ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಒತ್ತಾಯ

Team Udayavani, Jul 11, 2019, 1:44 PM IST

11-July-29

ಹಾವೇರಿ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹಾವೇರಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಬಾಕಿ ಇರುವ ಗೌರವಧನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಘಟಕದ ನೇತೃತ್ವದಲ್ಲಿ ಅಂಗನಾಡಿ ಕಾರ್ಯಕರ್ತೆಯರು ಬುಧವಾರ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿದರು.

ಸೇವಾ ಜೇಷ್ಠತೆ ಆಧಾರದಲ್ಲಿ ವೇತನ ಜಾರಿ ಮಾಡಬೇಕು. 18,000 ಕನಿಷ್ಠ ವೇತನ ಜಾರಿ ಮಾಡಬೇಕು. ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಗೋವಾ, ಪಾಂಡಿಚೇರಿ, ಕೇರಳ ಮುಂತಾದ ರಾಜ್ಯಗಳಲ್ಲಿ 11ರಿಂದ 12 ಸಾವಿರ ವೇತನ ಹೆಚ್ಚಳವಾಗಿದೆ. ಆದ್ದರಿಂದ ರಾಜ್ಯದಲ್ಲಿಯೂ ಕೂಡಾ ಗೌರವಧನ ಹೆಚ್ಚಳವಾಗಬೇಕು ಮತ್ತು ಸೇವಾ ಜೇಷ್ಠತೆಯ ಆಧಾರದಲ್ಲಿ ವೇತನವನ್ನು ನಿಗದಿಪಡಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಿಐಟಿಯು ಜಿಲ್ಲಾ ಸಂಚಾಲಕ ವಿನಾಯಕ ಕುರುಬರ ಮಾತನಾಡಿ, ರಾಜ್ಯದ ಮಾನವ ಸಂಪನ್ಮೂಲಗಳ ಬೆಳವಣಿಗೆಗೆ ಅಂಗನವಾಡಿಗಳು ಪೂರಕವಾಗಿ ಕಾರ್ಯನಿರ್ವಹಿಸುತ್ತಿವೆ. ಇಂತಹ ಯೋಜನೆಯನ್ನು ಸಬಲೀಕರಿಸುವ ಬದಲಿಗೆ ಸರ್ಕಾರಿ ಶಾಲೆಗಳಲ್ಲಿ ದಾಖಾಲಾತಿಯನ್ನು ಹೆಚ್ಚಿಸಲು ಅಂಗನವಾಡಿ ಕೇಂದ್ರದಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಯನ್ನು ಸರ್ಕಾರಿ ಶಾಲೆಗಳು ನಿರ್ವಹಿಸುವುದು ಪ್ರಾಯೋಗಿಕವಲ್ಲ. ಆದ್ದರಿಂದ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಅಂಗನವಾಡಿ ನೌಕರರ ಬೇಡಿಕೆಗಳ ಕುರಿತು ಹಲವು ಬಾರಿ ಮನವಿ ಪತ್ರಗಳು, ಹೋರಾಟಗಳು, ಜಂಟೀ ಸಭೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಪ್ರಮುಖ ಬೇಡಿಕೆಗಳಿಗೆ ಸೂಕ್ತ ಪರಿಹಾರ ಸಿಗದಿರುವುದು ದುರಾದೃಷ್ಟಕರವಾಗಿದೆ ಎಂದರು.

ಅಂಗನವಾಡಿ ನೌಕರರ ಸಂಘದ ಮುಖಂಡೆ ಉಮಾ ಪಾಟೀಲ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಎಲ್ಲ ರೀತಿಯ ಗುಣಾತ್ಮಕ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಮಾತೃಪೂರ್ಣ ಯೋಜನೆಯ ನಂತರ ಸಹಾಯಕಿಯರ ಕೆಲಸ ದುಪ್ಪಟ್ಟು ಆಗಿರುವುದರಿಂದ ಕಾರ್ಯಕರ್ತೆಯರಿಗೆ ನೀಡುವ ಗೌರವಧನದ ಶೇ.75ರಷ್ಟು ಸಹಾಯಕಿಯರಿಗೂ ಕೊಡಬೇಕು. ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಸೂಚನೆಯನ್ನು ರಾಜ್ಯ ಸರ್ಕಾರ ಒಪ್ಪಬಾರದು ಎಂದು ಒತ್ತಾಯಿಸಿದರು.

ಅಂಗನವಾಡಿ ನೌಕರರ ಸಂಘದ ಮುಖಂಡರಾದ ಹೇಮಾ ಆಸಾದಿ, ಹೇಮಾವತಿ ಎಲಿ, ಗೌರಮ್ಮ ನಾಯ್ಕರ, ಪರಮೇಶ್ವರಿ ಮಧ್ಯಾಹ್ನದ, ಶಶಿಕಲಾ ಪುರಾಣಿಕಮಠ, ಕವಿತಾ ನಾಡಗೇರ, ಜ್ಯೋತಿ ಕದರಮಂಡಲಗಿ, ಮಲ್ಲಮ್ಮ ಛಲವಾದಿ, ಸಿಐಟಿಯು ಮುಖಂಡರಾದ ಮಹಾಂತೇಶ ಎಲಿ, ವಿ.ಕೆ. ಬಾಳಿಕಾಯಿ, ಎಸ್‌ಎಫ್‌ಐ ಮುಖಂಡ ಬಸವರಾಜ ಭೋವಿ, ಸಾಮಾಜಿಕ ಪರಿವರ್ತನಾ ಜನಾದೋಲನದ ಸಂಚಾಲಕಿ ಹಸೀನಾ ಹೇಡಿಯಾಲ, ಡಿವೈಎಫ್‌ಐ ಮುಖಂಡ ಮುಕ್ತಾನಂದ ಹಿರೇಮನಿ ಮುಂತಾದವರು ಇದ್ದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.