ಜಾನುವಾರುಗಳಿಗೆ ನೀರು-ಮೇವಿನ ವ್ಯವಸ್ಥೆ ಮಾಡಿ
Team Udayavani, May 11, 2019, 2:35 PM IST
ಹಾವೇರಿ: ನವಕರ್ನಾಟಕ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಸರ್ಕಾರ ಕೂಡಲೇ ದನಕರುಗಳಿಗೆ ನೀರು, ಮೇವಿನ ವ್ಯವಸ್ಥೆ ಮಾಡಬೇಕು ಎಂದು ನವಕರ್ನಾಟಕ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ ಆಗ್ರಹಿಸಿದರು.
ಶುಕ್ರವಾರ ನಗರದ ಹುಕ್ಕೇರಿ ಮಠದ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸರಿಯಾದ ಮಳೆ ಇಲ್ಲದೇ ರಾಜ್ಯದ ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಸರ್ಕಾರ ಕೂಡಲೇ ಕೆರೆ-ಕಟ್ಟೆ ತುಂಬಿಸುವ ಕೆಲಸ ಮಾಡಬೇಕು. ಬರಗಾಲದಿಂದ ತತ್ತರಿಸಿರುವ ರೈತರಿಗೆ ಸರ್ಕಾರ ಈ ಬಾರಿಗೆ ಮುಂಗಾರು ಹಂಗಾಮಿಗೆ ಉಚಿತ ಬೀಜ, ಗೊಬ್ಬರ ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಗತಿಪರ ಕೃಷಿಕರು, ತಜ್ಞರನ್ನೊಳಗೊಂಡ ಸಮಿತಿ ರಚಿಸಿ ಕೃಷಿ ಹಾಗೂ ಕೃಷಿಕನ ಅಭಿವೃದ್ಧಿಗೆ ಏನು ಮಾಡಬಹುದು ಎಂಬ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ವಯೋಮಿತಿ ಮೀರಿದ 30-40 ಲಕ್ಷ ವಿದ್ಯಾರ್ಥಿಗಳು ವಿವಿಧ ವಿದ್ಯಾರ್ಹತೆ ಹೊಂದಿಯೂ ಉದ್ಯೋಗ ವಂಚಿತರಾಗಿದ್ದು, ಅವರಿಗೆಲ್ಲ ಸರ್ಕಾರ ಕನಿಷ್ಠ 5 ಲಕ್ಷ ರೂ. ಪ್ರೋತ್ಸಾಹಧನ ನೀಡಿ ಸ್ವಉದ್ಯೋಗ ಸೃಷ್ಟಿಸಿಕೊಳ್ಳಲು ಸಹಾಯ ಮಾಡಬೇಕು. 60 ವರ್ಷ ದಾಟಿದ ರೈತರು ಹಾಗೂ ರೈತ ಮಹಿಳೆಯರಿಗೆ 5 ಸಾವಿರ ರೂ. ಮಾಸಾಶನ ನೀಡಬೇಕು ಎಂದು ಆಗ್ರಹಿಸಿದರು. ಸಂಘಟನೆ ಪದಾಧಿಕಾರಿಗಳಾದ ಪುಷ್ಪಾ ಯಾದವ್, ಮಲ್ಲಿಕಾರ್ಜುನ ತುಮಗೂರ, ಭಾರತಿ ಡವಳ, ಎಂ.ಬಿ. ಜಗದೀಶ್, ಎಚ್. ತಿಪ್ಪೇಸ್ವಾಮಿ, ಅಜಯಕುಮಾರ, ದೀಪಾ ಪಾಟೀಲ, ಹನುಮಂತರಾಯಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ