ಚುನಾವಣೆವರೆಗೂ ಮೈತ್ರಿ ಸರ್ಕಾರ ಇರೋದು ಡೌಟ್: ಯಡಿಯೂರಪ್ಪ
Team Udayavani, Feb 26, 2019, 12:30 AM IST
ಹಾವೇರಿ: ಕಾಂಗ್ರೆಸ್-ಜೆಡಿಎಸ್ ಒಡೆದ ಮನೆಯಾಗಿದೆ. ಮೈತ್ರಿ ಸರ್ಕಾರ ಲೋಕಸಭೆ ಚುನಾವಣೆವರೆಗಾದರೂ ಇರುತ್ತದೆಯೋ ಇಲ್ಲವೋ ಎಂಬ ಅನುಮಾನವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶಂಕೆ ವ್ಯಕ್ತಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಪ್ಪತ್ತಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಎಂದು ಒಪ್ಪುತ್ತಿಲ್ಲ. ಸಿದ್ದರಾಮಯ್ಯನವರೇ ತಮ್ಮ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಡಿಸಿಎಂ ಪರಮೇಶ್ವರ್ ತಮಗೆ ಮೂರು ಬಾರಿ ಸಿಎಂ ಸ್ಥಾನ ತಪ್ಪಿಸಲಾಗಿದೆ ಎನ್ನುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನದ ಭುಗಿಲೆದ್ದಿದೆ. ನಾಯಕರ ನಡುವೆಯೇ ಕಚ್ಚಾಟ ಪ್ರಾರಂಭವಾಗಿದೆ. ಮುಂದೆ ಏನಾಗಬಹುದು ಎಂಬುದನ್ನು ನೀವೇ ಕಾದು ನೋಡಿ ಎಂದರು.
ಚುನಾವಣಾ ಪ್ರಚಾರಕ್ಕೆ ಹಾವೇರಿಗೆ ರಾಹುಲ್ ಗಾಂಧಿ ಬರಲಿ ಅಥವಾ ಸೋನಿಯಾ ಗಾಂಧಿ ಬರಲಿ ಇಲ್ಲವೇ ಅಳಿದುಳಿದ ಕಾಂಗ್ರೆಸ್ ನಾಯಕರು ಯಾರು ಬಂದರೂ ಯಾವುದೇ ಪ್ರಯೋಜನವಾಗಲ್ಲ. ಯಾರೇ ಬಂದರೂ ಶಿವಕುಮಾರ ಉದಾಸಿ ಅವರನ್ನು ಸೋಲಿಸಲು ಆಗಲ್ಲ. ಕನಿಷ್ಠ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ರಾಜ್ಯದಲ್ಲಿ ಬಿಜೆಪಿ 22 ಸ್ಥಾನ ಗೆಲ್ಲುವುದು ನಿಶ್ಚಿತ ಎಂದರು.
ಇನ್ನು ಮೈಲಾರ ಲಿಂಗೇಶ್ವರದ ಕಾರ್ಣಿಕ “ಕಬ್ಬಿಣದ ಸರಪಳಿ ಹರದಿತಲೇ ಪರಾಕ್’ ನುಡಿ ಗೊರವಜ್ಜನವರ ಬಾಯಲ್ಲಿ ಬಂದಿರುವುದು ನಿಜವಾಗಲಿ, ಸಮ್ಮಿಶ್ರ ಸರ್ಕಾರ ಸರಿದು ಹೋಗಿ, ಜನರಿಗೆ ಒಳ್ಳೆಯದಾಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ