ದೇಶದ ಒಳಿತಿಗೆ ಫಲಾಪೇಕ್ಷವಿಲ್ಲದೆ ಶ್ರಮಿಸಿ: ಉದಾಸಿ

ಪ್ರಯತ್ನದಿಂದ ಮಾತ್ರ ಫಲವೆನ್ನುವ ಸತ್ಯ ಅರಿತು ನಡೆಯಿರಿ

Team Udayavani, Aug 7, 2019, 5:21 PM IST

hv-tdy-5

ಹಾನಗಲ್ಲ: ಕಾಲೇಜು ಒಕ್ಕೂಟ ಕಾರ್ಯಕ್ರಮಗಳನ್ನು ಶಾಸಕ ಸಿ.ಎಂ.ಉದಾಸಿ ಉದ್ಘಾಟಿಸಿದರು.

ಹಾನಗಲ್ಲ: ಶೈಕ್ಷಣಿಕ, ಔದ್ಯೋಗಿಕ ಪೈಪೋಟಿಯಲ್ಲಿ ಜಗತ್ತು ಮುನ್ನಡೆಯುತ್ತಿರುವಾಗ ಪ್ರಯತ್ನದಿಂದ ಮಾತ್ರ ಫಲ ಎಂಬ ಸತ್ಯವನ್ನು ಅರಿತು ಕಷ್ಟ ಸಹಿಷ್ಣುಗಳಾಗಿ ವಿದ್ಯಾರ್ಥಿ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಶಾಸಕ ಸಿ.ಎಂ.ಉದಾಸಿ ಕರೆ ನೀಡಿದರು.

ಮಂಗಳವಾರ ಹಾನಗಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಕಾಲೇಜು ಒಕ್ಕೂಟ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿಧೀಜಿ ಅವರ ಕನಸು ನನಸಾಗಬೇಕು. ಇಡೀ ಜಗತ್ತಿನಲ್ಲಿ ಮೆಚ್ಚುಗೆಗೆ ಪಾತ್ರವಾಗುತ್ತಿರುವ ಭಾರತದ ಹಿರಿಮೆಗೆ ಎಲ್ಲರೂ ತಮ್ಮ ಶಕ್ತಿ ವಿನಿಯೋಗಿಸುವಂತಾಗಬೇಕು. ದೇಶ ಮೊದಲು ಎಂಬ ಭಾವ ಎಲ್ಲರದಾಗಲಿ. ಜಮ್ಮು ಕಾಶ್ಮೀರದ ವಿಷಯದಲ್ಲಿ ಭಾರತ ಸರಕಾರ ಕೈಗೊಂಡ ಕ್ರಮ ಇಡೀ ದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಭಾರತದ ಕನಸು ನನಸಾಗಿಸುವಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ದೇಶದ ಒಳಿತಿಗೆ ಫಲಾಪೇಕ್ಷೆಯ ಲೆಕ್ಕಾಚಾರವಿಲ್ಲದೆ ಮುಂದಾಗಬೇಕಾಗಿದೆ. ಬದ್ಧತೆಯ ಬದುಕಿನಿಂದ ಎಲ್ಲವನ್ನೂ ಗೆಲ್ಲಲು ಸಾಧ್ಯ ಎಂದರು.

ಶ್ರೀ ಕುಮಾರೇಶ್ವರ ಕಲಾ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ| ಸಿ.ಮಂಜುನಾಥ ಕಾಲೇಜು ಒಕ್ಕೂಟದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಶಿಕ್ಷಣ ಮನುಷ್ಯನನ್ನು ಸುಸಂಸ್ಕೃತನನ್ನಾಗಿಸುತ್ತದೆ. ಮನುಷ್ಯನಿಗೆ ಮೊದಲು ತನ್ನ ಶಕ್ತಿಯ ಅರಿವು ಆಗಬೇಕು. ಜೀವನ ಕೌಶಲ್ಯವೂ ಬೇಕು. ಸಕಾರಾತ್ಮಕ ಚಿಂತನೆ ಮೊದಲನೆಯದಾಗಬೇಕು. ಧನಾತ್ಮಕ ಆಲೋಚನೆಗಳು ಕಳೆಗಟ್ಟಬೇಕು. ವಿದ್ಯಾರ್ಥಿ ಜೀವನವೆಂದರೆ ಕಳೆದು ಹೋಗುವುದಲ್ಲ. ಬದುಕನ್ನು ಕಟ್ಟಿಕೊಳ್ಳುವುದು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ಸಿ.ಪೀರಜಾದೆ ಅಧ್ಯಕ್ಷತೆ ವಹಿಸಿ ಮಾತನಾಡಿ, 3ಜಿ-4ಜಿ ಗಳ ಒತ್ತಡದ ಜೀವನದಲ್ಲಿರುವ ವಿದ್ಯಾರ್ಥಿಗಳಿಗೆ ಗುರೂಜಿ ಎಂಬ ಪದದ ಹಾಗೂ ವಾಸ್ತವದ ಅರಿವು ದೂರವಾಗುತ್ತಿರುವುದುದೇ ದುರಂತವಾಗಿದೆ. ಲೇಝಿ ನಮ್ಮ ವಿದ್ಯಾರ್ಥಿಗಳಿಂದ ದೂರವಾಗಿ ಬ್ಯೂಜಿಯಾಗಿ ಓದುವುದೇ ನಮ್ಮ ವಿದ್ಯಾರ್ಥಿಗಳ ಆದ್ಯತೆಯಾಗಬೇಕು. ಕಾಲ ಹರಣ ಮಾಡಿಕೊಂಡು ಪರೀಕ್ಷಾ ಭಯಕ್ಕೆ ತುತ್ತಾಗಿ ಫಲಿತಾಂಶದ ಅಪ ಯಶಸ್ಸಿಗೆ ಆತ್ಮಹತ್ಯೆಯಂತಹ ದುರ್ಮರಣದ ಅಗತ್ಯವಿಲ್ಲ. ಕಾಲೇಜು ಜೀವನವನ್ನು ಸಾಕಾರಗೊಳಿಸಿಕೊಳ್ಳಿ. ಎಂಥ ಸಂದರ್ಭದಲ್ಲಿಯೂ ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ ಎಂದು ಎಚ್ಚರಿಸಿದರು.

ಪ್ರಾಚಾರ್ಯ ಪ್ರೊ| ಮಾರುತಿ ಶಿಡ್ಲಾಪೂರ ಆಶಯ ನುಡಿ ನುಡಿದರು. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಪ್ರೊ| ಎಸ್‌.ಎಸ್‌.ನಿಸ್ಸೀಗೌಡರ, ಕಾರ್ಯದರ್ಶಿ ಪ್ರಕಾಶ ಬಾರ್ಕಿ ಅತಿಥಿಗಳಾಗಿದ್ದರು. ಎನ್‌ಎಸ್‌ಎಸ್‌ ಅಧಿಕಾರಿ ಪ್ರೊ| ಎಚ್.ಎಸ್‌.ಬಾರ್ಕಿ ಕಾರ್ಯಕ್ರಮ ನಿರೂಪಿಸಿದರು. ಪ್ರೊ| ವೀಣಾ ದೇವರಗುಡಿ ವಂದಿಸಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.