ಜಿಮ್‌ನತ್ತ ಮುಖ ಮಾಡಿದ ಯುವಕರು

ಪುನಾರಂಭಗೊಂಡ ಜಿಮ್‌ಗಳಲ್ಲಿ ದೈಹಿಕ ಕಸರತ್ತು

Team Udayavani, Aug 26, 2020, 4:19 PM IST

ಜಿಮ್‌ನತ್ತ ಮುಖ ಮಾಡಿದ ಯುವಕರು

ಸಾಂದರ್ಭಿಕ ಚಿತ್ರ

ಹಾವೇರಿ: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ತಿಂಗಳಿನಿಂದ ಜಿಮ್‌ ಬಂದ್‌ ಮಾಡಲಾಗಿತ್ತು. ಸರ್ಕಾರ ಆ.5 ರಿಂದ ಜಿಮ್‌ಗಳನ್ನು ತೆರೆಯಲು ಅನುಮತಿ ನೀಡಿದ್ದರಿಂದ ಮತ್ತೆ ಯುವಕರು ಜಿಮ್‌ ಗಳ ಮೊರೆ ಹೋಗುತ್ತಿದ್ದು, ಜಿಮ್‌ಗಳಲ್ಲಿ ದೈಹಿಕ ಕಸರತ್ತು ನಡೆಸುವ ಯುವಕರ ಸಂಖ್ಯೆ ಹೆಚ್ಚುತ್ತಿದೆ.

ಕೋವಿಡ್ ಆತಂಕದಿಂದ ಲಾಕ್‌ಡೌನ್‌ ಘೋಷಿಸಿದ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿನ ಮಲ್ಟಿ ಜಿಮ್‌ಗಳನ್ನು ಬಂದ್‌ ಮಾಡಲಾಗಿತ್ತು. ಲಾಕ್‌ಡೌನ್‌ ಸಡಿಲಗೊಳಿಸಿದ ನಂತರವೂ ಜಿಮ್‌ ತೆರೆಯಲು ಸರ್ಕಾರ ಅನುಮತಿ ನೀಡಿರಲಿಲ್ಲ. ಆದರೆ ಆ.5 ರಿಂದ ಜಿಮ್‌ ತೆರೆಯಲು ಅನುಮತಿ ದೊರಕಿದ್ದರಿಂದ ಜಿಲ್ಲೆಯಲ್ಲಿನ ಜಿಮ್‌ ಗಳನ್ನು ತೆರೆಯಲಾಗಿದೆ. ಆದರೆ ಕೊರೊನಾ ಆತಂಕದ ಮಧ್ಯೆಯೂ ಜಿಮ್‌ ತೆರೆದಿದ್ದರಿಂದ ಆರಂಭದ ದಿನಗಳಲ್ಲಿ ಯುವಕರು ಅಷ್ಟಾಗಿ ಆಸಕ್ತಿ ತೋರಿರಲಿಲ್ಲ. ಆದರೆ, ದಿನಕಳೆದಂತೆ ಜಿಮ್‌ಗೆ ಆಗಮಿಸುವವರ ಸಂಖ್ಯೆ ಕ್ರಮೇಣವಾಗಿ ಹೆಚ್ಚುತ್ತಿರುವುದು ಕಂಡು ಬರುತ್ತಿದೆ.

ಜಿಲ್ಲೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಜಿಮ್‌ ಗಳಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಸುರಕ್ಷತಾ ಕ್ರಮ ಕೈಗೊಂಡು ಜಿಮ್‌ಗಳನ್ನು ತೆರೆಯಲಾಗಿದೆ. ಕಡ್ಡಾಯವಾಗಿ ನಿತ್ಯ ಸ್ಯಾನಿಟೈಸ್‌ ಮಾಡುವುದು, ಜಿಮ್‌ಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಬಹುತೇಕ ಜಿಮ್‌ಗಳಲ್ಲಿ ಅನುಸರಿಸಲಾಗುತ್ತಿದೆ. ಹೀಗಾಗಿ, ಯುವಕರಲ್ಲಿ ಆರೋಗ್ಯ ಸುರಕ್ಷತೆ ಬಗ್ಗೆ ವಿಶ್ವಾಸ ಮೂಡಿದ್ದು, ಜಿಮ್‌ ಗೆ ತೆರಳುವ ಯುವಕರ ಸಂಖ್ಯೆ ಮೊದಲಿನಂತೆ ಕಂಡು ಬರುತ್ತಿದೆ. ಕೆಲವು ತಿಂಗಳಿನಿಂದ ಜಿಮ್‌ ಮುಚ್ಚಿದ್ದರಿಂದ ದೈಹಿಕ ಕಸರತ್ತು ನಡೆಸಲು ಯುವಕರು ತೀವ್ರ ಸಮಸ್ಯೆ ಎದುರಿಸುವಂತಾಗಿತ್ತು. ಹೀಗಾಗಿ, ಅನೇಕ ಯುವಕರು ತಮ್ಮ ಮನೆಗಳಲ್ಲಿಯೇ ತಕ್ಕಮಟ್ಟಿಗೆ ದೈಹಿಕ ಕಸರತ್ತು ನಡೆಸಿ ಆರೋಗ್ಯ ಕಾಪಾಡಿಕೊಳ್ಳುತ್ತಿದ್ದರು. ಆದರೆ ಜಿಮ್‌ಗಳಲ್ಲಿ ಸಿಗುತ್ತಿದ್ದ ದೈಹಿಕ ವ್ಯಾಯಾಮ ಮನೆಗಳಲ್ಲಿ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ, ಹೆಚ್ಚಾಗಿ ಯುವಕರು ಮತ್ತೆ ಜಿಮ್‌ ಗಳತ್ತ ಮುಖ ಮಾಡುತ್ತಿದ್ದು, ನಿತ್ಯ ವಿವಿಧ ರೀತಿಯ ದೈಹಿಕ ಕಸರತ್ತು ನಡೆಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗುತ್ತಿದ್ದಾರೆ.

ನಗರದಲ್ಲಿರುವ ಜಿಮ್‌ಗಳಲ್ಲಿ ನಿತ್ಯ ನೂರಾರು ಯುವಕರು ದೈಹಿಕ ಕಸರತ್ತು ಆರಂಭಿಸಿದ್ದು, ದಿನದಿಂದ ದಿನಕ್ಕೆ ಜಿಮ್‌ಗಳಿಗೆ ಬರುವವರ ಸಂಖ್ಯೆ ಕ್ರಮೇಣವಾಗಿ ಹೆಚ್ಚುತ್ತಿದೆ. ಕೆಲವು ಜಿಮ್‌ಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ 8-10 ಜನರ ಬ್ಯಾಚ್‌ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಂಡು ತರಬೇತಿ ನೀಡಲಾಗುತ್ತಿದೆ. ಜಿಮ್‌ಗೆ ಬರುವವರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಜಿಮ್‌ ಗಳಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ಯುವಕರಿಗೆ ದೈಹಿಕ ಕಸರತ್ತು ನಡೆಸಲು ಅವಕಾಶ ಮಾಡಿಕೊಡಲಾಗಿದೆ.

ಅಲ್ಲದೇ, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ 8-10 ಯುವಕರ ಬ್ಯಾಚ್‌ ಮಾಡಿ ತರಬೇತಿ ನೀಡಲಾಗುತ್ತಿದೆ. ಜಿಮ್‌ ತೆರೆದ ಆರಂಭದ ದಿನಗಳಲ್ಲಿ ಯುವಕರು ಅಷ್ಟಾಗಿ ಆಸಕ್ತಿ ತೋರಿರಲಿಲ್ಲ. ಆದರೆ ದಿನಗಳೆದಂತೆ ಜಿಮ್‌ಗೆ ಬರುವವರ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದೆ ಎಂದು ನಗರದ ರಾಕ್‌ ಮಲ್ಟಿಜಿಮ್‌ ಮಾಲೀಕ ರಾಕೇಶ ಎಸ್‌. ಹೇಳುತ್ತಾರೆ.

ಹಾವೇರಿ ನಗರದಲ್ಲಿ ಸುಮಾರು 6 ಜಿಮ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಜಿಮ್‌ಗಳಿವೆ. ಕೋವಿಡ್ ಆತಂಕದ ಧ್ಯೆಯೂ ಮನೆಯಲ್ಲಿಯೇ ಯೋಗ, ದೈಹಿಕ ಕಸರತ್ತು ನಡೆಸುತ್ತಿದ್ದ ಯುವಕರು ಮತ್ತೆ ಜಿಮ್‌ಗಳತ್ತ ಮುಖ ಮಾಡುತ್ತಿದ್ದಾರೆ.

ಸರ್ಕಾರದ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಿ ಜಿಮ್‌ ತೆರೆಯಲಾಗಿದೆ. ಯುವಕರ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ. ಜಿಮ್‌ ತೆರದ ಆರಂಭದಲ್ಲಿ ಯುವಕರ ಸಂಖ್ಯೆ ಕಡಿಮೆ ಇತ್ತು. ಆದರೆ ಈಗ ಯುವಕರ ಸಂಖ್ಯೆ ಹೆಚ್ಚುತ್ತಿದೆ. – ರಾಕೇಶ ಎಸ್‌., ರಾಕ್‌ ಜಿಮ್‌ ತರಬೇತುದಾರ

ಕೋವಿಡ್ ಲಾಕ್‌ಡೌನ್‌ ದಿನಗಳಲ್ಲಿ ಜಿಮ್‌ ಬಂದ್‌ ಮಾಡಿದ್ದರಿಂದ ತೊಂದರೆಯಾಗಿತ್ತು. ಆದರೆ, ಸದ್ಯ ಜಿಮ್‌ ತೆರೆಯಲು ಸರ್ಕಾರ ಅನುಮತಿ ನೀಡಿದ್ದರಿಂದ ಸುರಕ್ಷತಾ ಕ್ರಮ ಅನುಸರಿಸುವ ಮೂಲಕ ಜಿಮ್‌ಗಳಲ್ಲಿ ವರ್ಕ್‌ಔಟ್‌ ಮಾಡಲಾಗುತ್ತಿದೆ. -ವಿನಯ ಪಾಟೀಲ, ಹಾವೇರಿ

 

-ವೀರೇಶ ಮಡ್ಲೂರ

ಟಾಪ್ ನ್ಯೂಸ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.