ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ


Team Udayavani, May 13, 2024, 4:51 PM IST

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಉದಯವಾಣಿ ಸಮಾಚಾರ
ಹಾವೇರಿ: ಕಳೆದ ಎರಡು ತಿಂಗಳಿಂದ ಬಿಸಿಲಿನ ತೀವ್ರತೆ, ಮಳೆ ಕೊರತೆಯಿಂದ ತರಕಾರಿ ನಿರೀಕ್ಷಿತ ಮಟ್ಟದಲ್ಲಿ ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ. ಹೀಗಾಗಿ ತರಕಾರಿ ದರ ಏರಿಕೆ ಕಂಡಿದ್ದು, ಗ್ರಾಹಕರ ಜೇಬಿಗೆ ಬಿಸಿ ತಟ್ಟುವಂತಾಗಿದೆ. ಸ್ಥಳೀಯ ಬಸವೇಶ್ವರ ನಗರದಲ್ಲಿ ರವಿವಾರ ನಡೆದ ತರಕಾರಿ ಸಂತೆಯಲ್ಲಿ ದರ ಏರಿಕೆ ಬಿಸಿ ಜನಸಾಮಾನ್ಯರಿಗೆ ಶಾಕ್‌ ನೀಡಿತು. ತರಕಾರಿ ದರ ಗಗನಕ್ಕೇರಿದ್ದರಿಂದ ಜನರು ಚೌಕಾಸಿ ಮಾಡಿ ತರಕಾರಿ ಖರೀದಿಸುತ್ತಿದ್ದ ದೃಶ್ಯ ಕಂಡು ಬಂತು.

ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದ ಕಾರಣ ಬಿಸಿಲಿನ ತಾಪ ಜಾಸ್ತಿಯಾಗಿ ತರಕಾರಿ, ಸೊಪ್ಪುಗಳು ಬಾಡಿ ಹೋಗುತ್ತಿವೆ. ಅಂತರ್ಜಲ ಕುಸಿತಗೊಂಡಿದ್ದು, ಸಮರ್ಪಕ ನೀರು ಸಿಗದೇ ರೈತರು ತರಕಾರಿ ಬೆಳೆಯಲು ಮುಂದಾಗುತ್ತಿಲ್ಲ. ಹೀಗಾಗಿ ಮಾರುಕಟ್ಟೆಗೆ ತರಕಾರಿ ಬರುತ್ತಿಲ್ಲ. ಸೋತೆಕಾಯಿ, ಬೀನ್ಸ್‌, ಟೊಮೆಟೊ, ಹಿರೇಕಾಯಿ, ಮೆಣಸಿನಕಾಯಿ, ಮೆಂತ್ಯ, ಕೊತ್ತಂಬರಿ, ಸಬ್ಬಸಗಿ ಸೊಪ್ಪು ಪೂರೈಕೆ ತೀವ್ರ ಕುಸಿದಿದೆ. ಗುಣಮಟ್ಟವಿಲ್ಲದ ಉತ್ಪನ್ನಗಳಿಗೂ ದುಬಾರಿ ಬೆಲೆ ಇದೆ. ಮಾರುಕಟ್ಟೆಗೆ ಪೂರೈಕೆ ಕಡಿಮೆಯಾದ ಕಾರಣ ಸಹಜವಾಗಿ ದರ ಏರಿಕೆಯಾಗಿದೆ.

ತರಕಾರಿ ದರದಲ್ಲಿ ಏರಿಕೆ: ಜಿಲ್ಲಾದ್ಯಂತ ಬರದ ಛಾಯೆ ಆವರಿಸಿದ್ದು, ಬಿಸಿಲಿನ ತೀವ್ರತೆಯಿಂದ ಇಳುವರಿ ಕುಂಠಿತಗೊಂಡು ಬಹುತೇಕ ತರಕಾರಿ ದರಗಳಲ್ಲಿ ಏರಿಕೆ ಕಂಡಿದ್ದು, ಗ್ರಾಹಕರ ಕೈ ಸುಡುತ್ತಿವೆ. ಕೆಜಿಗೆ 15-20ರೂ. ಇದ್ದ ಟೊಮೆಟೊ 40-50ರೂ.ಗೆ ಏರಿಕೆಯಾಗಿದೆ. ಕೆಜಿಗೆ 60-80ರೂ.ಇದ್ದ ಬೀನ್ಸ್‌ 180ರೂ.ಗೆ ಏರಿಕೆಯಾಗಿದೆ.

ಬದನೆಕಾಯಿ ಕೆಜಿಗೆ 70-80 ರೂ., ಬೀಟ್‌ರೂಟ್‌ 50-60ರೂ., ಹೀರೇಕಾಯಿ 60-80ರೂ., ಚವಳಿಕಾಯಿ 40-50ರೂ., ಮೆಣಸಿನಕಾಯಿ 100-120ರೂ.ಗಳಿಗೆ ಹೆಚ್ಚಳಗೊಂಡಿದೆ. ಈರುಳ್ಳಿ ಕೆಜಿಗೆ 30-35ರೂ., ಬೆಳ್ಳುಳ್ಳಿ ಬರೊಬ್ಬರಿ 230-250ರೂ.ಗೆ ಏರಿಕೆಯಾಗಿದೆ. ಕೊತ್ತಂಬರಿ, ಮೆಂತ್ಯ, ಪಾಲಕ್‌, ರಾಜಗಿರಿ, ಸಬ್ಬಸಿಗೆ ಸೊಪ್ಪು ಒಂದು ಕಂತೆ 10-15ರೂ. ಮಾರಾಟ ಮಾಡಲಾಗುತ್ತಿದ್ದು, ದರ ಏರಿಕೆ ಜನಸಾಮಾನ್ಯರಿಗೆ ಬಿಸಿ ತಟ್ಟುವಂತೆ ಮಾಡಿದೆ.

ತರಕಾರಿ ಪೂರೈಕೆಯಲ್ಲಿ ಇಳಿಕೆ: ಹಾವೇರಿ ಎಪಿಎಂಸಿಗೆ ಬೆಳಗಾವಿ, ಹುಬ್ಬಳ್ಳಿ ಕಡೆಯಿಂದ ಹೆಚ್ಚಿನ ತರಕಾರಿ ಪೂರೈಕೆಯಾಗುತ್ತದೆ. ಆದರೆ ಈ ಬಾರಿ ಮಳೆ ಕೈಕೊಟ್ಟು ಬರ ಆವರಿಸಿದ್ದರಿಂದ ತರಕಾರಿ ಬೆಳೆಗಳು ಒಣಗಿ ಹೋಗುತ್ತಿವೆ. ಹೀಗಾಗಿ ಸ್ಥಳೀಯ ರೈತರಿಂದ ಮಾರುಕಟ್ಟೆಗೆ ಸಮರ್ಪಕವಾಗಿ ತರಕಾರಿ ಪೂರೈಕೆಯಾಗುತ್ತಿಲ್ಲ. ಆಂಧ್ರ, ತಮಿಳುನಾಡು, ಬೆಳಗಾವಿ ಕಡೆಯಿಂದ ಮೆಣಸಿನಕಾಯಿ, ಕೋಲಾರದಿಂದ ಟೊಮೆಟೊ, ಹುಬ್ಬಳ್ಳಿಯಿಂದ ಈರುಳ್ಳಿ, ಬೆಳ್ಳುಳ್ಳಿ ಆವಕ ಮಾಡಿಕೊಳ್ಳಲಾಗುತ್ತಿದೆ ಎಂದು ತರಕಾರಿ ವ್ಯಾಪಾರಸ್ಥರು ಹೇಳುತ್ತಾರೆ.

ಮಳೆ ಕೊರತೆ ಹಾಗೂ ಬಿಸಿಲಿನ ತೀವ್ರತೆಯಿಂದ ತರಕಾರಿ ಬೆಳೆ ಹಾಳಾಗುತ್ತಿದ್ದು, ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಸಹಜವಾಗಿ ತರಕಾರಿಗಳ ಬೆಲೆ ಏರಿಕೆ ಕಂಡಿದೆ. ಆಂಧ್ರ, ತಮಿಳುನಾಡು, ಬೆಳಗಾವಿ ಕಡೆಯಿಂದ
ಮೆಣಸಿನಕಾಯಿ, ಕೋಲಾರದಿಂದ ಟೊಮೆಟೊ, ಹುಬ್ಬಳ್ಳಿಯಿಂದ ಈರುಳ್ಳಿ, ಬೆಳ್ಳುಳ್ಳಿ ಆವಕ ಮಾಡಿಕೊಳ್ಳಲಾಗುತ್ತಿದೆ. ಗ್ರಾಹಕರು ತಮಗೆ ಎಷ್ಟು ಬೇಕೋ ಅಷ್ಟು ಖರೀದಿಸುತ್ತಿದ್ದಾರೆ.

*ಪ್ರಶಾಂತ ನಿಂಗಪ್ಪಗೌಡ್ರ, ತರಕಾರಿ ವ್ಯಾಪಾರಸ್ಥರು

ಬೀನ್ಸ್‌, ಮೆಣಸಿನಕಾಯಿ ಬೆಲೆ ಏರಿಕೆ..
ಈ ಹಿಂದೆ ಬೀನ್ಸ್‌ ಕೆಜಿಗೆ 40-50ರೂ.ಗೆ ದೊರೆಯುತ್ತಿತ್ತು ಈಗ ಬಲು ದುಬಾರಿ ಪ್ರತಿ ಕೆಜಿಗೆ 180-200ರೂ.ಗೆ ಮಾರಾಟ ಮಾಡಲಾಗುತ್ತಿದೆ. ಜತೆಗೆ 40ರೂ. ಇದ್ದ ಹಸಿಮೆಣಸಿನಕಾಯಿ ಬೆಲೆ ಕೂಡ ಕೆಜಿಗೆ 100-120ರೂ. ಏರಿಕೆಯಾಗಿದೆ. ಗ್ರಾಹಕರ ಜೇಬಿಗೆ ಬಿಸಿ ಮುಟ್ಟಿಸುತ್ತಿದೆ.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.