ಸೌಭಾಗ್ಯ ಅನರ್ಹರ ಪಾಲು-ಪ್ರತಿಭಟನೆ
Team Udayavani, Aug 27, 2019, 1:10 PM IST
ಶಿಗ್ಗಾವಿ: ಕಾರ್ಮಿಕರ ವಿಕಾಸ ವೇದಿಕೆ ಕಾರ್ಯಕರ್ತರು ಹೆಸ್ಕಾಂ ಕಚೇರಿ ಎದುರು ಪ್ರತಿಭಟಿಸಿದರು.
ಶಿಗ್ಗಾವಿ: ಸೌಭಾಗ್ಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಬದಲಾಗಿ ನಕಲಿ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಕಾರ್ಮಿಕರ ವಿಕಾಸ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯಾಧ್ಯಕ್ಷ ಅಬ್ದುಲ್ ಕರಿಂ ಮೊಗಲಲ್ಲಿಯವರ ನೇತೃತ್ವದಲ್ಲಿ ಶಿಗ್ಗಾವಿ ಮತ್ತು ಬಂಕಾಪೂರ ಪದಾಧಿಕಾರಿಗಳು ಹೆಸ್ಕಾಂ ಕಚೇರಿ ಎದುರು ಪ್ರತಿಭಟಿಸಿ ಎಇಇ ಜಿ. ರಮೇಶ ಅವರಿಗೆ ಮನವಿ ಸಲ್ಲಿಸಿದರು.
ಪುರಸಭೆ ಸದಸ್ಯ ಸುಭಾಷ ಚೌಹಾಣ್ ಮಾತನಾಡಿ, ನನ್ನ ಗಮನಕ್ಕೂ ತರದೇ ಮೀಟರ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಯೋಜನೆ ನಿಜವಾದ ಫಲಾನುಭವಿಗಳಿಗೆ ತಲುಪುವ ಬದಲಾಗಿ ಎಜೆಂಟರ್ ಹಾವಳಿಯಿಂದಾಗಿ ನಕಲಿ ಫಲಾನುಭವಿಗಳ ಪಾಲಾಗುತ್ತಿದೆ ಎಂದು ಆರೋಪಿಸಿದರು.
ಅಬ್ದುಲ್ ಕರೀಂ ಮೊಗಲಲ್ಲಿಯವರ ಮಾತನಾಡಿ, ಕೊಳಚೆ ನಿವಾಸಿಗಳಿಗಾಗಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇದಾಗಿದೆ. ಆದರೆ, ಫಲಾನುಭವಿಗಳ ಆಯ್ಕೆ ಮಾತ್ರ ಪಾರದರ್ಶಕವಾಗಿಲ್ಲ. ನೈಜ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು. ಜಿಲಾನಿ ಜಂಗ್ಲಿ, ಇಮಾಮ್ಹುಸೇನ್ ಅದಂಬಾಯಿ, ವೆಂಕಟೇಶ ಬಂಡಿವಡ್ಡರ, ರಮೇಶ ವನಹಳ್ಳಿ, ಶಿವಾನಂದ ದೇವಗೇರಿ, ನಾಜಿಲ್ ಸವಣೂರ, ಮಹಮ್ಮಶಫಿ ಸವಣೂರ, ವೆಂಕಟೇಶ ಭಜಂತ್ರಿ, ಲಕ್ಷ ್ಮಣ ವಡ್ಡರ, ಮಂಜುನಾಥ ಮದುರಕರ, ಮುಕ್ತಾರಬಾನು ತಿಮ್ಮಾಪೂರ ಹನಮಂತ ಶಿವಳ್ಳಿ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್