, ಅಜಯ ಬುಶಪ್ಪನವರ, ಆನಂದ ಇಟಗಿ, ಗಂಗಾಧರ ಅಗಸಿಬಾಗಿಲ ಸೇರಿದಂತೆ‌ ಅನೇಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.