ಗುರಿ ಮೀರಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮಾಡಿದ್ದೇವೆ: ಸಿಎಂ ಬೊಮ್ಮಾಯಿ
Team Udayavani, Apr 10, 2022, 2:58 PM IST
ಹಾವೇರಿ: ರಾಜ್ಯದಲ್ಲಿ ಗುರಿಮೀರಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾವಿ ತಾಲೂಕಿನ ಬಂಕಾಪುರದ ಕೆಂಡದಮಠದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವೆಂಬರ್ ನಿಂದ ಆರ್ಥಿಕ ಸಂಪನ್ಮೂಲಗಳ ಕ್ರೋಢೀಕರಣ ಮಾಡಿದೆವು.15000 ಕೋಟಿ ರೂಪಾಯಿಗೂ ಹೆಚ್ಚು ಆರ್ಥಿಕ ಸಂಪನ್ಮೂಲಗಳ ಕ್ರೋಢೀಕರಣ ಮಾಡಿದ್ದೇವೆ ಎಂದರು.
ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕೋವಿಡ್ ನಿಂದ ರಾಜ್ಯ ಬಳಲಿತ್ತು. ಅಂದು ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಅತ್ಯಂತ ದಿಟ್ಟತನದಿಂದ ಕೋವಿಡ್ ಪರಿಸ್ಥಿತಿ ಎದುರಿಸಿದ್ದರು. ಆರ್ಥಿಕ ಪರಿಸ್ಥಿತಿ ಕಷ್ಟ ಇದ್ದರೂ ನಿಮ್ಮೆಲ್ಲರ ಆಶೀರ್ವಾದದಿಂದ ನಿಭಾಯಿಸಿದ್ದೇವೆ ಎಂದರು.
ಇದನ್ನೂ ಓದಿ:ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?: ಸಿದ್ದರಾಮಯ್ಯ
ಈ ಕೆಂಡದ ಮಠ ಜನಸಾಮಾನ್ಯರ ಮಠ. ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಯ ಸಾವಿರಾರು ಭಕ್ತರನ್ನು ಹೊಂದಿರುವ ಮಠ. ಕಷ್ಟಪಟ್ಟು ಬದುಕುತ್ತಿರುವವರಿಗೆ ಆಶೀರ್ವಾದ ಮಾಡುವ ಮಠ. ಹಲವಾರು ಕುಟುಂಬಗಳಿಗೆ ಈ ಮಠ ಆಶೀರ್ವಾದ ಮಾಡಿದೆ ಎಂದರು.
ಬಂಕಾಪುರಕ್ಕೆ ತನ್ನದೇ ಆದ ಇತಿಹಾಸವಿದೆ. ಇಲ್ಲೇ ಪಕ್ಕದಲ್ಲಿ ಕನಕದಾಸರು ಜನ್ಮವಿತ್ತ ಪುಣ್ಯ ಭೂಮಿಯಿದೆ. ಭಾವೈಕ್ಯತೆಯ ಸಂಕೇತ ಶರೀಫರು- ಗೋವಿಂದಭಟ್ಟರ ಕ್ಷೇತ್ರವಿದು. ಈ ಶಕ್ತಿ, ಪ್ರಭಾವ, ಆಶೀರ್ವಾದ ನನ್ನ ರಾಜಕೀಯ ಏಳಿಗೆಗೆ ಕಾರಣವಾಗಿದೆ. ಎಲ್ಲರ ಆಶೀರ್ವಾದದಿಂದ ನಾನು ಆಡಳಿತ ಮಾಡುತ್ತಿದ್ದೇನೆ ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ