ಹುಲ್ಲುಗಡ್ಡೆ ಹಿಡಿದು ಜೀವ ಉಳಿಸಿಕೊಂಡ ಪೊಲೀಸ್‌ ಪೇದೆ!


Team Udayavani, Aug 15, 2019, 1:35 PM IST

15-Agust-29

ಹಾವೇರಿ: ಪೊಲೀಸ್‌ ಯಲ್ಲಪ್ಪನ ಹುಡುಕಾಟಕ್ಕೆ ಅಗ್ನಿಶಾಮಕ ಹಾಗೂ ಪೊಲೀಸ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು

ಹಾವೇರಿ: ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಪೊಲೀಸನೋರ್ವ ಬೈಕ್‌ ಸಹಿತ ಕೊಚ್ಚಿ ಹೋಗಿ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಕರ್ಜಗಿಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಯಲ್ಲಪ್ಪ ಕೊರವಿ ಜಲಕಂಟಕದಿಂದ ಪಾರಾಗಿ ಬಂದ ಪೊಲೀಸ್‌ ಪೇದೆ. ಇವರು ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಸಂತಿಸಿಗ್ಲಿ ಗ್ರಾಮದ ನಿವಾಸಿಯಾಗಿದ್ದು, ಕಾಗಿನೆಲೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ರಾತ್ರಿ ಕರ್ತವ್ಯ ಮುಗಿಸಿ ತಾಯಿಯನ್ನು ನೋಡಲು ಸಂತಿಶಿಗ್ಲಿಗೆ ಬೈಕ್‌ ಮೇಲೆ ಹೊರಟಿದ್ದರು. ಅವರೂರಿಗೆ ತೆರಳಲು ಕರ್ಜಗಿ-ಕಲಕೋಟಿ ಮಾರ್ಗ ಸಮೀಪವಾಗಿದ್ದರಿಂದ ಈ ಮಾರ್ಗದಲ್ಲಿ ಹೋಗಲು ನಿರ್ಧರಿಸಿದ್ದರು.

ಎರಡ್ಮೂರು ದಿನದಿಂದ ನೀರಿನ ಹರಿವು ಸಹ ಕಡಿಮೆಯಾಗಿತ್ತು. ಆಗ ಕೆಲ ವಾಹನಗಳು ಸಹ ಸಂಚಾರ ಆರಂಭಿಸಿದ್ದವು. ಇದನ್ನು ತಿಳಿದ ಯಲ್ಲಪ್ಪ ಕರ್ಜಗಿ ಮಾರ್ಗವಾಗಿಯೇ ಹೊರಟ್ಟಿದ್ದರು. ಆದರೆ, ಮಂಗಳವಾರ ರಾತ್ರಿ ನೀರಿನ ಹರಿವು ಏಕಾಏಕಿ ಹೆಚ್ಚಾಗಿತ್ತು. ರಾತ್ರಿ 10.30ರ ವೇಳೆಗೆ ಇವರು ಸೇತುವೆ ಮೇಲೆ ಹೋಗುತ್ತಿದ್ದಂತೆ ನೀರಿನ ಸೆಳೆತಕ್ಕೆ ಆಯತಪ್ಪಿ ಬೈಕ್‌ನಿಂದ ಕೆಳಗೆ ಬಿದ್ದರು.

ಬೈಕ್‌ ಮೇಲಿಂದ ಬೀಳುತ್ತಿದ್ದಂತೆ ಯಲ್ಲಪ್ಪ ವರದಾ ನದಿಯ ಪ್ರವಾಹದ ರಭಸಕ್ಕೆ ಸಿಲುಕಿ ಒಂದು ಕಿಮೀ ದೂರ ಹೋಗಿದ್ದಾರೆ. ವರದಾ ನದಿ ಅಕ್ಕಪಕ್ಕದ ಹೊಲದಲ್ಲೇ ಹರಿಯುತ್ತಿರುವುದರಿಂದ ಇವರು ಎದುರಿಗೆ ಸಿಕ್ಕ ದೊಡ್ಡ ಹುಲ್ಲುಗಡ್ಡೆ ಹಿಡಿದುಕೊಂಡು ಜೀವ ಉಳಿಸಿಕೊಂಡಿದ್ದಾರೆ.

ರೇನ್‌ಕೋಟ್, ಹೆಲ್ಮೆಟ್ ಧರಿಸಿಕೊಂಡಿದ್ದ ಯಲ್ಲಪ್ಪ, ಸುರಕ್ಷಿತವಾಗಿದ್ದ ಮೊಬೈಲ್ ತೆಗೆದು ಸಂಬಂಧಿಕರಿಗೆ ಕರೆ ಮಾಡಿ ನೀರಿನಲ್ಲಿ ಸಿಲುಕಿಕೊಂಡಿರುವ ವಿಷಯ ತಿಳಿಸಿದ್ದಾರೆ. ಸಂಬಂಧಿಕರು, ಪೊಲೀಸರು ರಾತ್ರಿ ವೇಳೆ ಹತ್ತಾರು ಬಾರಿ ಕರೆ ಮಾಡಿ ಇರುವ ಸ್ಥಳ ನಿಖರ ಮಾಡಿಕೊಂಡು ಅವರಿರುವ ಸ್ಥಳ ಪತ್ತೆ ಹಚ್ಚಿದರು. ವಿಷಯ ಹಬ್ಬುತ್ತಿದ್ದಂತೆ ಮಧ್ಯ ರಾತ್ರಿ ಅಕ್ಕಪಕ್ಕದ ಗ್ರಾಮದವರು ಕರ್ಜಗಿ, ಕಲಕೋಟಿ, ಮುಗದೂರು ಗ್ರಾಮದ ನೂರಾರು ಜನ ಸ್ಥಳಕ್ಕೆ ಧಾವಿಸಿದ್ದರು. ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ವಿಷಯ ತಿಳಿಸಿದ್ದರು. ಟಾರ್ಚ್‌ ಹಿಡಿದು ಪೋಲಿಸನ ಇರುವಿಕೆ ಪತ್ತೆ ಹಚ್ಚುವಲ್ಲಿ ಸ್ಥಳೀಯರು ಸಹ ಶ್ರಮಿಸಿದರು.

ತುರ್ತು ಸ್ಥಳಕ್ಕಾಗಮಿಸಿದ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್‌ ನೇತೃತ್ವದ ಪೊಲೀಸ್‌, ಅಗ್ನಿಶಾಮಕ ದಳದ ಸಿಬ್ಬಂದಿಗಳ ಎರಡು ತಂಡ ಕರ್ಜಗಿ ಹಾಗೂ ಕಲಕೋಟಿ ಭಾಗದಿಂದ ಹುಡುಕಾಟ ನಡೆಸಿದರು. ರಾತ್ರಿ 2.30ರ ವೇಳೆಗೆ ಹರಸಾಹಸ ಪಟ್ಟು ಪೊಲೀಸ್‌ ಯಲ್ಲಪ್ಪ ಅವರನ್ನು ರಕ್ಷಿಸುವಲ್ಲಿ ಯಶಸ್ಸಿಯಾದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.