ಕೋವಿಡ್ 19 ಸೋಂಕು ದೃಢ, ಯುವಕ ಪರಾರಿ ; ಹಾವೇರಿಯಲ್ಲೊಂದು ವಿಲಕ್ಷಣ ಘಟನೆ!

ಜಿಲ್ಲೆಯಲ್ಲಿ ರವಿವಾರ 15 ಹೊಸ ಪಾಸಿಟಿವ್ ಪ್ರಕರಣ ಪತ್ತೆ

Team Udayavani, Jul 5, 2020, 9:30 PM IST

ಕೋವಿಡ್ 19 ಸೋಂಕು ದೃಢ, ಯುವಕ ಪರಾರಿ ; ಹಾವೇರಿಯಲ್ಲೊಂದು ವಿಲಕ್ಷಣ ಘಟನೆ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹಾವೇರಿ: ಕೋವಿಡ್ 19 ಸೋಂಕಿನ ಲಕ್ಷಣವೇ ಅದು ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದು.

ಅದಕ್ಕೆಂದೇ ಪಾಸಿಟಿವ್ ದೃಢಪಟ್ಟ ವ್ಯಕ್ತಿಗಳನ್ನು ಐಸೊಲೇಷನ್ ವಾರ್ಡ್ ಗಳಲ್ಲಿ ಸಂಪೂರ್ಣ ಸುರಕ್ಷತೆಯೊಂದಿಗೆ ಚಿಕಿತ್ಸೆ ಮಾಡಲಾಗುತ್ತದೆ.

ಆದರೆ ಇಲ್ಲೊಬ್ಬ ಯುವಕ ತನ್ನ ಗಂಟಲ ದ್ರವ ಪರೀಕ್ಷೆಯ ವರದಿ ಪಾಸಿಟಿವ್ ಬರುತ್ತಿದ್ದಂತೆ ಪರಾರಿಯಾಗಿದ್ದು ಈ ಮೂಲಕ ಜಿಲ್ಲಾಡಳಿತಕ್ಕೆ ಮಾತ್ರವಲ್ಲದೇ ಸ್ಥಳೀಯರಿಗೆ ತಲೆನೋವಾಗಿ ಪರಿಣಮಿಸಿದ್ದಾನೆ.

ತನಗೆ ಕೋವಿಡ್ 19 ಸೋಂಕು ಇದೆ ಎಂಬುದು ಪ್ರಯೋಗಾಲಯ ವರದಿಯಲ್ಲಿ ದೃಢಪಡುತ್ತಿದ್ದಂತೆ ಆ ಯುವಕ ಹೇಳದೆ ಕೇಳದೆ ಪರಾರಿಯಾಗಿರುವ ಘಟನೆ ರಟ್ಟಿಹಳ್ಳಿ ತಾಲೂಕಿನ ಪರ್ವತಸಿದ್ಧಗಿರಿಯಲ್ಲಿ ನಡೆದಿದೆ.

ಇದನ್ನೂ ಓದಿ: ಸೋಂಕಿಗಿಲ್ಲ ಲಾಕ್ ಡೌನ್ ; ಒಂದೇ ದಿನ 1925 ಕೋವಿಡ್ 19 ಪ್ರಕರಣ ; 38 ಸಾವು!

ಈ ನಡುವೆ ತನಗೆ ಜ್ವರದ ಲಕ್ಷಣಗಳು ಕಂಡುಬರುತ್ತಿದ್ದಂತೆ ಸ್ವತಃ ಹೋಗಿ ಸ್ವ್ಯಾಬ್ ಟೆಸ್ಟ್ ಗೆ ಒಳಗಾಗಿದ್ದ. ಆದರೆ ಇಷ್ಟೆಲ್ಲಾ ಮಾಡಿದಾತ ಇದೀಗ ಪರೀಕ್ಷಾ ವರದಿ ಪಾಸಿಟಿವ್ ಬರುತ್ತಿದ್ದಂತೆ ಗಾಯಬ್ ಆಗುವ ಮೂಲಕ ಎಲ್ಲರಲ್ಲೂ ಆತಂಕ ಮೂಡಿಸಿದ್ದಾನೆ.

ರವಿವಾರ ಸೋಂಕು ದೃಢಪಡುತ್ತಿದ್ದಂತೆ ಆತನನ್ನು ಕರೆತರಲು ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಗ್ರಾಮಕ್ಕೆ ಹೋದಾಗ ಯುವಕ ಪರಾರಿಯಾಗಿರುವುದು ಗೊತ್ತಾಗಿದೆ. ಇದೀಗ ಪರಾರಿಯಾಗಿರುವ ಈ ಸೋಂಕಿತನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಜಿಲ್ಲೆಯಲ್ಲಿ ರವಿವಾರ 15 ಹೊಸ ಪಾಸಿಟಿವ್ ಪ್ರಕರಣ ಪತ್ತೆ

ಈ ನಡುವೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಆರ್ಭಟ ಮುಂದುವರೆದಿದ್ದು ಜಿಲ್ಲೆಯಲ್ಲಿ ರವಿವಾರ ಮತ್ತೆ 15 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇವರಲ್ಲಿ ಓರ್ವ ಖಾಸಗಿ ವೈದ್ಯ, ಓರ್ವ ಶಿಕ್ಷಕ, ಓರ್ವ ನ್ಯಾಯವಾದಿ, ಓರ್ವ ಬಾಣಂತಿ, ಓರ್ವ ಪೊಲೀಸ್ ಹಾಗೂ ಮೂವರು ಆಶಾ ಕಾರ್ಯಕರ್ತೆಯರು ಸೇರಿದ್ದಾರೆ.

ಹಾವೇರಿ ಹಾಗೂ ಹಾನಗಲ್ಲ ತಾಲೂಕಿನಲ್ಲಿ ತಲಾ ಐದು, ಶಿಗ್ಗಾವಿ ತಾಲೂಕಿನಲ್ಲಿ ಮೂರು ಹಾಗೂ ಹಿರೇಕೆರೂರು ತಾಲೂಕಿನಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿವೆ.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.